23.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಜ.5: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮಡಂತ್ಯಾರು ಶಾಖೆಯಲ್ಲಿ ಉಚಿತ ಬೃಹತ್ ವೈದ್ಯಕೀಯ ನೇತ್ರ ತಪಾಸಣಾ ಮತ್ತು ದಂತಾ ತಪಾಸಣೆ ಚಿಕಿತ್ಸಾ ಶಿಬಿರ

ಮಡಂತ್ಯಾರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮಂಗಳೂರು ಇದರ ಮಡಂತ್ಯಾರು ಶಾಖೆಯ 2ನೇ ವಾರ್ಷಿಕೋತ್ಸವದ ಪ್ರಯುಕ್ತ ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ ಮಡವು, ಜೆಸಿಐ ಮಡಂತ್ಯಾರು, ಇವರ ಜಂಟಿ ಸಹಯೋಗದೊಂದಿಗೆ ಎ.ಜೆ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್, ಮಂಗಳೂರು ಇವರ ವೈದರ ತಂಡದೊಂದಿಗೆ ಉಚಿತ ಬೃಹತ್ ವೈದ್ಯಕೀಯ ನೇತ್ರ ತಪಾಸಣಾ ಮತ್ತು ದಂತಾ ತಪಾಸಣೆ ಚಿಕಿತ್ಸಾ ಶಿಬಿರ ವನ್ನು ಜ. 5 ರಂದು ಸಮಯ ಪೂವಾಹ್ನ 9.30ರಿಂದ ಅಪರಾಹ್ನ 12.30 ರವರೆಗೆ ಕಲಾ ಸಭಾಂಗಣ, ಶ್ರೀ ದುರ್ಗಾ ಕಾಂಪ್ಲೇಕ್ಸ್, ಮುಖ್ಯ ರಸ್ತೆ ಮಡಂತ್ಯಾರು ಇಲ್ಲಿ ಆಯೋಜಿಸಲಾಗಿದೆ.

ಈ ವೈದ್ಯಕೀಯ ಶಿಬಿರದಲ್ಲಿ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರ ಚಿಕಿತ್ಸೆ, ಉಚಿತ ಕನ್ನಡಕ ವಿತರಣೆ , ಮಧುಮೇಹ ತಪಾಸಣೆ , ಬಿ. ಪಿ ತಪಾಸಣೆ , ಸಾಮಾನ್ಯ ವೈದ್ಯಕೀಯ ಸಮಾಲೋಚನೆ, ಇ.ಸಿ.ಜಿ, ಕಿವಿ-ಮೂಗು,ಗಂಟಲು ತಪಾಸಣೆ, ಚರ್ಮರೋಗ ತಪಾಸಣೆ, ಬಾಯಿ ಮತ್ತು ಹಲ್ಲುಗಳ ಆರೋಗ್ಯ ತಪಾಸಣೆ, ಹುಳುಕು ಹಲ್ಲುಗಳನ್ನು ಭರ್ತಿ ಮಾಡುವುದು, ಹಲ್ಲುಗಳ ಶುಚಿ, ಇತರ ವೈದ್ಯಕೀಯ ಸೇವೆಗಳು ಹಾಗೂ ಹೆಚ್ಚಿನ ಚಿಕಿತ್ಸೆಗೆ ಸೂಕ್ತ ಸಲಹೆ ನೀಡುವುದು.


ಸಂಘದ ಸದಸ್ಯರು ಮತ್ತು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬೇಕಾಗಿ ಎಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.

Related posts

ಕು. ಸೌಜನ್ಯಳ ಕೊಲೆ ಪ್ರಕರಣ: ಆರೋಪಿಗಳ ಪತ್ತೆಗಾಗಿ ಪುದುವೆಟ್ಟು ವಿ. ಹಿಂ. ಪ. ಭಜರಂಗದಳ ವತಿಯಿಂದ ಶ್ರೀ ವನದುರ್ಗ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

Suddi Udaya

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಹೆಚ್. ಪ್ರಭಾಕರ, ಉಪಾಧ್ಯಕ್ಷರಾಗಿ ಪ್ರತಾಪ್ ಶೆಟ್ಟಿ ಆಯ್ಕೆ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನ ಮಂದಿರಕ್ಕೆ ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆಯವರ ಭೇಟಿ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಎಸ್‌ಡಿಎಂ ವಸತಿ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಮುಂಡಾಜೆ ಕಾಲೇಜು ಎನ್‌ಎಸ್‌ಎಸ್ ಶಿಬಿರ ಉದ್ಘಾಟನೆ

Suddi Udaya

ಕಡಿರುದ್ಯಾವರ ಮತ್ತು ಮುಂಡಾಜೆ ಪಂಚಾಯತ್ ಅರಿವು ಕೇಂದ್ರಗಳಿಗೆ ಕಂಪ್ಯೂಟರ್ ಹಾಗೂ ಸ್ಮಾರ್ಟ್ ಮೊಬೈಲ್ ವಿತರಣೆ

Suddi Udaya
error: Content is protected !!