July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ

ನಾವೂರು: ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ನಿಂದ ಧನುರ್ಮಾಸದ 16ನೇ ದಿನವಾದ ಇಂದು(ಡಿ.31) ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಕ್ಯಾಲೆಂಡರ್ ವರ್ಷದ ಅಂತಿಮ ದಿನದ ಪ್ರಯುಕ್ತ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ ನಡೆಯಿತು.


ಈ ಸಂದರ್ಭದಲ್ಲಿ ದೀಪ ಪ್ರಜ್ವಲನೆಯನ್ನು ಶಾಸಕ ಹರೀಶ್ ಪೂಂಜ , ಅಳದಂಗಡಿ ವೈದ್ಯರಾದ ಡಾ| ಎನ್. ಎಂ. ತುಳುಪುಳೆ, ಹಾಗೂ ಧರ್ಮಸ್ಥಳದ ಭುಜಬಲಿಯವರು ನೆರವೇರಿಸಿಕೊಟ್ಟರು.

ಅರ್ಚಕರಾದ ವೇ| ಮೂ| ದಿನೇಶ್ ಭಟ್ ಧಾರ್ಮಿಕ ವಿಧಿಗಳನ್ನು ನಡೆಸಿಕೊಟ್ಟರು. ಕು।ಸಿದ್ಧಿ ಚೇರ್ಕೂಡ್ಲು ಭಕ್ತಿ ಸ್ತುತಿಯನ್ನು ನಡೆಸಿಕೊಟ್ಟರು. ಹರೀಶ್ ಪೂಂಜ ಇಲ್ಲಿನ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆಯನ್ನು ಸೂಚಿಸಿ ಇಂತಹ ಕಾರ್ಯಗಳು ಎಲ್ಲಾ ಶ್ರದ್ಧಾಕೇಂದ್ರಗಳಿಗೂ ವಿಸ್ತರಿಸುವಂತಾಗಲಿ ಎಂದು ಹಾರೈಸಿದರು.

ದೇವಸ್ಥಾನ ಟ್ರಸ್ಟ್ ನ ಅಧ್ಯಕ್ಷ ದ ಹರೀಶ್ ಸಾಲ್ಯಾನ್ ಹಾಗೂ ಟ್ರಸ್ಟ್ ನ ಸದಸ್ಯರು ಹಾಗೂ ಭಗವದ್ಭಕ್ತರು ಭಾಗವಹಿಸಿದರು.
ಸಿಂಡಿಕೇಟ್ ಬ್ಯಾಂಕ್ ನ ನಿವೃತ್ತ ಹಿರಿಯ ಪ್ರಬಂಧಕರಾದ ಎಸ್ ಎನ್ ಭಟ್, ನಾವೂರಿನ ವೈದ್ಯರಾದ ಡಾ। ಪ್ರದೀಪ್ ಉಪಸ್ಥಿತರಿದ್ದರು.

ಪ್ರಧಾನ ಕಾರ್ಯದರ್ಶಿಗಳಾದ ಧರ್ಣಪ್ಪ ಮೂಲ್ಯ ಧನ್ಯವಾದವನ್ನಿತ್ತರು.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಶ್ರೀ ದೇಯಿ ಬೈದೆದಿ ಆಯುರ್ವೇದಿಕ್ ಕೇಂದ್ರದ ಕಾಮಗಾರಿಗೆ ವಿಶ್ವದಾದ್ಯಂತ ಇರುವ ಸಮಾಜ ಬಾಂಧವರು ಕೈಜೋಡಿಸಬೇಕು: ರಾಜಶೇಖರ್ ಕೋಟ್ಯಾನ್

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಪುದುವೆಟ್ಟು ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಮೀಸಲಾತಿ ಪ್ರಕಟ

Suddi Udaya

ಬೆಳ್ತಂಗಡಿ: ಬೃಹತ್ ಕಾರ್ಮಿಕ ಜಾಗೃತಿ ಆಂದೋಲನವನ್ನು ಆಯೋಜಿಸುವ ಕುರಿತು ಸಮಾಲೋಚನ ಸಭೆ

Suddi Udaya

ಮೈರೋಳ್ತಡ್ಕ ಸ.ಉ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ಸಿಗೆ ಅಡ್ಡ ಬಂದ ಒಂಟಿ ಸಲಗ

Suddi Udaya
error: Content is protected !!