September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ

ನಾವೂರು: ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ನಿಂದ ಧನುರ್ಮಾಸದ 16ನೇ ದಿನವಾದ ಇಂದು(ಡಿ.31) ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಕ್ಯಾಲೆಂಡರ್ ವರ್ಷದ ಅಂತಿಮ ದಿನದ ಪ್ರಯುಕ್ತ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ ನಡೆಯಿತು.


ಈ ಸಂದರ್ಭದಲ್ಲಿ ದೀಪ ಪ್ರಜ್ವಲನೆಯನ್ನು ಶಾಸಕ ಹರೀಶ್ ಪೂಂಜ , ಅಳದಂಗಡಿ ವೈದ್ಯರಾದ ಡಾ| ಎನ್. ಎಂ. ತುಳುಪುಳೆ, ಹಾಗೂ ಧರ್ಮಸ್ಥಳದ ಭುಜಬಲಿಯವರು ನೆರವೇರಿಸಿಕೊಟ್ಟರು.

ಅರ್ಚಕರಾದ ವೇ| ಮೂ| ದಿನೇಶ್ ಭಟ್ ಧಾರ್ಮಿಕ ವಿಧಿಗಳನ್ನು ನಡೆಸಿಕೊಟ್ಟರು. ಕು।ಸಿದ್ಧಿ ಚೇರ್ಕೂಡ್ಲು ಭಕ್ತಿ ಸ್ತುತಿಯನ್ನು ನಡೆಸಿಕೊಟ್ಟರು. ಹರೀಶ್ ಪೂಂಜ ಇಲ್ಲಿನ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆಯನ್ನು ಸೂಚಿಸಿ ಇಂತಹ ಕಾರ್ಯಗಳು ಎಲ್ಲಾ ಶ್ರದ್ಧಾಕೇಂದ್ರಗಳಿಗೂ ವಿಸ್ತರಿಸುವಂತಾಗಲಿ ಎಂದು ಹಾರೈಸಿದರು.

ದೇವಸ್ಥಾನ ಟ್ರಸ್ಟ್ ನ ಅಧ್ಯಕ್ಷ ದ ಹರೀಶ್ ಸಾಲ್ಯಾನ್ ಹಾಗೂ ಟ್ರಸ್ಟ್ ನ ಸದಸ್ಯರು ಹಾಗೂ ಭಗವದ್ಭಕ್ತರು ಭಾಗವಹಿಸಿದರು.
ಸಿಂಡಿಕೇಟ್ ಬ್ಯಾಂಕ್ ನ ನಿವೃತ್ತ ಹಿರಿಯ ಪ್ರಬಂಧಕರಾದ ಎಸ್ ಎನ್ ಭಟ್, ನಾವೂರಿನ ವೈದ್ಯರಾದ ಡಾ। ಪ್ರದೀಪ್ ಉಪಸ್ಥಿತರಿದ್ದರು.

ಪ್ರಧಾನ ಕಾರ್ಯದರ್ಶಿಗಳಾದ ಧರ್ಣಪ್ಪ ಮೂಲ್ಯ ಧನ್ಯವಾದವನ್ನಿತ್ತರು.

Related posts

ಮಾಳಿಗೆ ಪ್ರದೇಶಕ್ಕೆ ವಿದ್ಯುತ್ ಸಂಪರ್ಕ ಶಾಸಕರಿಂದ ಆಗಿದೆಯೇ; ಅಳದಂಗಡಿ ಜನಸ್ಪಂದನ ಸಭೆಯಲ್ಲಿ ಶಾಸಕರಿಗೆ ಗ್ರಾಮಸ್ಥರ ಪ್ರಶ್ನೆ

Suddi Udaya

ಡಿ.17: ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸತೀಶ್ ಕೆ. ಕಾಶಿಪಟ್ಣರಿಗೆ ಹುಟ್ಟೂರ ಅಭಿನಂದನೆ

Suddi Udaya

ಹೊಸಂಗಡಿ ಶೌರ್ಯ ‌ವಿಪತ್ತು ನಿರ್ವಹಣಾ ಘಟಕದಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನಾಟಿ

Suddi Udaya

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ

Suddi Udaya

ಸೂಳಬೆಟ್ಟು ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರಗಳ ವಿತರಣೆ

Suddi Udaya

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟ: ಕಕ್ಕಿಂಜೆಯ ಶೇಖ್ ಅಝೀಮ್ ರಿಗೆ ಪ್ರಶಸ್ತಿ

Suddi Udaya
error: Content is protected !!