July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ

ನಾವೂರು: ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ನಿಂದ ಧನುರ್ಮಾಸದ 16ನೇ ದಿನವಾದ ಇಂದು(ಡಿ.31) ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಕ್ಯಾಲೆಂಡರ್ ವರ್ಷದ ಅಂತಿಮ ದಿನದ ಪ್ರಯುಕ್ತ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ ನಡೆಯಿತು.


ಈ ಸಂದರ್ಭದಲ್ಲಿ ದೀಪ ಪ್ರಜ್ವಲನೆಯನ್ನು ಶಾಸಕ ಹರೀಶ್ ಪೂಂಜ , ಅಳದಂಗಡಿ ವೈದ್ಯರಾದ ಡಾ| ಎನ್. ಎಂ. ತುಳುಪುಳೆ, ಹಾಗೂ ಧರ್ಮಸ್ಥಳದ ಭುಜಬಲಿಯವರು ನೆರವೇರಿಸಿಕೊಟ್ಟರು.

ಅರ್ಚಕರಾದ ವೇ| ಮೂ| ದಿನೇಶ್ ಭಟ್ ಧಾರ್ಮಿಕ ವಿಧಿಗಳನ್ನು ನಡೆಸಿಕೊಟ್ಟರು. ಕು।ಸಿದ್ಧಿ ಚೇರ್ಕೂಡ್ಲು ಭಕ್ತಿ ಸ್ತುತಿಯನ್ನು ನಡೆಸಿಕೊಟ್ಟರು. ಹರೀಶ್ ಪೂಂಜ ಇಲ್ಲಿನ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆಯನ್ನು ಸೂಚಿಸಿ ಇಂತಹ ಕಾರ್ಯಗಳು ಎಲ್ಲಾ ಶ್ರದ್ಧಾಕೇಂದ್ರಗಳಿಗೂ ವಿಸ್ತರಿಸುವಂತಾಗಲಿ ಎಂದು ಹಾರೈಸಿದರು.

ದೇವಸ್ಥಾನ ಟ್ರಸ್ಟ್ ನ ಅಧ್ಯಕ್ಷ ದ ಹರೀಶ್ ಸಾಲ್ಯಾನ್ ಹಾಗೂ ಟ್ರಸ್ಟ್ ನ ಸದಸ್ಯರು ಹಾಗೂ ಭಗವದ್ಭಕ್ತರು ಭಾಗವಹಿಸಿದರು.
ಸಿಂಡಿಕೇಟ್ ಬ್ಯಾಂಕ್ ನ ನಿವೃತ್ತ ಹಿರಿಯ ಪ್ರಬಂಧಕರಾದ ಎಸ್ ಎನ್ ಭಟ್, ನಾವೂರಿನ ವೈದ್ಯರಾದ ಡಾ। ಪ್ರದೀಪ್ ಉಪಸ್ಥಿತರಿದ್ದರು.

ಪ್ರಧಾನ ಕಾರ್ಯದರ್ಶಿಗಳಾದ ಧರ್ಣಪ್ಪ ಮೂಲ್ಯ ಧನ್ಯವಾದವನ್ನಿತ್ತರು.

Related posts

ಸುರ್ಯ ಸದಾಶಿವರುದ್ರ ದೇವಸ್ಥಾನ ಪ್ರತಿಷ್ಠಾ ವಾರ್ಷಿಕೋತ್ಸವ

Suddi Udaya

ಉಡುಪಿ:ಐದನೇ ರಾಷ್ಟ್ರೀಯ ಮಟ್ಟದ ಆಹ್ವಾನಿತ ಕರಾಟೆ ಚಾಂಪಿಯನ್ ಶಿಪ್

Suddi Udaya

ಬೆಳ್ತಂಗಡಿ ಶ್ರೀ ದುರ್ಗಾ ಟೆಕ್ಸ್ಟ್ ಟೈಲ್ಸ್ ನ ರಾಜುರಾಮ್ ರಾಜಸ್ಥಾನದಲ್ಲಿ ನಡೆದ ಬೈಕ್ ಅಪಘಾತದಲ್ಲಿ ಸಾವು

Suddi Udaya

ನಾವೂರು ಕೈಕಂಬ ಪ್ರದೇಶದ ಲಾಯಿಲ- ಕಿಲ್ಲೂರು ಪಿಡ್ಲೂಡಿ ರಸ್ತೆ ಬದಿಯ ಚರಂಡಿಯಲ್ಲಿ ತುಂಬಿದ ಹೂಳು:ಚರಂಡಿ ಹೂಳು ತೆಗೆದ ಯುವ ಉದ್ಯಮಿ ಅನಿಲ್ ಎಂ.ಜೆ ನರ್ನೊಟ್ಟು : ಸಾರ್ವಜನಿಕರ ಪ್ರಶಂಸೆ

Suddi Udaya

ನಡ: ಪುತ್ಯೆಯಲ್ಲಿ ಗುಡ್ಡ ಜರಿದು ಮನೆಗೆ ಹಾನಿ

Suddi Udaya

‘ಪ್ರೇರಣಾ – 2026’ ರಾಷ್ಟ್ರ ಮಟ್ಟದ ಸಾಂಸ್ಕೃತಿಕ ಉತ್ಸವ : ಉಜಿರೆಯ ಎಸ್.ಡಿ.ಎಂ ಕಾಲೇಜು ಚಾಂಪಿಯನ್ಸ್

Suddi Udaya
error: Content is protected !!