ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಾಳೆಯಿಂದ ಉಚಿತ ಡಯಾಲಿಸಿಸ್ ಸೇವೆ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜ.1ರಿಂದ ಡಯಾಲಿಸಿಸ್‌ ಉಚಿತ ಸೇವೆ ಪ್ರಾರಂಭಗೊಳ್ಳಲಿದೆ.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾ ಭಿವೃದ್ಧಿ ಯೋಜನೆ ಮೂಲಕ ಹಲವಾರು ಜನೋಪಯೋಗಿ ಕಾರ್ಯಕ್ರಮಗಳ ಮೂಲಕ ರಾಜ್ಯಾದ್ಯಂತ ಲಕ್ಷಾಂತರ ಬಡವರ ಬಾಳಿಗೆ ಬೆಳಕು ನೀಡುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳ ಲಕ್ಷ ದೀಪೋತ್ಸವದ ಸಂದರ್ಭ ನಡೆದ ಸರ್ವಧರ್ಮ ಸಮ್ಮೇಳ ನದಲ್ಲಿ ಜ.1ರಿಂದ ಉಜಿರೆ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಉಚಿತ ಸೇವೆ ನೀಡುವುದಾಗಿ ಘೋಷಿಸಿ ದ್ದರು.

ಬೆಳ್ತಂಗಡಿ ತಾಲೂಕಿನಲ್ಲಿ ಅನೇಕ ಮಂದಿ ಡಯಾಲಿಸಿಸ್ ಸೇವೆಯನ್ನು ಬೇರೆ ಬೇರೆ ಕಡೆ ಪಡೆಯುತ್ತಿದ್ದಾರೆ. ಸರಕಾರಿ ಆಸ್ಪತ್ರೆಗಳಲ್ಲಿ ಸೀಮಿತ ಜನರಿಗೆ ಮಾತ್ರ ಅವಕಾಶ ಇರುವುದರಿಂದ ಬೆಳ್ತಂಗಡಿ ತಾಲೂಕಿನ ಅನೇಕರು ಮಂಗಳೂರಿನ ಖಾಸಗಿ ಆಸ್ಪತ್ರೆಗಳಿಗೆ ಹೋಗುತ್ತಿರುವ ಪರಿಸ್ಥಿತಿ ಇದೆ. ಧರ್ಮಾಧಿಕಾರಿಗಳ ಈ ಮಾನವೀಯ ಸೇವೆ ತಾಲೂಕಿನ ಅನೇಕರಿಗೆ ಅನುಕೂಲ ಕಲ್ಪಿಸಲಿದೆ. ಉಜಿರೆ ಆಸ್ಪತ್ರೆಯಲ್ಲಿ 11 ಡಯಾಲಿಸಿಸ್‌ ಯಂತ್ರಗಳಿದ್ದು, ವರ್ಷದಲ್ಲಿ 10 ಸಾವಿರ ಮಂದಿಗೆ ಡಯಾಲಿಸಿಸ್‌ ಮಾಡಬಹುದಾಗಿದೆ.

ವಾರ್ಷಿಕ 1.50 ಕೋಟಿ ರೂ. ವೆಚ್ಚ: ಡಯಾಲಿಸಿಸ್‌ ವೆಚ್ಚ ಒಬ್ಬರಿಗೆ ಒಂದು ಬಾರಿಗೆ 1,500 ರೂ. ಇದ್ದು, ಇನ್ನು ಮುಂದೆ ಉಚಿತ ವಾಗಿ ಸೇವೆ ಸಿಗಲಿದೆ. ತಿಂಗಳಿಗೆ ಒಬ್ಬರಿಗೆ 12ರಿಂದ 24 ಸಾವಿರ ರೂ. ವೆಚ್ಚ ಉಳಿತಾಯವಾಗಲಿದೆ. ಈ ಯೋಜನೆಗೆ ವಾರ್ಷಿಕವಾಗಿ 1.50 ಕೋಟಿ ರೂ.ಗೂ ಮಿಕ್ಕಿ ವೆಚ್ಚವಾಗುತ್ತದೆ.

Related posts

ಜೀವ ದೇವತಾಶಾಸ್ತ್ರ ಮುಕ್ತ ವಿಶ್ವವಿದ್ಯಾಲಯದಿಂದ ಎಂ. ನಾರಾಯಣ್ ಬೇಗೂರು ರವರಿಗೆ ಸಮಾಜ ಸೇವೆಗಾಗಿ (“ಡಾಕ್ಟರ್ ಆಫ್ ಹ್ಯುಮಾನಿಟಿ”) ಡಾಕ್ಟರೇಟ್ ಗೌರವ ಪುರಸ್ಕಾರ

Suddi Udaya

ಬೆಳ್ತಂಗಡಿ ಯುವ ವಕೀಲರ ತಂಡದಿಂದ ಹಣ್ಣಿನ ಗಿಡ ನೆಡುವ ಕಾರ್ಯಕ್ರಮ

Suddi Udaya

ವಿಚಾರಣೆ ಮುಗಿಸಿ ತಡರಾತ್ರಿ ವಾಪಸ್ ಹೋದ ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ

Suddi Udaya

ಶಬರಿಮಲೆ ಯಾತ್ರೆ ವೇಳೆ ರೈಲಿನಿಂದ ಬಿದ್ದು ವೃದ್ಧ ಸಾವು

Suddi Udaya

ವೇಣೂರು ಸೊಸೈಟಿ ಅಧ್ಯಕ್ಷ ಸುಂದರ ಹೆಗ್ಡೆ ಅವರಿಗೆ ಗೌರವಾರ್ಪಣೆ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಯಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಹಿರಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ

Suddi Udaya
error: Content is protected !!