27 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್‌ಡಿಎಂ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸೈಬರ್ ಅಪರಾಧಗಳ ತಡೆಗಟ್ಟುವಿಕೆ ಕುರಿತು ಮಾಹಿತಿ ಕಾರ್ಯಾಗಾರ

ಉಜಿರೆ: ಎಸ್‌ಡಿಎಂ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಸೈಬರ್ ಅಪರಾಧಗಳ ತಡೆಗಟ್ಟುವಿಕೆ ಕುರಿತು ಮಾಹಿತಿ ಕಾರ್ಯಾಗಾರ ಡಿ.30ರಂದು ನಡೆಯಿತು.

ಕಾಲೇಜಿನ ವಿದ್ಯಾರ್ಥಿನಿಯರು ಹಾಗೂ ಮಂಜುಶ್ರೀ ಪ್ರಿಂಟರ್ಸ್ ನೌಕರರಿಗಾಗಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಮಂಗಳೂರಿನ ಸಿಇಎನ್ (ಸೈಬರ್ ಎಕನಾಮಿಕ್ಸ್ ಆಂಡ್ ನಾರ್ಕೋಟಿಕ್ಸ್ ಕ್ರೈಮ್ಸ್) ಪೊಲೀಸ್ ಠಾಣಾ ಡಿ.ವೈ.ಎಸ್.ಪಿ. ಮಂಜುನಾಥ್ ಆರ್.ಜಿ. ಉದ್ಘಾಟಿಸಿ ಮಾತನಾಡಿ, ಸೈಬರ್ ಅಪರಾಧಗಳಿಗೆ ಯುವ ಜನಾಂಗ ಬಲಿಯಾಗುತ್ತಿರುವ ಕುರಿತು ಕಳವಳ ವ್ಯಕ್ತಪಡಿಸಿದರು.

ಸೈಬರ್ ತೊಂದರೆಗೆ ಒಳಗಾದಾಗ ಧೃತಿಗೆಡದೆ, ಧೈರ್ಯದಿಂದ ಎದುರಿಸುವ ಸಾಮರ್ಥ್ಯ ಬೆಳೆಸಿಕೊಂಡು ನಡೆದ ಅಪರಾಧದ ಕುರಿತ ಮಾಹಿತಿಯನ್ನು, ದಾಖಲೆಗಳನ್ನು ಜಿಲ್ಲಾ ಅಪರಾಧ ವಿಭಾಗಕ್ಕೆ ನೀಡಬೇಕು ಎಂದು ತಿಳಿಸಿದರು.

ಸಬ್ ಇನ್ಸ್‌ಪೆಕ್ಟರ್ ಮಂಜುನಾಥ್ ಡಿ. ಮಾತನಾಡಿ, ವಿವಿಧ ಸೈಬರ್ ಅಪರಾಧ ಪ್ರಕರಣಗಳ ಬಗ್ಗೆ ವಿವರವಾದ ಮಾಹಿತಿಗಳನ್ನು ವಿವರವಾಗಿ ತಿಳಿಸಿದರು ಹಾಗೂ ಸೈಬರ್ ವಂಚನೆಗೆ ಒಳಗಾದಾಗ (೧೯೩೦ ಅಥವಾ ೧೧೨ ಗೆ ಕರೆ ಮಾಡಿದಾಗ ೫ ನಿಮಿಷದ ಒಳಗೆ ಹತ್ತಿರದ ಪೋಲೀಸರ ಬರುವು ಕುರಿತು ಹಾಗೂ ಅಲ್ಲಿಯವರೆಗೆ) ಕೈಗೊಳ್ಳಬೇಕಾದ ಮುಂಜಾಗೃತಾ ಕ್ರಮ ಕುರಿತು ಮಾಹಿತಿ ನೀಡಿದರು.

ಕಾಲೇಜಿನ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್, ರೋಟರಿ ಕ್ಲಬ್ ಕಾರ್ಯದರ್ಶಿ ಸಂದೇಶ್ ರಾವ್, ಮಂಜುಶ್ರೀ ಪ್ರಿಂಟರ್ಸ್‌ನ ವ್ಯವಸ್ಥಾಪಕ ಶೇಖರ್ ಟಿ. ಉಪಸ್ಥಿತರಿದ್ದರು.

ಸಹಾಯಕ ವ್ಯವಸ್ಥಾಪಕ ರವಿ ಪರಕ್ಕಜೆ ಕಾರ್ಯಕ್ರಮ ನಿರೂಪಿಸಿದರು.

Related posts

ಸೋಣಂದೂರು: ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Suddi Udaya

ರಾಷ್ಟ್ರಮಟ್ಟದ ಟೆಕ್ನೋ ಕಲ್ಚರ್ ಫೆಸ್ಟ್ ಇನ್ಸಿಗ್ನಿಯಾ: ಉಜಿರೆ ಎಸ್.ಡಿ.ಎಂ.ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಹುಣ್ಸೆಕಟ್ಟೆ ಪಲ್ಕೆ ನಿವಾಸಿ ನಾರಾಯಣ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಆಡಳಿತ ಪಕ್ಷ ರಾಜ್ಯಪಾಲರಿಂದ ಮಾಡಿಸಿರುವ ಭಾಷಣ ಕೇವಲ ಸಾಹಿತ್ಯಿಕವಾಗಿ ರಂಜನೀಯವಾಗಿತ್ತೇ ಹೊರತು ಅಭಿವೃದ್ಧಿಯ ಚಿಂತನೆ ಇಲ್ಲದೆ ನೀರಸವಾಗಿತ್ತು: ಎಂ.ಎಲ್‌.ಸಿ ಪ್ರತಾಪಸಿಂಹ ನಾಯಕ್

Suddi Udaya

ಶಿಬಾಜೆ ಯುವಕನಿಗೆ ಜಾತಿನಿಂದನೆ ಕೊಲೆ ಬೆದರಿಕೆ : ಆರೋಪಿಗಳ ಬಂಧನ

Suddi Udaya

ನಾಲ್ಕೂರು: ನಿಟ್ಟಡ್ಕ ಪಲ್ಕೆಯಲ್ಲಿ ಅತ್ಯಂತ ಶ್ರದ್ಧಾ ಭಕ್ತಿಯ ರಾಶಿಪೂಜೆ

Suddi Udaya
error: Content is protected !!