July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್‌ಡಿಎಂ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸೈಬರ್ ಅಪರಾಧಗಳ ತಡೆಗಟ್ಟುವಿಕೆ ಕುರಿತು ಮಾಹಿತಿ ಕಾರ್ಯಾಗಾರ

ಉಜಿರೆ: ಎಸ್‌ಡಿಎಂ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಸೈಬರ್ ಅಪರಾಧಗಳ ತಡೆಗಟ್ಟುವಿಕೆ ಕುರಿತು ಮಾಹಿತಿ ಕಾರ್ಯಾಗಾರ ಡಿ.30ರಂದು ನಡೆಯಿತು.

ಕಾಲೇಜಿನ ವಿದ್ಯಾರ್ಥಿನಿಯರು ಹಾಗೂ ಮಂಜುಶ್ರೀ ಪ್ರಿಂಟರ್ಸ್ ನೌಕರರಿಗಾಗಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಮಂಗಳೂರಿನ ಸಿಇಎನ್ (ಸೈಬರ್ ಎಕನಾಮಿಕ್ಸ್ ಆಂಡ್ ನಾರ್ಕೋಟಿಕ್ಸ್ ಕ್ರೈಮ್ಸ್) ಪೊಲೀಸ್ ಠಾಣಾ ಡಿ.ವೈ.ಎಸ್.ಪಿ. ಮಂಜುನಾಥ್ ಆರ್.ಜಿ. ಉದ್ಘಾಟಿಸಿ ಮಾತನಾಡಿ, ಸೈಬರ್ ಅಪರಾಧಗಳಿಗೆ ಯುವ ಜನಾಂಗ ಬಲಿಯಾಗುತ್ತಿರುವ ಕುರಿತು ಕಳವಳ ವ್ಯಕ್ತಪಡಿಸಿದರು.

ಸೈಬರ್ ತೊಂದರೆಗೆ ಒಳಗಾದಾಗ ಧೃತಿಗೆಡದೆ, ಧೈರ್ಯದಿಂದ ಎದುರಿಸುವ ಸಾಮರ್ಥ್ಯ ಬೆಳೆಸಿಕೊಂಡು ನಡೆದ ಅಪರಾಧದ ಕುರಿತ ಮಾಹಿತಿಯನ್ನು, ದಾಖಲೆಗಳನ್ನು ಜಿಲ್ಲಾ ಅಪರಾಧ ವಿಭಾಗಕ್ಕೆ ನೀಡಬೇಕು ಎಂದು ತಿಳಿಸಿದರು.

ಸಬ್ ಇನ್ಸ್‌ಪೆಕ್ಟರ್ ಮಂಜುನಾಥ್ ಡಿ. ಮಾತನಾಡಿ, ವಿವಿಧ ಸೈಬರ್ ಅಪರಾಧ ಪ್ರಕರಣಗಳ ಬಗ್ಗೆ ವಿವರವಾದ ಮಾಹಿತಿಗಳನ್ನು ವಿವರವಾಗಿ ತಿಳಿಸಿದರು ಹಾಗೂ ಸೈಬರ್ ವಂಚನೆಗೆ ಒಳಗಾದಾಗ (೧೯೩೦ ಅಥವಾ ೧೧೨ ಗೆ ಕರೆ ಮಾಡಿದಾಗ ೫ ನಿಮಿಷದ ಒಳಗೆ ಹತ್ತಿರದ ಪೋಲೀಸರ ಬರುವು ಕುರಿತು ಹಾಗೂ ಅಲ್ಲಿಯವರೆಗೆ) ಕೈಗೊಳ್ಳಬೇಕಾದ ಮುಂಜಾಗೃತಾ ಕ್ರಮ ಕುರಿತು ಮಾಹಿತಿ ನೀಡಿದರು.

ಕಾಲೇಜಿನ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್, ರೋಟರಿ ಕ್ಲಬ್ ಕಾರ್ಯದರ್ಶಿ ಸಂದೇಶ್ ರಾವ್, ಮಂಜುಶ್ರೀ ಪ್ರಿಂಟರ್ಸ್‌ನ ವ್ಯವಸ್ಥಾಪಕ ಶೇಖರ್ ಟಿ. ಉಪಸ್ಥಿತರಿದ್ದರು.

ಸಹಾಯಕ ವ್ಯವಸ್ಥಾಪಕ ರವಿ ಪರಕ್ಕಜೆ ಕಾರ್ಯಕ್ರಮ ನಿರೂಪಿಸಿದರು.

Related posts

ಜೆಸಿಐ ಬೆಳ್ತಂಗಡಿ ಜೆಸಿ ಸಪ್ತಾಹ ಅಂಗವಾಗಿ ಗಣೇಶ್ ಆಸ್ಪತ್ರೆ ಇದರ ಸಹಭಾಗಿತ್ವದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

Suddi Udaya

ತೋಟತ್ತಾಡಿ: ದೊರ್ತಾಡಿ ನಿವಾಸಿ ಶಿವಣ್ಣ ಕುಂಬಾರ ನಿಧನ

Suddi Udaya

ಮುಗೇರಡ್ಕ: ಸ್ಪಂದನ ಚಾರಿಟೇಬಲ್ ಟ್ರಸ್ಟ್ , ಬೆಂಗಳೂರು ಮತ್ತು ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ಇದರ ಆಶ್ರಯದಲ್ಲಿ ಮನೆ ಹಸ್ತಾಂತರ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ದಿ| ದೇವಪ್ಪ ಗೌಡ ಉಜಿರೆ ರವರಿಗೆ ಶ್ರದ್ಧಾಂಜಲಿ

Suddi Udaya

ಶಿಶಿಲ: ಆಚಾರಿಪಾಲ್ ನಿವಾಸಿ ರಘುರಾಮ ಗೋಖಲೆ ನಿಧನ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
error: Content is protected !!