25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ರಂಗಕಲೆಗಳ ಸ್ವರೂಪ ಕಾರ್ಯಕ್ರಮ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯ ಉಜಿರೆ ಇಲ್ಲಿ ರಂಗಕಲೆಗಳ ಸ್ವರೂಪ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಶಿಕ್ಷಕ ಕೇವಲ ಶಿಕ್ಷಣ ನೀಡುವ ಶಿಕ್ಷಕನಾಗಬಾರದು, ಬದಲು ಎಲ್ಲಾ ಲಘುತನಗಳನ್ನು ದಾಟಿ ಗುರುವಾಗಬೇಕು. ಮಕ್ಕಳ ಜೀವನದಲ್ಲಿನ ದಾರಿ ನೇರಗೊಳಿಸುವ ಗುರುವು ಆಗಬೇಕು. ಜಗತ್ತಿನ ಗುರುತನಗಳ ಸ್ವೀಕರಿಸುವ ಲಘುತನ ಎಲ್ಲಾ ಶಿಕ್ಷಕರಲ್ಲಿರಬೇಕು ಎಂದು ಓದು, ಬರಹ, ಹಾಡು, ಸುತ್ತಾಟ, ಕಲೆ ಹಾಗೂ ರಂಗಭೂಮಿ ಹೀಗೆ ನಾನಾ ಕ್ಷೇತ್ರದಲ್ಲಿ ಮೇಲುಗೈ ಸಾಧಿಸಿರುವ ರಂಗಕಲಾವಿದ ನಾದ ಎಂಬ ನಾಮಾಂಕಿತರಾದ ಭಾಸ್ಕರ್ ಮಣಿನಾಲ್ಕೂರು ಮಾತನಾಡುತ್ತಾ ಕಲಿಸುವ ಗುರು ಸಣ್ಣವನಾದರೆ, ಕಲಿಯುವ ಶಿಷ್ಯನು ಸಣ್ಣತನಕ್ಕೆ ಸೀಮಿತನಾಗುತ್ತಾನೆ. ಈ ಜಗತ್ತಿನಲ್ಲಿ ಕಲಿಕೆಯು ಮುಗಿಯುವಂತಹದಲ್ಲ. ಗುರುವಾದವನು ಸೋತ ಮಕ್ಕಳ ಜೊತೆ ನಿಲ್ಲಬೇಕು ಎಂದು ತಮ್ಮ ಸುಮಧುರ ಗಾಯನ ಹಾಗೂ ಎಕ್ತಾರಿಯ ಗಾಯನದ ಮೂಲಕ ತಿಳಿಸಿಕೊಟ್ಟರು.


ಕಾರ್ಯಕ್ರಮದ ಅಧ್ಯಕ್ಷ ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಸಲ್ಡಾನ ಮಾತನಾಡಿ ಇತ್ತೀಚಿನ ಕಾಲದಲ್ಲಿ ಗುರುವನ್ನು ಕೇಳಿ ಕಲಿಯುವವರೇ ಹೆಚ್ಚು ಅದರ ಬದಲು ಗುರುವನ್ನು ನೋಡಿ ಕಲಿಯುವ ಹಂತಕ್ಕೆ ಗುರು ಬೆಳೆಯಬೇಕು. ಶಿಕ್ಷಕರು ಕೇವಲ ಆದರ್ಶಗಳನ್ನು ಕಲಿಸುವುದು ಮಾತ್ರವಲ್ಲದೆ ಅದನ್ನು ತಮ್ಮ ಜೀವನದಲ್ಲಿ ಅನುಸರಿಸಬೇಕು ಎಂದರು.


ಕಾರ್ಯಕ್ರಮದಲ್ಲಿ ಎಸ್.ಡಿ.ಎಂ. ಕಾಲೇಜಿನ ಕನ್ನಡ ವಿಭಾಗದ ಉಪನ್ಯಾಸಕ ರಾಜಶೇಖರ್ ಹಳೆಮನೆ, ಬಿ.ಎಡ್. ಹಾಗೂ ಡಿ.ಎಡ್. ಕಾಲೇಜಿನ ಉಪನ್ಯಾಸಕ ವೃಂದ ಮತ್ತು ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು. ದ್ವಿತೀಯ ವರ್ಷದ ಬಿ.ಎಡ್. ಪ್ರಶಿಕ್ಷಣಾರ್ಥಿ ತೇಜಾಕ್ಷಿ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಕುತ್ಲೂರು: ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಪದಾಧಿಕಾರಿಗಳ ಆಯ್ಕೆ

Suddi Udaya

ನಾಪತ್ತೆಯಾದ ಮಾಲಾಡಿ ನಿವಾಸಿ, ಬಂಟ್ವಾಳ ಅಮ್ಟಾಡಿ ಗ್ರಾ.ಪಂ. ಕಾರ್ಯದರ್ಶಿ ಲಕ್ಷ್ಮೀನಾರಾಯಣ; ನಾಲ್ಕು ದಿನಗಳ ಬಳಿಕ ಶವ ಪಟ್ರಮೆ ನದಿಯಲ್ಲಿ ಪತ್ತೆ: ಮೃತದೇಹವನ್ನು ಮೇಲೆತ್ತಿದ ಶೌರ್ಯ ವಿಪತ್ತು ನಿವ೯ಹಣಾ ತಂಡ

Suddi Udaya

ಫೆಂಗಲ್ ಚಂಡಮಾರುತ: ಡಿ.02 ರಿಂದ 03 ರವರೆಗೆ ದ.ಕ. ಜಿಲ್ಲೆಯಾದ್ಯಂತ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆ

Suddi Udaya

ಏ.16-22: ಶ್ರೀ ಧ.ಮಂ. ಯೋಗ – ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ನಿಂದ ಕಳಸದಲ್ಲಿ 46ನೇ ಬೃಹತ್ ಬೇಸಿಗೆ ಯೋಗೋತ್ಸವ

Suddi Udaya

ಉಜಿರೆ ಎಸ್.ಡಿ.ಎಂ ಸಿ.ಬಿ.ಎಸ್.ಇ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪನಾ ದಿನಾಚರಣೆ ಮತ್ತು ಧ್ವಜ ದಿನಾಚರಣೆ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ವತಿಯಿಂದ ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹಕೂಟ

Suddi Udaya
error: Content is protected !!