37.3 C
ಪುತ್ತೂರು, ಬೆಳ್ತಂಗಡಿ
April 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್‌ಡಿಎಂ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸೈಬರ್ ಅಪರಾಧಗಳ ತಡೆಗಟ್ಟುವಿಕೆ ಕುರಿತು ಮಾಹಿತಿ ಕಾರ್ಯಾಗಾರ

ಉಜಿರೆ: ಎಸ್‌ಡಿಎಂ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಸೈಬರ್ ಅಪರಾಧಗಳ ತಡೆಗಟ್ಟುವಿಕೆ ಕುರಿತು ಮಾಹಿತಿ ಕಾರ್ಯಾಗಾರ ಡಿ.30ರಂದು ನಡೆಯಿತು.

ಕಾಲೇಜಿನ ವಿದ್ಯಾರ್ಥಿನಿಯರು ಹಾಗೂ ಮಂಜುಶ್ರೀ ಪ್ರಿಂಟರ್ಸ್ ನೌಕರರಿಗಾಗಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಮಂಗಳೂರಿನ ಸಿಇಎನ್ (ಸೈಬರ್ ಎಕನಾಮಿಕ್ಸ್ ಆಂಡ್ ನಾರ್ಕೋಟಿಕ್ಸ್ ಕ್ರೈಮ್ಸ್) ಪೊಲೀಸ್ ಠಾಣಾ ಡಿ.ವೈ.ಎಸ್.ಪಿ. ಮಂಜುನಾಥ್ ಆರ್.ಜಿ. ಉದ್ಘಾಟಿಸಿ ಮಾತನಾಡಿ, ಸೈಬರ್ ಅಪರಾಧಗಳಿಗೆ ಯುವ ಜನಾಂಗ ಬಲಿಯಾಗುತ್ತಿರುವ ಕುರಿತು ಕಳವಳ ವ್ಯಕ್ತಪಡಿಸಿದರು.

ಸೈಬರ್ ತೊಂದರೆಗೆ ಒಳಗಾದಾಗ ಧೃತಿಗೆಡದೆ, ಧೈರ್ಯದಿಂದ ಎದುರಿಸುವ ಸಾಮರ್ಥ್ಯ ಬೆಳೆಸಿಕೊಂಡು ನಡೆದ ಅಪರಾಧದ ಕುರಿತ ಮಾಹಿತಿಯನ್ನು, ದಾಖಲೆಗಳನ್ನು ಜಿಲ್ಲಾ ಅಪರಾಧ ವಿಭಾಗಕ್ಕೆ ನೀಡಬೇಕು ಎಂದು ತಿಳಿಸಿದರು.

ಸಬ್ ಇನ್ಸ್‌ಪೆಕ್ಟರ್ ಮಂಜುನಾಥ್ ಡಿ. ಮಾತನಾಡಿ, ವಿವಿಧ ಸೈಬರ್ ಅಪರಾಧ ಪ್ರಕರಣಗಳ ಬಗ್ಗೆ ವಿವರವಾದ ಮಾಹಿತಿಗಳನ್ನು ವಿವರವಾಗಿ ತಿಳಿಸಿದರು ಹಾಗೂ ಸೈಬರ್ ವಂಚನೆಗೆ ಒಳಗಾದಾಗ (೧೯೩೦ ಅಥವಾ ೧೧೨ ಗೆ ಕರೆ ಮಾಡಿದಾಗ ೫ ನಿಮಿಷದ ಒಳಗೆ ಹತ್ತಿರದ ಪೋಲೀಸರ ಬರುವು ಕುರಿತು ಹಾಗೂ ಅಲ್ಲಿಯವರೆಗೆ) ಕೈಗೊಳ್ಳಬೇಕಾದ ಮುಂಜಾಗೃತಾ ಕ್ರಮ ಕುರಿತು ಮಾಹಿತಿ ನೀಡಿದರು.

ಕಾಲೇಜಿನ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್, ರೋಟರಿ ಕ್ಲಬ್ ಕಾರ್ಯದರ್ಶಿ ಸಂದೇಶ್ ರಾವ್, ಮಂಜುಶ್ರೀ ಪ್ರಿಂಟರ್ಸ್‌ನ ವ್ಯವಸ್ಥಾಪಕ ಶೇಖರ್ ಟಿ. ಉಪಸ್ಥಿತರಿದ್ದರು.

ಸಹಾಯಕ ವ್ಯವಸ್ಥಾಪಕ ರವಿ ಪರಕ್ಕಜೆ ಕಾರ್ಯಕ್ರಮ ನಿರೂಪಿಸಿದರು.

Related posts

ಎಸ್.ಎಸ್.ಎಲ್.ಸಿ ಫಲಿತಾಂಶ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಮಾ.14-15: ನಿಡ್ಲೆ ಬೂಡುಜಾಲು ನಾಡ ದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ದೊಂಪದ ಬಲಿ ಜಾತ್ರಾ ಮಹೋತ್ಸವ

Suddi Udaya

ಬೆಳ್ತಂಗಡಿ ತಾಲೂಕು ಕಾರ್ಯನಿರ್ವಹಣಾಧಿಕಾರಿ ವೈಜಣ್ಣರವರಿಂದ ಕಲ್ಮಂಜ ರಮೇಶ್ ನಾಯ್ಕ ರವರ ಅಡಿಕೆ ತೋಟ ರಚನೆಯ ಪರಿಶೀಲನೆ

Suddi Udaya

ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಚಲನಚಿತ್ರ ನಿರ್ದೇಶಕ ವಿನು ಬಳಂಜ

Suddi Udaya

ಕಸ್ತೂರಿ ರಂಗನ್ ವರದಿ ವಿರುದ್ಧದ ಬೃಹತ್ ಪ್ರತಿಭಟನೆಯ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ ಲಿಯೋ ಕ್ಲಬ್ ನ ನೂತನ ಅಧ್ಯಕ್ಷರಾಗಿ ಅಪ್ಸರಾ ಹೆಚ್ ಆರ್, ಕಾರ್ಯದರ್ಶಿಯಾಗಿ ನಿರೀಕ್ಷಾ ಎನ್

Suddi Udaya
error: Content is protected !!