25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್‌ಡಿಎಂ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸೈಬರ್ ಅಪರಾಧಗಳ ತಡೆಗಟ್ಟುವಿಕೆ ಕುರಿತು ಮಾಹಿತಿ ಕಾರ್ಯಾಗಾರ

ಉಜಿರೆ: ಎಸ್‌ಡಿಎಂ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಸೈಬರ್ ಅಪರಾಧಗಳ ತಡೆಗಟ್ಟುವಿಕೆ ಕುರಿತು ಮಾಹಿತಿ ಕಾರ್ಯಾಗಾರ ಡಿ.30ರಂದು ನಡೆಯಿತು.

ಕಾಲೇಜಿನ ವಿದ್ಯಾರ್ಥಿನಿಯರು ಹಾಗೂ ಮಂಜುಶ್ರೀ ಪ್ರಿಂಟರ್ಸ್ ನೌಕರರಿಗಾಗಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಮಂಗಳೂರಿನ ಸಿಇಎನ್ (ಸೈಬರ್ ಎಕನಾಮಿಕ್ಸ್ ಆಂಡ್ ನಾರ್ಕೋಟಿಕ್ಸ್ ಕ್ರೈಮ್ಸ್) ಪೊಲೀಸ್ ಠಾಣಾ ಡಿ.ವೈ.ಎಸ್.ಪಿ. ಮಂಜುನಾಥ್ ಆರ್.ಜಿ. ಉದ್ಘಾಟಿಸಿ ಮಾತನಾಡಿ, ಸೈಬರ್ ಅಪರಾಧಗಳಿಗೆ ಯುವ ಜನಾಂಗ ಬಲಿಯಾಗುತ್ತಿರುವ ಕುರಿತು ಕಳವಳ ವ್ಯಕ್ತಪಡಿಸಿದರು.

ಸೈಬರ್ ತೊಂದರೆಗೆ ಒಳಗಾದಾಗ ಧೃತಿಗೆಡದೆ, ಧೈರ್ಯದಿಂದ ಎದುರಿಸುವ ಸಾಮರ್ಥ್ಯ ಬೆಳೆಸಿಕೊಂಡು ನಡೆದ ಅಪರಾಧದ ಕುರಿತ ಮಾಹಿತಿಯನ್ನು, ದಾಖಲೆಗಳನ್ನು ಜಿಲ್ಲಾ ಅಪರಾಧ ವಿಭಾಗಕ್ಕೆ ನೀಡಬೇಕು ಎಂದು ತಿಳಿಸಿದರು.

ಸಬ್ ಇನ್ಸ್‌ಪೆಕ್ಟರ್ ಮಂಜುನಾಥ್ ಡಿ. ಮಾತನಾಡಿ, ವಿವಿಧ ಸೈಬರ್ ಅಪರಾಧ ಪ್ರಕರಣಗಳ ಬಗ್ಗೆ ವಿವರವಾದ ಮಾಹಿತಿಗಳನ್ನು ವಿವರವಾಗಿ ತಿಳಿಸಿದರು ಹಾಗೂ ಸೈಬರ್ ವಂಚನೆಗೆ ಒಳಗಾದಾಗ (೧೯೩೦ ಅಥವಾ ೧೧೨ ಗೆ ಕರೆ ಮಾಡಿದಾಗ ೫ ನಿಮಿಷದ ಒಳಗೆ ಹತ್ತಿರದ ಪೋಲೀಸರ ಬರುವು ಕುರಿತು ಹಾಗೂ ಅಲ್ಲಿಯವರೆಗೆ) ಕೈಗೊಳ್ಳಬೇಕಾದ ಮುಂಜಾಗೃತಾ ಕ್ರಮ ಕುರಿತು ಮಾಹಿತಿ ನೀಡಿದರು.

ಕಾಲೇಜಿನ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್, ರೋಟರಿ ಕ್ಲಬ್ ಕಾರ್ಯದರ್ಶಿ ಸಂದೇಶ್ ರಾವ್, ಮಂಜುಶ್ರೀ ಪ್ರಿಂಟರ್ಸ್‌ನ ವ್ಯವಸ್ಥಾಪಕ ಶೇಖರ್ ಟಿ. ಉಪಸ್ಥಿತರಿದ್ದರು.

ಸಹಾಯಕ ವ್ಯವಸ್ಥಾಪಕ ರವಿ ಪರಕ್ಕಜೆ ಕಾರ್ಯಕ್ರಮ ನಿರೂಪಿಸಿದರು.

Related posts

ಆಟಿ ಅಮಾವಾಸ್ಯೆಯ ಪ್ರಯುಕ್ತ ಮುಗುಳಿ ಸವಣಾಲು ಮತ್ತು ಶ್ರವಣಗುಂಡ ಅತಿಶಯ ಕ್ಷೇತ್ರಗಳಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷರಾದ ಜೇಮ್ಸ್ ಪಟ್ಟೇರಿಲ್ ರವರಿಗೆ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದಿಂದ ಗೌರವಾರ್ಪಣೆ

Suddi Udaya

ಬಳ್ಳಮಂಜ ವಿದ್ಯಾಸಾಗರ ಸಿ.ಬಿ.ಎಸ್ಇ ಶಾಲೆಯಲ್ಲಿ ಯೋಗ ದಿನಾಚರಣೆ

Suddi Udaya

ಲೋಕಸಭಾ ಚುನಾವಣೆಯಲ್ಲಿ ಕೆ. ಆರ್.ಎಸ್. ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಮಹೇಶ್ ಶೆಟ್ಟಿ ತಿಮರೋಡಿ ರವರಿಗೆ ಮನವಿ

Suddi Udaya

ಬೆಳ್ತಂಗಡಿ ಬಿಜೆಪಿ ಕಚೇರಿಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

Suddi Udaya

ಯಕ್ಷಭಾರತಿಯಿಂದ ಭಾರತ ಮಾತಾ ಪೂಜನ ಕಾರ್ಯಕ್ರಮ

Suddi Udaya
error: Content is protected !!