April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ

ನಾವೂರು: ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ನಿಂದ ಧನುರ್ಮಾಸದ 16ನೇ ದಿನವಾದ ಇಂದು(ಡಿ.31) ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಕ್ಯಾಲೆಂಡರ್ ವರ್ಷದ ಅಂತಿಮ ದಿನದ ಪ್ರಯುಕ್ತ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ ನಡೆಯಿತು.


ಈ ಸಂದರ್ಭದಲ್ಲಿ ದೀಪ ಪ್ರಜ್ವಲನೆಯನ್ನು ಶಾಸಕ ಹರೀಶ್ ಪೂಂಜ , ಅಳದಂಗಡಿ ವೈದ್ಯರಾದ ಡಾ| ಎನ್. ಎಂ. ತುಳುಪುಳೆ, ಹಾಗೂ ಧರ್ಮಸ್ಥಳದ ಭುಜಬಲಿಯವರು ನೆರವೇರಿಸಿಕೊಟ್ಟರು.

ಅರ್ಚಕರಾದ ವೇ| ಮೂ| ದಿನೇಶ್ ಭಟ್ ಧಾರ್ಮಿಕ ವಿಧಿಗಳನ್ನು ನಡೆಸಿಕೊಟ್ಟರು. ಕು।ಸಿದ್ಧಿ ಚೇರ್ಕೂಡ್ಲು ಭಕ್ತಿ ಸ್ತುತಿಯನ್ನು ನಡೆಸಿಕೊಟ್ಟರು. ಹರೀಶ್ ಪೂಂಜ ಇಲ್ಲಿನ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆಯನ್ನು ಸೂಚಿಸಿ ಇಂತಹ ಕಾರ್ಯಗಳು ಎಲ್ಲಾ ಶ್ರದ್ಧಾಕೇಂದ್ರಗಳಿಗೂ ವಿಸ್ತರಿಸುವಂತಾಗಲಿ ಎಂದು ಹಾರೈಸಿದರು.

ದೇವಸ್ಥಾನ ಟ್ರಸ್ಟ್ ನ ಅಧ್ಯಕ್ಷ ದ ಹರೀಶ್ ಸಾಲ್ಯಾನ್ ಹಾಗೂ ಟ್ರಸ್ಟ್ ನ ಸದಸ್ಯರು ಹಾಗೂ ಭಗವದ್ಭಕ್ತರು ಭಾಗವಹಿಸಿದರು.
ಸಿಂಡಿಕೇಟ್ ಬ್ಯಾಂಕ್ ನ ನಿವೃತ್ತ ಹಿರಿಯ ಪ್ರಬಂಧಕರಾದ ಎಸ್ ಎನ್ ಭಟ್, ನಾವೂರಿನ ವೈದ್ಯರಾದ ಡಾ। ಪ್ರದೀಪ್ ಉಪಸ್ಥಿತರಿದ್ದರು.

ಪ್ರಧಾನ ಕಾರ್ಯದರ್ಶಿಗಳಾದ ಧರ್ಣಪ್ಪ ಮೂಲ್ಯ ಧನ್ಯವಾದವನ್ನಿತ್ತರು.

Related posts

ಗುರಿಪಳ್ಳ ಜಯನಗರದಲ್ಲಿ ಬ್ರಹ್ಮಶ್ರೀ ಬಿಲ್ಲವ ಮಹಿಳಾ ಸ್ವ ಸಹಾಯ ಸಂಘ ಉದ್ಘಾಟನೆ

Suddi Udaya

ರಾಜಕೇಸರಿ ಸಂಘಟನೆಯ ನೇತೃತ್ವದಲ್ಲಿ ಬೃಹತ್ ಉಚಿತ ನೇತ್ರ ತಪಾಸಣೆ ಶಿಬಿರ

Suddi Udaya

ಪಾರೆಂಕಿ ಶ್ರೀ ವಿದ್ಯಾಸರಸ್ವತಿ ಭಜನಾ ಮಂಡಳಿಯಿಂದ ಭಜಕ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಮಂಜೊಟ್ಟಿ ದ್ವಿಚಕ್ರ ವಾಹನಕ್ಕೆಬಸ್‌ ಡಿಕ್ಕಿ: ಗಂಭೀರ ಗಾಯಗೊಂಡಿದ್ದ ಯುವಕ ಸಾವು

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ: ಮಗನನ್ನು ರಕ್ಷಿಸಲು ಹೋಗಿ ತಂದೆ ನೀರುಪಾಲು

Suddi Udaya
error: Content is protected !!