22.3 C
ಪುತ್ತೂರು, ಬೆಳ್ತಂಗಡಿ
June 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್‌ಡಿಎಂ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸೈಬರ್ ಅಪರಾಧಗಳ ತಡೆಗಟ್ಟುವಿಕೆ ಕುರಿತು ಮಾಹಿತಿ ಕಾರ್ಯಾಗಾರ

ಉಜಿರೆ: ಎಸ್‌ಡಿಎಂ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಸೈಬರ್ ಅಪರಾಧಗಳ ತಡೆಗಟ್ಟುವಿಕೆ ಕುರಿತು ಮಾಹಿತಿ ಕಾರ್ಯಾಗಾರ ಡಿ.30ರಂದು ನಡೆಯಿತು.

ಕಾಲೇಜಿನ ವಿದ್ಯಾರ್ಥಿನಿಯರು ಹಾಗೂ ಮಂಜುಶ್ರೀ ಪ್ರಿಂಟರ್ಸ್ ನೌಕರರಿಗಾಗಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಮಂಗಳೂರಿನ ಸಿಇಎನ್ (ಸೈಬರ್ ಎಕನಾಮಿಕ್ಸ್ ಆಂಡ್ ನಾರ್ಕೋಟಿಕ್ಸ್ ಕ್ರೈಮ್ಸ್) ಪೊಲೀಸ್ ಠಾಣಾ ಡಿ.ವೈ.ಎಸ್.ಪಿ. ಮಂಜುನಾಥ್ ಆರ್.ಜಿ. ಉದ್ಘಾಟಿಸಿ ಮಾತನಾಡಿ, ಸೈಬರ್ ಅಪರಾಧಗಳಿಗೆ ಯುವ ಜನಾಂಗ ಬಲಿಯಾಗುತ್ತಿರುವ ಕುರಿತು ಕಳವಳ ವ್ಯಕ್ತಪಡಿಸಿದರು.

ಸೈಬರ್ ತೊಂದರೆಗೆ ಒಳಗಾದಾಗ ಧೃತಿಗೆಡದೆ, ಧೈರ್ಯದಿಂದ ಎದುರಿಸುವ ಸಾಮರ್ಥ್ಯ ಬೆಳೆಸಿಕೊಂಡು ನಡೆದ ಅಪರಾಧದ ಕುರಿತ ಮಾಹಿತಿಯನ್ನು, ದಾಖಲೆಗಳನ್ನು ಜಿಲ್ಲಾ ಅಪರಾಧ ವಿಭಾಗಕ್ಕೆ ನೀಡಬೇಕು ಎಂದು ತಿಳಿಸಿದರು.

ಸಬ್ ಇನ್ಸ್‌ಪೆಕ್ಟರ್ ಮಂಜುನಾಥ್ ಡಿ. ಮಾತನಾಡಿ, ವಿವಿಧ ಸೈಬರ್ ಅಪರಾಧ ಪ್ರಕರಣಗಳ ಬಗ್ಗೆ ವಿವರವಾದ ಮಾಹಿತಿಗಳನ್ನು ವಿವರವಾಗಿ ತಿಳಿಸಿದರು ಹಾಗೂ ಸೈಬರ್ ವಂಚನೆಗೆ ಒಳಗಾದಾಗ (೧೯೩೦ ಅಥವಾ ೧೧೨ ಗೆ ಕರೆ ಮಾಡಿದಾಗ ೫ ನಿಮಿಷದ ಒಳಗೆ ಹತ್ತಿರದ ಪೋಲೀಸರ ಬರುವು ಕುರಿತು ಹಾಗೂ ಅಲ್ಲಿಯವರೆಗೆ) ಕೈಗೊಳ್ಳಬೇಕಾದ ಮುಂಜಾಗೃತಾ ಕ್ರಮ ಕುರಿತು ಮಾಹಿತಿ ನೀಡಿದರು.

ಕಾಲೇಜಿನ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್, ರೋಟರಿ ಕ್ಲಬ್ ಕಾರ್ಯದರ್ಶಿ ಸಂದೇಶ್ ರಾವ್, ಮಂಜುಶ್ರೀ ಪ್ರಿಂಟರ್ಸ್‌ನ ವ್ಯವಸ್ಥಾಪಕ ಶೇಖರ್ ಟಿ. ಉಪಸ್ಥಿತರಿದ್ದರು.

ಸಹಾಯಕ ವ್ಯವಸ್ಥಾಪಕ ರವಿ ಪರಕ್ಕಜೆ ಕಾರ್ಯಕ್ರಮ ನಿರೂಪಿಸಿದರು.

Related posts

ಕಲ್ಮಂಜ: ಉಳ್ಳಾಯ ಉಳ್ಳಾಲ್ತಿ ದೈವಸ್ಥಾನ ಪರಾರಿ ಮಜಲ್ ಗುಂಡ ಇದರ ನೂತನ ದೇಗುಲದ ಶಿಲಾನ್ಯಾಸ

Suddi Udaya

ಪಟ್ರಮೆ: ಕೂಡಿಗೆ ಸೇತುವೆ ಅಡಿಯಲ್ಲಿ ಯುವಕನ ಶವ ಪತ್ತೆ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಚಂದು ಲಾಯಿಲ ಹಾಗೂ ಬಿ. ರಾಮಣ್ಣ ಶೆಟ್ಟಿ ಮಾಲಾಡಿ ಇವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

Suddi Udaya

ಕಂಪನಿ ಸೆಕ್ರೆಟರಿ ಪ್ರವೇಶ ಪರೀಕ್ಷೆಯಲ್ಲಿ ಉಜಿರೆ ಶ್ರೀ ಧ.ಮಂ. ಪ.ಪೂ ಕಾಲೇಜಿನ ಏಳು ವಿದ್ಯಾರ್ಥಿಗಳು ತೇರ್ಗಡೆ

Suddi Udaya

ಪಣಕಜೆ ಮುಹಿಯ್ಯದ್ದೀನ್ ಜುಮ್ಮಾ ಮಸೀದಿಯ ಮಹಾಸಭೆ: ನೂತನ ಅಧ್ಯಕ್ಷರಾಗಿ ಡಾ. ನಿಯಾಝ್, ಪ್ರಧಾನ ಕಾರ್ಯದರ್ಶಿಯಾಗಿ ಬಿ ಯಂ ಅಶ್ರಫ್

Suddi Udaya
error: Content is protected !!