September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ರಂಗಕಲೆಗಳ ಸ್ವರೂಪ ಕಾರ್ಯಕ್ರಮ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯ ಉಜಿರೆ ಇಲ್ಲಿ ರಂಗಕಲೆಗಳ ಸ್ವರೂಪ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಶಿಕ್ಷಕ ಕೇವಲ ಶಿಕ್ಷಣ ನೀಡುವ ಶಿಕ್ಷಕನಾಗಬಾರದು, ಬದಲು ಎಲ್ಲಾ ಲಘುತನಗಳನ್ನು ದಾಟಿ ಗುರುವಾಗಬೇಕು. ಮಕ್ಕಳ ಜೀವನದಲ್ಲಿನ ದಾರಿ ನೇರಗೊಳಿಸುವ ಗುರುವು ಆಗಬೇಕು. ಜಗತ್ತಿನ ಗುರುತನಗಳ ಸ್ವೀಕರಿಸುವ ಲಘುತನ ಎಲ್ಲಾ ಶಿಕ್ಷಕರಲ್ಲಿರಬೇಕು ಎಂದು ಓದು, ಬರಹ, ಹಾಡು, ಸುತ್ತಾಟ, ಕಲೆ ಹಾಗೂ ರಂಗಭೂಮಿ ಹೀಗೆ ನಾನಾ ಕ್ಷೇತ್ರದಲ್ಲಿ ಮೇಲುಗೈ ಸಾಧಿಸಿರುವ ರಂಗಕಲಾವಿದ ನಾದ ಎಂಬ ನಾಮಾಂಕಿತರಾದ ಭಾಸ್ಕರ್ ಮಣಿನಾಲ್ಕೂರು ಮಾತನಾಡುತ್ತಾ ಕಲಿಸುವ ಗುರು ಸಣ್ಣವನಾದರೆ, ಕಲಿಯುವ ಶಿಷ್ಯನು ಸಣ್ಣತನಕ್ಕೆ ಸೀಮಿತನಾಗುತ್ತಾನೆ. ಈ ಜಗತ್ತಿನಲ್ಲಿ ಕಲಿಕೆಯು ಮುಗಿಯುವಂತಹದಲ್ಲ. ಗುರುವಾದವನು ಸೋತ ಮಕ್ಕಳ ಜೊತೆ ನಿಲ್ಲಬೇಕು ಎಂದು ತಮ್ಮ ಸುಮಧುರ ಗಾಯನ ಹಾಗೂ ಎಕ್ತಾರಿಯ ಗಾಯನದ ಮೂಲಕ ತಿಳಿಸಿಕೊಟ್ಟರು.


ಕಾರ್ಯಕ್ರಮದ ಅಧ್ಯಕ್ಷ ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಸಲ್ಡಾನ ಮಾತನಾಡಿ ಇತ್ತೀಚಿನ ಕಾಲದಲ್ಲಿ ಗುರುವನ್ನು ಕೇಳಿ ಕಲಿಯುವವರೇ ಹೆಚ್ಚು ಅದರ ಬದಲು ಗುರುವನ್ನು ನೋಡಿ ಕಲಿಯುವ ಹಂತಕ್ಕೆ ಗುರು ಬೆಳೆಯಬೇಕು. ಶಿಕ್ಷಕರು ಕೇವಲ ಆದರ್ಶಗಳನ್ನು ಕಲಿಸುವುದು ಮಾತ್ರವಲ್ಲದೆ ಅದನ್ನು ತಮ್ಮ ಜೀವನದಲ್ಲಿ ಅನುಸರಿಸಬೇಕು ಎಂದರು.


ಕಾರ್ಯಕ್ರಮದಲ್ಲಿ ಎಸ್.ಡಿ.ಎಂ. ಕಾಲೇಜಿನ ಕನ್ನಡ ವಿಭಾಗದ ಉಪನ್ಯಾಸಕ ರಾಜಶೇಖರ್ ಹಳೆಮನೆ, ಬಿ.ಎಡ್. ಹಾಗೂ ಡಿ.ಎಡ್. ಕಾಲೇಜಿನ ಉಪನ್ಯಾಸಕ ವೃಂದ ಮತ್ತು ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು. ದ್ವಿತೀಯ ವರ್ಷದ ಬಿ.ಎಡ್. ಪ್ರಶಿಕ್ಷಣಾರ್ಥಿ ತೇಜಾಕ್ಷಿ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಲೋಕೋಪಯೋಗಿ ಸಚಿವ ಜಾರಕಿಹೊಳಿ ಇಂದು ರಾತ್ರಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಜ.22: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಶ್ರೀ ರಾಮ ತಾರಕ ಜಪ ಯಜ್ಞ: ಆಮಂತ್ರಣ ಪತ್ರ ಬಿಡುಗಡೆ

Suddi Udaya

ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ವತಿಯಿಂದ 20ನೇ ವಾರ್ಷಿಕೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya

ಜೂ.18: ಆರಂಬೋಡಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಬೃಹತ್ ವೈದ್ಯಕೀಯ ಶಿಬಿರ ಹಾಗೂ ಉಚಿತ ದಂತ ವೈದ್ಯಕೀಯ ಶಿಬಿರ

Suddi Udaya

ಬಂಗಾಡಿ ಅರಮನೆಯ ಹಿರಿಯರಾದ ಶತಾಯುಷಿ ರವಿರಾಜ್ ಬಲ್ಲಾಳ್ ವಿಧಿವಶ

Suddi Udaya

ಹಿಂದೂ ಸಂಗಮ ಆಯೋಜನಾ ಸಮಿತಿ ಉರುವಾಲು, ಕಣಿಯೂರು, ಬಂದಾರು ಗ್ರಾಮಗಳನ್ನೊಳಗೊಂಡ ಬಂದಾರು ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ

Suddi Udaya
error: Content is protected !!