22.9 C
ಪುತ್ತೂರು, ಬೆಳ್ತಂಗಡಿ
March 7, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಾಳೆಯಿಂದ ಉಚಿತ ಡಯಾಲಿಸಿಸ್ ಸೇವೆ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜ.1ರಿಂದ ಡಯಾಲಿಸಿಸ್‌ ಉಚಿತ ಸೇವೆ ಪ್ರಾರಂಭಗೊಳ್ಳಲಿದೆ.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾ ಭಿವೃದ್ಧಿ ಯೋಜನೆ ಮೂಲಕ ಹಲವಾರು ಜನೋಪಯೋಗಿ ಕಾರ್ಯಕ್ರಮಗಳ ಮೂಲಕ ರಾಜ್ಯಾದ್ಯಂತ ಲಕ್ಷಾಂತರ ಬಡವರ ಬಾಳಿಗೆ ಬೆಳಕು ನೀಡುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳ ಲಕ್ಷ ದೀಪೋತ್ಸವದ ಸಂದರ್ಭ ನಡೆದ ಸರ್ವಧರ್ಮ ಸಮ್ಮೇಳ ನದಲ್ಲಿ ಜ.1ರಿಂದ ಉಜಿರೆ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಉಚಿತ ಸೇವೆ ನೀಡುವುದಾಗಿ ಘೋಷಿಸಿ ದ್ದರು.

ಬೆಳ್ತಂಗಡಿ ತಾಲೂಕಿನಲ್ಲಿ ಅನೇಕ ಮಂದಿ ಡಯಾಲಿಸಿಸ್ ಸೇವೆಯನ್ನು ಬೇರೆ ಬೇರೆ ಕಡೆ ಪಡೆಯುತ್ತಿದ್ದಾರೆ. ಸರಕಾರಿ ಆಸ್ಪತ್ರೆಗಳಲ್ಲಿ ಸೀಮಿತ ಜನರಿಗೆ ಮಾತ್ರ ಅವಕಾಶ ಇರುವುದರಿಂದ ಬೆಳ್ತಂಗಡಿ ತಾಲೂಕಿನ ಅನೇಕರು ಮಂಗಳೂರಿನ ಖಾಸಗಿ ಆಸ್ಪತ್ರೆಗಳಿಗೆ ಹೋಗುತ್ತಿರುವ ಪರಿಸ್ಥಿತಿ ಇದೆ. ಧರ್ಮಾಧಿಕಾರಿಗಳ ಈ ಮಾನವೀಯ ಸೇವೆ ತಾಲೂಕಿನ ಅನೇಕರಿಗೆ ಅನುಕೂಲ ಕಲ್ಪಿಸಲಿದೆ. ಉಜಿರೆ ಆಸ್ಪತ್ರೆಯಲ್ಲಿ 11 ಡಯಾಲಿಸಿಸ್‌ ಯಂತ್ರಗಳಿದ್ದು, ವರ್ಷದಲ್ಲಿ 10 ಸಾವಿರ ಮಂದಿಗೆ ಡಯಾಲಿಸಿಸ್‌ ಮಾಡಬಹುದಾಗಿದೆ.

ವಾರ್ಷಿಕ 1.50 ಕೋಟಿ ರೂ. ವೆಚ್ಚ: ಡಯಾಲಿಸಿಸ್‌ ವೆಚ್ಚ ಒಬ್ಬರಿಗೆ ಒಂದು ಬಾರಿಗೆ 1,500 ರೂ. ಇದ್ದು, ಇನ್ನು ಮುಂದೆ ಉಚಿತ ವಾಗಿ ಸೇವೆ ಸಿಗಲಿದೆ. ತಿಂಗಳಿಗೆ ಒಬ್ಬರಿಗೆ 12ರಿಂದ 24 ಸಾವಿರ ರೂ. ವೆಚ್ಚ ಉಳಿತಾಯವಾಗಲಿದೆ. ಈ ಯೋಜನೆಗೆ ವಾರ್ಷಿಕವಾಗಿ 1.50 ಕೋಟಿ ರೂ.ಗೂ ಮಿಕ್ಕಿ ವೆಚ್ಚವಾಗುತ್ತದೆ.

Related posts

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರಿಂದ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಕೆ

Suddi Udaya

ಡಿ.24-25: ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ

Suddi Udaya

ಮಡಂತ್ಯಾರು: ಹಿಂದೂ ಸಂಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿಯಲ್ಲಿ ನೂತನವಾಗಿ ಪ್ರಾರಂಭಿಸಿದ ಡ್ರೀಮ್ ಡೀಲ್ ಗ್ರೂಪ್ಸ್ ಉದ್ಘಾಟನೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗೊರೂರು ರಾಮಸ್ವಾಮಿ ಅಯ್ಯಂಗಾರ್ ಸಂಸ್ಮರಣಾರ್ಥ ಗೊರೂರು ಕಂಡ ಗಾಂಧಿ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ರವರಿಗೆ ಕಾಂಗ್ರೆಸ್ ನಿಂದ ಭವ್ಯ ಸ್ವಾಗತ

Suddi Udaya
error: Content is protected !!