September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯಕ್ಷಭಾರತಿಯಿಂದ ಶೋಭಾ ಸುರೇಶ ಕುದ್ರೆಂತ್ತಾಯರಿಗೆ ಗೌರವಾರ್ಪಣೆ ಮತ್ತು ತಾಳಮದ್ದಳೆ

ಉಜಿರೆ ಲಲಿತನಗರದ ಸುದರ್ಶನ ಮನೆಯಲ್ಲಿ ಡಿ.೨೯ರಂದು ಯಕ್ಷಭಾರತಿ ಕನ್ಯಾಡಿ ಬೆಳ್ತಂಗಡಿ ಸಂಸ್ಥೆಯ ವತಿಯಿಂದ ಧಾರ್ಮಿಕವಾಗಿ ಮತ್ತು ಸಾಮಾಜಿಕವಾಗಿ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಶೋಭಾ ಸುರೇಶ ಕುದ್ರೆಂತ್ತಾಯರಿಗೆ ಗೌರವಾರ್ಪಣೆ ನಡೆಯಿತು.

ಸಂಸ್ಥೆಯ ಕೋಶಾಧಿಕಾರಿ ಚಂದ್ರಶೇಖರ ಆಚಾರ್ಯ, ಗುರುವಾಯನಕೆರೆ ಟ್ರಸ್ಟಿ ಶಿತಿಕಂಠ ಭಟ್ ಉಜಿರೆ, ಸಂಚಾಲಕ ಮಹೇಶ ಕನ್ಯಾಡಿ ಉಪಸ್ಥಿತರಿದ್ದರು.

ಯಕ್ಷಭಾರತಿ ಸಂಸ್ಥೆಯ ಆಹ್ವಾನಿತ ಸದಸ್ಯ ಮುರಳಿಕೃಷ್ಣ ಆಚಾರ್ಯ ಕಾರ್ಯಕ್ರಮ ನಿರೂಪಿಸಿ, ಶೋಭಾ ಸುರೇಶ ಕುದ್ರೆಂತ್ತಾಯರನ್ನು ಅಭಿನಂದಿಸಿ ಮಾತನಾಡಿದರು. ದಶಮಾನೋತ್ಸವ ಸಮಿತಿಯ ಅಧ್ಯಕ್ಷ ರವೀಂದ್ರ ಶೆಟ್ಟಿ ಬಳಂಜ ಸ್ವಾಗತಿಸಿರು. ರಾಮಕೃಷ್ಣ ಭಟ್ ಬಳೆಂಜ ಗೌರವ ಪತ್ರ ವಾಚಿಸಿದರು. ಕಾರ್ಯಕ್ರಮದ ಆಯೋಜಕ ನೀಲಕಂಠ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ ವಂದಿಸಿದರು.

ಬಳಿಕ ಖ್ಯಾತ ಕಲಾವಿದರ ಕೂಡುವಿಕೆಯಿಂದ ತಾಳಮದ್ದಳೆ ಪ್ರಸಂಗ ಶರಸೇತು ಬಂಧನ ಪ್ರಸ್ತುತಿಯಾಯಿತು. ನೀಲಕಂಠ ಭಟ್ ಮತ್ತು ಮನೆಯವರು ಪ್ರಾಯೋಜಿಸಿದ ತಾಳಮದ್ದಳೆಯ ಹಿಮ್ಮೇಳದಲ್ಲಿ ಭಾಗವತರಾಗಿ ಮಹೇಶ ಕನ್ಯಾಡಿ ಚೆಂಡೆ ಮದ್ದಳೆ ಯಲ್ಲಿ ಶಿತಿಕಂಠ ಭಟ್ ಉಜಿರೆ ಮತ್ತು ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ ಸಹಕರಿಸಿದರು.

ಮುಮ್ಮೇಳದಲ್ಲಿ ಅರ್ಜುನನಾಗಿ ಪೆರ್ಮುದೆ ಜಯಪ್ರಕಾಶ್ ಶೆಟ್ಟಿ ಹನುಮಂತನಾಗಿ ವಾಸುದೇವ ರಂಗ ಭಟ್ ಮಧೂರು ಕೃಷ್ಣನಾಗಿ ಸುರೇಶ ಕುದ್ರಂತಾಯ ಉಜಿರೆ ಪಾತ್ರ ನಿರ್ವಹಿಸಿದರು.

Related posts

ಗರ್ಡಾಡಿ ರೊನಾಲ್ಡ್ ಪ್ರಕಾಶ್ ಫೆರ್ನಾಂಡಿಸ್ ನಿಧನ

Suddi Udaya

ಪದ್ಮುಂಜ ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಗದ್ದೆ ನಾಟಿ ಪ್ರಾತ್ಯಕ್ಷತೆ

Suddi Udaya

ಕಾಯರ್ತ್ತಡ್ಕ ಸ.ಹಿ.ಪ್ರಾ. ಶಾಲೆ ಇದರ ಶತಮಾನೋತ್ಸವದ ಅಂಗವಾಗಿ ಉಚಿತ ಆರೋಗ್ಯ ಶಿಬಿರ ಮತ್ತು ರಕ್ತದಾನ ಶಿಬಿರ

Suddi Udaya

ಆರಂಬೋಡಿ : ಶ್ರೀಮತಿ ಧನ್ಯಶ್ರೀ ಕೆ. ಮತ್ತು ಮನೋಜ್ ಶೆಟ್ಟಿ ದಂಪತಿಗಳಿಂದ ಆರಂಬೋಡಿ ಗ್ರಾಮದ ಎಲ್ಲಾ ಸರಕಾರಿ ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ ಕೋರ್ಟ್ ಗೆ ಆಗಮಿಸಲಿರುವ ಖ್ಯಾತ ವಕೀಲ ಸಿ.ವಿ.ನಾಗೇಶ್

Suddi Udaya

ಧರ್ಮಸ್ಥಳದಲ್ಲಿ ವ್ಯಸನ ಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ ಕಾರ್ಯಕ್ರಮ: ಸಾಧಕ ನವಜೀವನ ಸದಸ್ಯರಿಗೆ ಜಾಗೃತಿ ಅಣ್ಣ ಮತ್ತು ಜಾಗೃತಿ ಮಿತ್ರ ಪ್ರಶಸ್ತಿ ಪ್ರದಾನ

Suddi Udaya
error: Content is protected !!