25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯಕ್ಷಭಾರತಿಯಿಂದ ಶೋಭಾ ಸುರೇಶ ಕುದ್ರೆಂತ್ತಾಯರಿಗೆ ಗೌರವಾರ್ಪಣೆ ಮತ್ತು ತಾಳಮದ್ದಳೆ

ಉಜಿರೆ ಲಲಿತನಗರದ ಸುದರ್ಶನ ಮನೆಯಲ್ಲಿ ಡಿ.೨೯ರಂದು ಯಕ್ಷಭಾರತಿ ಕನ್ಯಾಡಿ ಬೆಳ್ತಂಗಡಿ ಸಂಸ್ಥೆಯ ವತಿಯಿಂದ ಧಾರ್ಮಿಕವಾಗಿ ಮತ್ತು ಸಾಮಾಜಿಕವಾಗಿ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಶೋಭಾ ಸುರೇಶ ಕುದ್ರೆಂತ್ತಾಯರಿಗೆ ಗೌರವಾರ್ಪಣೆ ನಡೆಯಿತು.

ಸಂಸ್ಥೆಯ ಕೋಶಾಧಿಕಾರಿ ಚಂದ್ರಶೇಖರ ಆಚಾರ್ಯ, ಗುರುವಾಯನಕೆರೆ ಟ್ರಸ್ಟಿ ಶಿತಿಕಂಠ ಭಟ್ ಉಜಿರೆ, ಸಂಚಾಲಕ ಮಹೇಶ ಕನ್ಯಾಡಿ ಉಪಸ್ಥಿತರಿದ್ದರು.

ಯಕ್ಷಭಾರತಿ ಸಂಸ್ಥೆಯ ಆಹ್ವಾನಿತ ಸದಸ್ಯ ಮುರಳಿಕೃಷ್ಣ ಆಚಾರ್ಯ ಕಾರ್ಯಕ್ರಮ ನಿರೂಪಿಸಿ, ಶೋಭಾ ಸುರೇಶ ಕುದ್ರೆಂತ್ತಾಯರನ್ನು ಅಭಿನಂದಿಸಿ ಮಾತನಾಡಿದರು. ದಶಮಾನೋತ್ಸವ ಸಮಿತಿಯ ಅಧ್ಯಕ್ಷ ರವೀಂದ್ರ ಶೆಟ್ಟಿ ಬಳಂಜ ಸ್ವಾಗತಿಸಿರು. ರಾಮಕೃಷ್ಣ ಭಟ್ ಬಳೆಂಜ ಗೌರವ ಪತ್ರ ವಾಚಿಸಿದರು. ಕಾರ್ಯಕ್ರಮದ ಆಯೋಜಕ ನೀಲಕಂಠ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ ವಂದಿಸಿದರು.

ಬಳಿಕ ಖ್ಯಾತ ಕಲಾವಿದರ ಕೂಡುವಿಕೆಯಿಂದ ತಾಳಮದ್ದಳೆ ಪ್ರಸಂಗ ಶರಸೇತು ಬಂಧನ ಪ್ರಸ್ತುತಿಯಾಯಿತು. ನೀಲಕಂಠ ಭಟ್ ಮತ್ತು ಮನೆಯವರು ಪ್ರಾಯೋಜಿಸಿದ ತಾಳಮದ್ದಳೆಯ ಹಿಮ್ಮೇಳದಲ್ಲಿ ಭಾಗವತರಾಗಿ ಮಹೇಶ ಕನ್ಯಾಡಿ ಚೆಂಡೆ ಮದ್ದಳೆ ಯಲ್ಲಿ ಶಿತಿಕಂಠ ಭಟ್ ಉಜಿರೆ ಮತ್ತು ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ ಸಹಕರಿಸಿದರು.

ಮುಮ್ಮೇಳದಲ್ಲಿ ಅರ್ಜುನನಾಗಿ ಪೆರ್ಮುದೆ ಜಯಪ್ರಕಾಶ್ ಶೆಟ್ಟಿ ಹನುಮಂತನಾಗಿ ವಾಸುದೇವ ರಂಗ ಭಟ್ ಮಧೂರು ಕೃಷ್ಣನಾಗಿ ಸುರೇಶ ಕುದ್ರಂತಾಯ ಉಜಿರೆ ಪಾತ್ರ ನಿರ್ವಹಿಸಿದರು.

Related posts

47 ವಿದ್ಯಾರ್ಥಿಗಳಿಗೆ ರಾಜ್ಯದ ಟಾಪ್ 10 ಸ್ಥಾನ; ಪಿಯುಸಿ ಇತಿಹಾಸದಲ್ಲಿ ಆಳ್ವಾಸ್ ಸಾರ್ವತ್ರಿಕ ದಾಖಲೆ: ಡಾ. ಮೋಹನ್ ಆಳ್ವ

Suddi Udaya

ಬುರುಡೆ ಪ್ರಕರಣ ವರದಿಯ ಆದೇಶ ಮತ್ತೆ ಜ.3ಕ್ಕೆ ಮುಂದೂಡಿದ ಕೋರ್ಟ್

Suddi Udaya

ಪದ್ಮಂಜ ಸೇವಾ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬಿಜೆಪಿ ರೆಖ್ಯ ಗ್ರಾಮದ ಶಕ್ತಿ ಕೇಂದ್ರ ಪ್ರಮುಖ್ ರಾಗಿ ಚೇತನ್ ಕುಮಾರ್ ಆಯ್ಕೆ

Suddi Udaya

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಲಲ್ಲಾನ ಪ್ರಾಣಪ್ರತಿಷ್ಠೆ: ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಶಾಸಕ ಹರೀಶ್ ಪೂಂಜ ರವರ ಸೇವಾರ್ಥದಲ್ಲಿ 108 ಸೀಯಾಳಭಿಷೇಕ

Suddi Udaya

ಕನ್ನಡಿಕಟ್ಟೆ ಬಳಿ ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ: ಮಹಿಳೆ ಸಾವು

Suddi Udaya
error: Content is protected !!