23.7 C
ಪುತ್ತೂರು, ಬೆಳ್ತಂಗಡಿ
April 24, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಾಳೆಯಿಂದ ಉಚಿತ ಡಯಾಲಿಸಿಸ್ ಸೇವೆ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜ.1ರಿಂದ ಡಯಾಲಿಸಿಸ್‌ ಉಚಿತ ಸೇವೆ ಪ್ರಾರಂಭಗೊಳ್ಳಲಿದೆ.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾ ಭಿವೃದ್ಧಿ ಯೋಜನೆ ಮೂಲಕ ಹಲವಾರು ಜನೋಪಯೋಗಿ ಕಾರ್ಯಕ್ರಮಗಳ ಮೂಲಕ ರಾಜ್ಯಾದ್ಯಂತ ಲಕ್ಷಾಂತರ ಬಡವರ ಬಾಳಿಗೆ ಬೆಳಕು ನೀಡುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳ ಲಕ್ಷ ದೀಪೋತ್ಸವದ ಸಂದರ್ಭ ನಡೆದ ಸರ್ವಧರ್ಮ ಸಮ್ಮೇಳ ನದಲ್ಲಿ ಜ.1ರಿಂದ ಉಜಿರೆ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಉಚಿತ ಸೇವೆ ನೀಡುವುದಾಗಿ ಘೋಷಿಸಿ ದ್ದರು.

ಬೆಳ್ತಂಗಡಿ ತಾಲೂಕಿನಲ್ಲಿ ಅನೇಕ ಮಂದಿ ಡಯಾಲಿಸಿಸ್ ಸೇವೆಯನ್ನು ಬೇರೆ ಬೇರೆ ಕಡೆ ಪಡೆಯುತ್ತಿದ್ದಾರೆ. ಸರಕಾರಿ ಆಸ್ಪತ್ರೆಗಳಲ್ಲಿ ಸೀಮಿತ ಜನರಿಗೆ ಮಾತ್ರ ಅವಕಾಶ ಇರುವುದರಿಂದ ಬೆಳ್ತಂಗಡಿ ತಾಲೂಕಿನ ಅನೇಕರು ಮಂಗಳೂರಿನ ಖಾಸಗಿ ಆಸ್ಪತ್ರೆಗಳಿಗೆ ಹೋಗುತ್ತಿರುವ ಪರಿಸ್ಥಿತಿ ಇದೆ. ಧರ್ಮಾಧಿಕಾರಿಗಳ ಈ ಮಾನವೀಯ ಸೇವೆ ತಾಲೂಕಿನ ಅನೇಕರಿಗೆ ಅನುಕೂಲ ಕಲ್ಪಿಸಲಿದೆ. ಉಜಿರೆ ಆಸ್ಪತ್ರೆಯಲ್ಲಿ 11 ಡಯಾಲಿಸಿಸ್‌ ಯಂತ್ರಗಳಿದ್ದು, ವರ್ಷದಲ್ಲಿ 10 ಸಾವಿರ ಮಂದಿಗೆ ಡಯಾಲಿಸಿಸ್‌ ಮಾಡಬಹುದಾಗಿದೆ.

ವಾರ್ಷಿಕ 1.50 ಕೋಟಿ ರೂ. ವೆಚ್ಚ: ಡಯಾಲಿಸಿಸ್‌ ವೆಚ್ಚ ಒಬ್ಬರಿಗೆ ಒಂದು ಬಾರಿಗೆ 1,500 ರೂ. ಇದ್ದು, ಇನ್ನು ಮುಂದೆ ಉಚಿತ ವಾಗಿ ಸೇವೆ ಸಿಗಲಿದೆ. ತಿಂಗಳಿಗೆ ಒಬ್ಬರಿಗೆ 12ರಿಂದ 24 ಸಾವಿರ ರೂ. ವೆಚ್ಚ ಉಳಿತಾಯವಾಗಲಿದೆ. ಈ ಯೋಜನೆಗೆ ವಾರ್ಷಿಕವಾಗಿ 1.50 ಕೋಟಿ ರೂ.ಗೂ ಮಿಕ್ಕಿ ವೆಚ್ಚವಾಗುತ್ತದೆ.

Related posts

ಉಚಿತ ನೇತ್ರ ಪರೀಕ್ಷೆ ಮತ್ತು ಚಿಕಿತ್ಸಾ ಶಿಬಿರ

Suddi Udaya

ಧರ್ಮಸ್ಥಳ: 22ನೇ ಯ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆಗೆ ಆಹ್ವಾನ

Suddi Udaya

ಶ್ರೀರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಆಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರತಿಷ್ಠಾ ಮಹೋತ್ಸವ ಆಮಂತ್ರಣ ಹಾಗೂ ಮನೆ ಮನೆಗೆ ಮಂತ್ರಾಕ್ಷತೆ

Suddi Udaya

ಶಿಬಾಜೆ: ಪಡಂತ್ತಾಜೆಯಲ್ಲಿ ಒಂಟಿ ಸಲಗ ದಾಳಿ: ಬಾಳೆಗಿಡ, ಅಡಿಕೆ ಗಿಡಗಳಿಗೆ ಹಾನಿ

Suddi Udaya

ಜ.24: ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದಲ್ಲಿ ಸನ್ಯಾಸಿ ಹಾಗೂ ಗುಳಿಗ ದೈವದ ಆರೂಢ ಶಿಲಾನ್ಯಾಸ

Suddi Udaya

ಆಳ್ವಾಸ್ ಕಾಲೇಜಿನಲ್ಲಿ ಶಿಕ್ಷಕ -ರಕ್ಷಕ ಸಂಘದ ವಾರ್ಷಿಕ ಸಭೆ

Suddi Udaya
error: Content is protected !!