23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ

ನಾವೂರು: ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ನಿಂದ ಧನುರ್ಮಾಸದ 16ನೇ ದಿನವಾದ ಇಂದು(ಡಿ.31) ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಕ್ಯಾಲೆಂಡರ್ ವರ್ಷದ ಅಂತಿಮ ದಿನದ ಪ್ರಯುಕ್ತ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ ನಡೆಯಿತು.


ಈ ಸಂದರ್ಭದಲ್ಲಿ ದೀಪ ಪ್ರಜ್ವಲನೆಯನ್ನು ಶಾಸಕ ಹರೀಶ್ ಪೂಂಜ , ಅಳದಂಗಡಿ ವೈದ್ಯರಾದ ಡಾ| ಎನ್. ಎಂ. ತುಳುಪುಳೆ, ಹಾಗೂ ಧರ್ಮಸ್ಥಳದ ಭುಜಬಲಿಯವರು ನೆರವೇರಿಸಿಕೊಟ್ಟರು.

ಅರ್ಚಕರಾದ ವೇ| ಮೂ| ದಿನೇಶ್ ಭಟ್ ಧಾರ್ಮಿಕ ವಿಧಿಗಳನ್ನು ನಡೆಸಿಕೊಟ್ಟರು. ಕು।ಸಿದ್ಧಿ ಚೇರ್ಕೂಡ್ಲು ಭಕ್ತಿ ಸ್ತುತಿಯನ್ನು ನಡೆಸಿಕೊಟ್ಟರು. ಹರೀಶ್ ಪೂಂಜ ಇಲ್ಲಿನ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆಯನ್ನು ಸೂಚಿಸಿ ಇಂತಹ ಕಾರ್ಯಗಳು ಎಲ್ಲಾ ಶ್ರದ್ಧಾಕೇಂದ್ರಗಳಿಗೂ ವಿಸ್ತರಿಸುವಂತಾಗಲಿ ಎಂದು ಹಾರೈಸಿದರು.

ದೇವಸ್ಥಾನ ಟ್ರಸ್ಟ್ ನ ಅಧ್ಯಕ್ಷ ದ ಹರೀಶ್ ಸಾಲ್ಯಾನ್ ಹಾಗೂ ಟ್ರಸ್ಟ್ ನ ಸದಸ್ಯರು ಹಾಗೂ ಭಗವದ್ಭಕ್ತರು ಭಾಗವಹಿಸಿದರು.
ಸಿಂಡಿಕೇಟ್ ಬ್ಯಾಂಕ್ ನ ನಿವೃತ್ತ ಹಿರಿಯ ಪ್ರಬಂಧಕರಾದ ಎಸ್ ಎನ್ ಭಟ್, ನಾವೂರಿನ ವೈದ್ಯರಾದ ಡಾ। ಪ್ರದೀಪ್ ಉಪಸ್ಥಿತರಿದ್ದರು.

ಪ್ರಧಾನ ಕಾರ್ಯದರ್ಶಿಗಳಾದ ಧರ್ಣಪ್ಪ ಮೂಲ್ಯ ಧನ್ಯವಾದವನ್ನಿತ್ತರು.

Related posts

ಕಾಯರ್ತಡ್ಕ ಪ್ರೌಢಶಾಲೆಗೆ ಶೌಚಾಲಯ ಹಸ್ತಾಂತರ

Suddi Udaya

ಮೂಡುಕೋಡಿ ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಕಲ್ಮಂಜ ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ನೆರಿಯ ಸೆಂಟ್ ತೋಮಸ್ ಬ್ಯಾಂಡ್ ಸೆಟ್ ಮಾಸ್ಟರ್ ಬೇಬಿ ತಚ್ಚಾಟ್ ಹೃದಯಾಘಾತದಿಂದ ನಿಧನ

Suddi Udaya

ಕುತ್ಲೂರು ಪ್ರಕರಣ ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಪೋಕ್ಸೋ ಕಾಯಿದೆ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!