24.5 C
ಪುತ್ತೂರು, ಬೆಳ್ತಂಗಡಿ
April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಸಮಸ್ಯೆ

ಹೊಸ ವರ್ಷದ ನೆಪದಲ್ಲಿ ವಂಚನೆ ಸಾಧ್ಯತೆ ‘ಎಪಿಕೆ ಫೈಲ್’ ತೆರೆಯದಂತೆ ಸೂಚನೆ

ಹೊಸ ವರ್ಷದ ಸಂದರ್ಭವನ್ನು ಬಳಸಿಕೊಂಡು ಸೈಬ‌ರ್ ಕ್ರಿಮಿನಲ್‌ಗಳು ಸಾರ್ವಜನಿಕರ ಮೊಬೈಲ್‌ಗಳಿಗೆ ಹಾನಿಕಾರಕ ಲಿಂಕ್ ಮತ್ತು ಎಪಿಕೆ ಫೈಲ್‌ಗಳನ್ನು ಕಳುಹಿಸಿ ಸಾರ್ವಜನಿಕರ ಮೊಬೈಲ್‌ಗಳನ್ನು ಹ್ಯಾಕ್ ಮಾಡುವ ಸಾಧ್ಯತೆ ಇರುತ್ತದೆ. ನಂತರ ಹ್ಯಾಕ್ ಮಾಡಿದ ಮೊಬೈಲಿನಿಂದ ವಾಟ್ಸಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳ ಮೂಲಕ ಹಾನಿಕಾರಕ ಲಿಂಕ್ ಮತ್ತು ಎಪಿಕೆ ಫೈಲ್‌ಗಳನ್ನು ದೊಡ್ಡ ಮಟ್ಟದಲ್ಲಿ ಶೇ‌ರ್ ಮಾಡುವ ಸಾಧ್ಯತೆ ಇರುತ್ತದೆ. ಸಾರ್ವಜನಿಕರು ಈ ರೀತಿಯ ಹೊಸ ವರ್ಷದ ಶುಭಾಶಯ ಕೋರುವ ಯಾವುದೇ ಹಾನಿಕಾರಕ ಲಿಂಕ್‌ಗಳು ಮತ್ತು ಎಪಿಕೆ ಫೈಲ್‌ಗಳನ್ನು ವಾಟ್ಸಪ್ ಸೇರಿದಂತೆ ಯಾವುದೇ ಸಾಮಾಜಿಕ ಜಾಲತಾಣದಿಂದ ಸ್ವೀಕರಿಸಿಕೊಂಡರೆ ಅದನ್ನು ತಕ್ಷಣ ಡಿಲೀಟ್ ಮಾಡಬೇಕು. ಯಾವುದೇ ಕಾರಣಕ್ಕೂ ಹಾನಿಕರ ಲಿಂಕ್ ಮತ್ತು ಎಪಿಕೆ ಫೈಲ್‌ಗಳನ್ನು ಯಾರಿಗೂ ಶೇರ್ ಮಾಡಬಾರದು.

ಯಾವುದೇ ಸೈಬರ್ ಕ್ರೈಂ ಅಪರಾಧಕ್ಕೆ ಒಳಗಾದರೆ ಕೂಡಲೇ 1930ಕ್ಕೆ ಕರೆ ಮಾಡಿ ಅಥವಾ www.cybercrime.gov.in ವೆಬ್‌ಸೈಟ್‌ನಲ್ಲಿ ದೂರು ದಾಖಲಿಸುವಂತೆ ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

Related posts

ವಿ.ಹಿ.ಪ ಬಜರಂಗದಳ ಚಾರ್ಮಾಡಿ ಘಟಕದ ವತಿಯಿಂದ ದತ್ತಮಾಲಧಾರಣೆಗೆ ಚಾಲನೆ

Suddi Udaya

ಬೆಳ್ತಂಗಡಿ ಇತಿಹಾಸದಲ್ಲಿ ಪ್ರಥಮ ಹಬ್ಬ: ಬೆಳ್ತಂಗಡಿ ಸಂಭ್ರಮ ಸಂಪನ್ನ,

Suddi Udaya

ನಿಡ್ಲೆ: ದಿ. ಗಣಪತಿ ದೇವಧರ್ ಇವರ ಸ್ಮರಣಾರ್ಥದಲ್ಲಿ “ಪ್ರತಿ ಸ್ವರ್ಗ” ಯಕ್ಷಗಾನ ತಾಳಮದ್ದಳೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಹಿಂದಿ ದಿವಸ್ ಆಚರಣೆ

Suddi Udaya

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ದ್ವಿತೀಯ ಪಿಯುಸಿ ಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಅನನ್ಯ ರಿಗೆ ಜೆಸಿಐ ಕೊಕ್ಕಡ ಕಪಿಲ ಘಟಕದಿಂದ ಸನ್ಮಾನ

Suddi Udaya
error: Content is protected !!