24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಸಮಸ್ಯೆ

ಹೊಸ ವರ್ಷದ ನೆಪದಲ್ಲಿ ವಂಚನೆ ಸಾಧ್ಯತೆ ‘ಎಪಿಕೆ ಫೈಲ್’ ತೆರೆಯದಂತೆ ಸೂಚನೆ

ಹೊಸ ವರ್ಷದ ಸಂದರ್ಭವನ್ನು ಬಳಸಿಕೊಂಡು ಸೈಬ‌ರ್ ಕ್ರಿಮಿನಲ್‌ಗಳು ಸಾರ್ವಜನಿಕರ ಮೊಬೈಲ್‌ಗಳಿಗೆ ಹಾನಿಕಾರಕ ಲಿಂಕ್ ಮತ್ತು ಎಪಿಕೆ ಫೈಲ್‌ಗಳನ್ನು ಕಳುಹಿಸಿ ಸಾರ್ವಜನಿಕರ ಮೊಬೈಲ್‌ಗಳನ್ನು ಹ್ಯಾಕ್ ಮಾಡುವ ಸಾಧ್ಯತೆ ಇರುತ್ತದೆ. ನಂತರ ಹ್ಯಾಕ್ ಮಾಡಿದ ಮೊಬೈಲಿನಿಂದ ವಾಟ್ಸಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳ ಮೂಲಕ ಹಾನಿಕಾರಕ ಲಿಂಕ್ ಮತ್ತು ಎಪಿಕೆ ಫೈಲ್‌ಗಳನ್ನು ದೊಡ್ಡ ಮಟ್ಟದಲ್ಲಿ ಶೇ‌ರ್ ಮಾಡುವ ಸಾಧ್ಯತೆ ಇರುತ್ತದೆ. ಸಾರ್ವಜನಿಕರು ಈ ರೀತಿಯ ಹೊಸ ವರ್ಷದ ಶುಭಾಶಯ ಕೋರುವ ಯಾವುದೇ ಹಾನಿಕಾರಕ ಲಿಂಕ್‌ಗಳು ಮತ್ತು ಎಪಿಕೆ ಫೈಲ್‌ಗಳನ್ನು ವಾಟ್ಸಪ್ ಸೇರಿದಂತೆ ಯಾವುದೇ ಸಾಮಾಜಿಕ ಜಾಲತಾಣದಿಂದ ಸ್ವೀಕರಿಸಿಕೊಂಡರೆ ಅದನ್ನು ತಕ್ಷಣ ಡಿಲೀಟ್ ಮಾಡಬೇಕು. ಯಾವುದೇ ಕಾರಣಕ್ಕೂ ಹಾನಿಕರ ಲಿಂಕ್ ಮತ್ತು ಎಪಿಕೆ ಫೈಲ್‌ಗಳನ್ನು ಯಾರಿಗೂ ಶೇರ್ ಮಾಡಬಾರದು.

ಯಾವುದೇ ಸೈಬರ್ ಕ್ರೈಂ ಅಪರಾಧಕ್ಕೆ ಒಳಗಾದರೆ ಕೂಡಲೇ 1930ಕ್ಕೆ ಕರೆ ಮಾಡಿ ಅಥವಾ www.cybercrime.gov.in ವೆಬ್‌ಸೈಟ್‌ನಲ್ಲಿ ದೂರು ದಾಖಲಿಸುವಂತೆ ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನೂತನ ಸಭಾಂಗಣಕ್ಕೆ ಶಿಲಾನ್ಯಾಸ

Suddi Udaya

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ

Suddi Udaya

ಉಜಿರೆ: ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ (ನಿ.): ಅಧ್ಯಕ್ಷರಾಗಿ ರಂಜನ್ ಜಿ. ಗೌಡ, ಉಪಾಧ್ಯಕ್ಷರಾಗಿ ಶಿವಕಾಂತ ಗೌಡ

Suddi Udaya

ಬೆಳ್ತಂಗಡಿ: ಜೈನ್‌ಪೇಟೆ ನಿವಾಸಿ ರಮೇಶ್ ಆಚಾರ್ಯ ನಿಧನ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ: ತಡೆ ನೀಡಲು ನಿರಾಕರಿಸಿದ ಹೈಕೋರ್ಟ್

Suddi Udaya

ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ

Suddi Udaya
error: Content is protected !!