July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್‌ಡಿಎಂ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸೈಬರ್ ಅಪರಾಧಗಳ ತಡೆಗಟ್ಟುವಿಕೆ ಕುರಿತು ಮಾಹಿತಿ ಕಾರ್ಯಾಗಾರ

ಉಜಿರೆ: ಎಸ್‌ಡಿಎಂ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಸೈಬರ್ ಅಪರಾಧಗಳ ತಡೆಗಟ್ಟುವಿಕೆ ಕುರಿತು ಮಾಹಿತಿ ಕಾರ್ಯಾಗಾರ ಡಿ.30ರಂದು ನಡೆಯಿತು.

ಕಾಲೇಜಿನ ವಿದ್ಯಾರ್ಥಿನಿಯರು ಹಾಗೂ ಮಂಜುಶ್ರೀ ಪ್ರಿಂಟರ್ಸ್ ನೌಕರರಿಗಾಗಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಮಂಗಳೂರಿನ ಸಿಇಎನ್ (ಸೈಬರ್ ಎಕನಾಮಿಕ್ಸ್ ಆಂಡ್ ನಾರ್ಕೋಟಿಕ್ಸ್ ಕ್ರೈಮ್ಸ್) ಪೊಲೀಸ್ ಠಾಣಾ ಡಿ.ವೈ.ಎಸ್.ಪಿ. ಮಂಜುನಾಥ್ ಆರ್.ಜಿ. ಉದ್ಘಾಟಿಸಿ ಮಾತನಾಡಿ, ಸೈಬರ್ ಅಪರಾಧಗಳಿಗೆ ಯುವ ಜನಾಂಗ ಬಲಿಯಾಗುತ್ತಿರುವ ಕುರಿತು ಕಳವಳ ವ್ಯಕ್ತಪಡಿಸಿದರು.

ಸೈಬರ್ ತೊಂದರೆಗೆ ಒಳಗಾದಾಗ ಧೃತಿಗೆಡದೆ, ಧೈರ್ಯದಿಂದ ಎದುರಿಸುವ ಸಾಮರ್ಥ್ಯ ಬೆಳೆಸಿಕೊಂಡು ನಡೆದ ಅಪರಾಧದ ಕುರಿತ ಮಾಹಿತಿಯನ್ನು, ದಾಖಲೆಗಳನ್ನು ಜಿಲ್ಲಾ ಅಪರಾಧ ವಿಭಾಗಕ್ಕೆ ನೀಡಬೇಕು ಎಂದು ತಿಳಿಸಿದರು.

ಸಬ್ ಇನ್ಸ್‌ಪೆಕ್ಟರ್ ಮಂಜುನಾಥ್ ಡಿ. ಮಾತನಾಡಿ, ವಿವಿಧ ಸೈಬರ್ ಅಪರಾಧ ಪ್ರಕರಣಗಳ ಬಗ್ಗೆ ವಿವರವಾದ ಮಾಹಿತಿಗಳನ್ನು ವಿವರವಾಗಿ ತಿಳಿಸಿದರು ಹಾಗೂ ಸೈಬರ್ ವಂಚನೆಗೆ ಒಳಗಾದಾಗ (೧೯೩೦ ಅಥವಾ ೧೧೨ ಗೆ ಕರೆ ಮಾಡಿದಾಗ ೫ ನಿಮಿಷದ ಒಳಗೆ ಹತ್ತಿರದ ಪೋಲೀಸರ ಬರುವು ಕುರಿತು ಹಾಗೂ ಅಲ್ಲಿಯವರೆಗೆ) ಕೈಗೊಳ್ಳಬೇಕಾದ ಮುಂಜಾಗೃತಾ ಕ್ರಮ ಕುರಿತು ಮಾಹಿತಿ ನೀಡಿದರು.

ಕಾಲೇಜಿನ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್, ರೋಟರಿ ಕ್ಲಬ್ ಕಾರ್ಯದರ್ಶಿ ಸಂದೇಶ್ ರಾವ್, ಮಂಜುಶ್ರೀ ಪ್ರಿಂಟರ್ಸ್‌ನ ವ್ಯವಸ್ಥಾಪಕ ಶೇಖರ್ ಟಿ. ಉಪಸ್ಥಿತರಿದ್ದರು.

ಸಹಾಯಕ ವ್ಯವಸ್ಥಾಪಕ ರವಿ ಪರಕ್ಕಜೆ ಕಾರ್ಯಕ್ರಮ ನಿರೂಪಿಸಿದರು.

Related posts

ಇತಿಹಾಸ ಪ್ರಸಿದ್ದ ನಿಡಿಗಲ್ ಸಿರಿಜಾತ್ರಾ ಮಹೋತ್ಸವದ ಅಧ್ಯಕ್ಷರಾಗಿ ಯಶೋಧರ ಗೌಡ ಗುರಿಪಳ್ಳ ಆಯ್ಕೆ

Suddi Udaya

ವಿಧಾನಪರಿಷತ್ ಉಪಚುನಾವಣೆ: ಮತದಾರರ ಪಟ್ಟಿಯಲ್ಲಿ ವಿ.ಪ ಸದಸ್ಯ ಪ್ರತಾಪ್ ಸಿಂಹ ನಾಯಕ್ ರವರಿಗೆ ಮತದಾನದ ಅವಕಾಶವಿಲ್ಲ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಒಂದು ಕ್ವಿಂಟಾಲ್ ಗಾಂಜಾ ವಶಪಡಿಸಿದ ಪ್ರಕರಣ: ಕಕ್ಕಿಂಜೆಯ ಇಬ್ಬರು ಸೇರಿದಂತೆ ಮೂವರು ಆರೋಪಿಗಳ ಬಂಧನ

Suddi Udaya

ಆಳ್ವಾಸ್ ಕ್ರಿಸ್ಮಸ್ ಸಂಭ್ರಮ: ಸಿಯೋನ್ ಆಶ್ರಮದ ಆಡಳಿತ ನಿರ್ದೇಶಕ ಡಾ.ಯು.ಸಿ.ಪೌಲೋಸ್ ಮತ್ತು ಶ್ರೀಮತಿ ಮೇರಿ ಯು.ಪಿ. ದಂಪತಿಗೆ ಸನ್ಮಾನ

Suddi Udaya

ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಉಜಿರೆ ಮುಂಡತ್ತೋಡಿ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನ ಚಾವಡಿಯಲ್ಲಿ ಶ್ರಮದಾನ

Suddi Udaya
error: Content is protected !!