25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ

ನಾವೂರು: ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ನಿಂದ ಧನುರ್ಮಾಸದ 16ನೇ ದಿನವಾದ ಇಂದು(ಡಿ.31) ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಕ್ಯಾಲೆಂಡರ್ ವರ್ಷದ ಅಂತಿಮ ದಿನದ ಪ್ರಯುಕ್ತ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ ನಡೆಯಿತು.


ಈ ಸಂದರ್ಭದಲ್ಲಿ ದೀಪ ಪ್ರಜ್ವಲನೆಯನ್ನು ಶಾಸಕ ಹರೀಶ್ ಪೂಂಜ , ಅಳದಂಗಡಿ ವೈದ್ಯರಾದ ಡಾ| ಎನ್. ಎಂ. ತುಳುಪುಳೆ, ಹಾಗೂ ಧರ್ಮಸ್ಥಳದ ಭುಜಬಲಿಯವರು ನೆರವೇರಿಸಿಕೊಟ್ಟರು.

ಅರ್ಚಕರಾದ ವೇ| ಮೂ| ದಿನೇಶ್ ಭಟ್ ಧಾರ್ಮಿಕ ವಿಧಿಗಳನ್ನು ನಡೆಸಿಕೊಟ್ಟರು. ಕು।ಸಿದ್ಧಿ ಚೇರ್ಕೂಡ್ಲು ಭಕ್ತಿ ಸ್ತುತಿಯನ್ನು ನಡೆಸಿಕೊಟ್ಟರು. ಹರೀಶ್ ಪೂಂಜ ಇಲ್ಲಿನ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆಯನ್ನು ಸೂಚಿಸಿ ಇಂತಹ ಕಾರ್ಯಗಳು ಎಲ್ಲಾ ಶ್ರದ್ಧಾಕೇಂದ್ರಗಳಿಗೂ ವಿಸ್ತರಿಸುವಂತಾಗಲಿ ಎಂದು ಹಾರೈಸಿದರು.

ದೇವಸ್ಥಾನ ಟ್ರಸ್ಟ್ ನ ಅಧ್ಯಕ್ಷ ದ ಹರೀಶ್ ಸಾಲ್ಯಾನ್ ಹಾಗೂ ಟ್ರಸ್ಟ್ ನ ಸದಸ್ಯರು ಹಾಗೂ ಭಗವದ್ಭಕ್ತರು ಭಾಗವಹಿಸಿದರು.
ಸಿಂಡಿಕೇಟ್ ಬ್ಯಾಂಕ್ ನ ನಿವೃತ್ತ ಹಿರಿಯ ಪ್ರಬಂಧಕರಾದ ಎಸ್ ಎನ್ ಭಟ್, ನಾವೂರಿನ ವೈದ್ಯರಾದ ಡಾ। ಪ್ರದೀಪ್ ಉಪಸ್ಥಿತರಿದ್ದರು.

ಪ್ರಧಾನ ಕಾರ್ಯದರ್ಶಿಗಳಾದ ಧರ್ಣಪ್ಪ ಮೂಲ್ಯ ಧನ್ಯವಾದವನ್ನಿತ್ತರು.

Related posts

ಕಾಜೂರು ಉರೂಸ್ ಗೆ ಅದ್ದೂರಿ ಚಾಲನೆ

Suddi Udaya

ಎಸ್.ಡಿ.ಎಂ ಪ.ಪೂ. ಕಾಲೇಜಿನಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕ್ರತ ಡಾ. ಪ್ರಸನ್ನಕುಮಾರ ಐತಾಳರಿಗೆ ಸನ್ಮಾನ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ ಒಕ್ಕೂಟ ಬಲವರ್ಧನೆ ಬಗ್ಗೆ ತರಬೇತಿ ಕಾರ್ಯಾಗಾರ

Suddi Udaya

ವಲಯ ಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾಟ: ಬಳಂಜ ಪ್ರೌಢ ಶಾಲೆ ಪ್ರಥಮ

Suddi Udaya

ಕನ್ಯಾಡಿ ಶ್ರೀಗಳಿಗೆ ಶ್ರೀಕ್ಷೇತ್ರ ಗೆಜ್ಜೆಗಿರಿಯ ವತಿಯಿಂದ ಅಭಿನಂದನೆ

Suddi Udaya

ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನ-ರೂ 2ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಬೊಳ್ಳಾಜೆ- ಡೆಂಜೋಲಿ-ಪಡಂಗಡಿ ರಸ್ತೆ ಕಾಮಗಾರಿಗೆ ಚಾಲನೆ

Suddi Udaya
error: Content is protected !!