22.9 C
ಪುತ್ತೂರು, ಬೆಳ್ತಂಗಡಿ
March 7, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಾಳೆಯಿಂದ ಉಚಿತ ಡಯಾಲಿಸಿಸ್ ಸೇವೆ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜ.1ರಿಂದ ಡಯಾಲಿಸಿಸ್‌ ಉಚಿತ ಸೇವೆ ಪ್ರಾರಂಭಗೊಳ್ಳಲಿದೆ.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾ ಭಿವೃದ್ಧಿ ಯೋಜನೆ ಮೂಲಕ ಹಲವಾರು ಜನೋಪಯೋಗಿ ಕಾರ್ಯಕ್ರಮಗಳ ಮೂಲಕ ರಾಜ್ಯಾದ್ಯಂತ ಲಕ್ಷಾಂತರ ಬಡವರ ಬಾಳಿಗೆ ಬೆಳಕು ನೀಡುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳ ಲಕ್ಷ ದೀಪೋತ್ಸವದ ಸಂದರ್ಭ ನಡೆದ ಸರ್ವಧರ್ಮ ಸಮ್ಮೇಳ ನದಲ್ಲಿ ಜ.1ರಿಂದ ಉಜಿರೆ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಉಚಿತ ಸೇವೆ ನೀಡುವುದಾಗಿ ಘೋಷಿಸಿ ದ್ದರು.

ಬೆಳ್ತಂಗಡಿ ತಾಲೂಕಿನಲ್ಲಿ ಅನೇಕ ಮಂದಿ ಡಯಾಲಿಸಿಸ್ ಸೇವೆಯನ್ನು ಬೇರೆ ಬೇರೆ ಕಡೆ ಪಡೆಯುತ್ತಿದ್ದಾರೆ. ಸರಕಾರಿ ಆಸ್ಪತ್ರೆಗಳಲ್ಲಿ ಸೀಮಿತ ಜನರಿಗೆ ಮಾತ್ರ ಅವಕಾಶ ಇರುವುದರಿಂದ ಬೆಳ್ತಂಗಡಿ ತಾಲೂಕಿನ ಅನೇಕರು ಮಂಗಳೂರಿನ ಖಾಸಗಿ ಆಸ್ಪತ್ರೆಗಳಿಗೆ ಹೋಗುತ್ತಿರುವ ಪರಿಸ್ಥಿತಿ ಇದೆ. ಧರ್ಮಾಧಿಕಾರಿಗಳ ಈ ಮಾನವೀಯ ಸೇವೆ ತಾಲೂಕಿನ ಅನೇಕರಿಗೆ ಅನುಕೂಲ ಕಲ್ಪಿಸಲಿದೆ. ಉಜಿರೆ ಆಸ್ಪತ್ರೆಯಲ್ಲಿ 11 ಡಯಾಲಿಸಿಸ್‌ ಯಂತ್ರಗಳಿದ್ದು, ವರ್ಷದಲ್ಲಿ 10 ಸಾವಿರ ಮಂದಿಗೆ ಡಯಾಲಿಸಿಸ್‌ ಮಾಡಬಹುದಾಗಿದೆ.

ವಾರ್ಷಿಕ 1.50 ಕೋಟಿ ರೂ. ವೆಚ್ಚ: ಡಯಾಲಿಸಿಸ್‌ ವೆಚ್ಚ ಒಬ್ಬರಿಗೆ ಒಂದು ಬಾರಿಗೆ 1,500 ರೂ. ಇದ್ದು, ಇನ್ನು ಮುಂದೆ ಉಚಿತ ವಾಗಿ ಸೇವೆ ಸಿಗಲಿದೆ. ತಿಂಗಳಿಗೆ ಒಬ್ಬರಿಗೆ 12ರಿಂದ 24 ಸಾವಿರ ರೂ. ವೆಚ್ಚ ಉಳಿತಾಯವಾಗಲಿದೆ. ಈ ಯೋಜನೆಗೆ ವಾರ್ಷಿಕವಾಗಿ 1.50 ಕೋಟಿ ರೂ.ಗೂ ಮಿಕ್ಕಿ ವೆಚ್ಚವಾಗುತ್ತದೆ.

Related posts

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆ ಪದವಿ ವಿಭಾಗದ ವಿದ್ಯಾರ್ಥಿ ಸಂಘದ ಚುನಾವಣೆ

Suddi Udaya

ಖಿಲ್ರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಎ.29-30: ಲಾಯಿಲ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾಭವನಕ್ಕೆ ಹಾಗೂ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ಶ್ರೀ ದುರ್ಗಾದೇವಿ) ದೇವಸ್ಥಾನಕ್ಕೆ ಶ್ರೀಮಜ್ಜಗದ್ಗುರುಗಳಾದ ಶಂಕರಾಚಾರ್ಯ ಶ್ರೀ ಭಾರತೀತೀರ್ಥಮಹಾಸ್ವಾಮಿ ಹಾಗೂ ಶ್ರೀ ವಿಧುಶೇಖರಭಾರತೀ ಸ್ವಾಮೀಜಿ ಭೇಟಿ

Suddi Udaya

ಡಿ.29,30,31 ಸುಲ್ಕೇರಿ ಬಸದಿ ಧಾಮ ಸಂಪ್ರೋಕ್ಷಣ ಪೂರ್ವಕ ಪ್ರತಿಷ್ಠಾ ಮಹೋತ್ಸವ

Suddi Udaya

ಕೊಯ್ಯೂರು ಶ್ರೀಕೃಷ್ಣ ಭಜನಾ ಮಂಡಳಿ ಭಜನೋತ್ಸವ

Suddi Udaya

ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ “ಸರಿಗಮಪ ” ವಿನ್ನರ್ ಚನ್ನಪ್ಪ ಭೇಟಿ

Suddi Udaya
error: Content is protected !!