23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ

ನಾವೂರು: ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ನಿಂದ ಧನುರ್ಮಾಸದ 16ನೇ ದಿನವಾದ ಇಂದು(ಡಿ.31) ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಕ್ಯಾಲೆಂಡರ್ ವರ್ಷದ ಅಂತಿಮ ದಿನದ ಪ್ರಯುಕ್ತ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ ನಡೆಯಿತು.


ಈ ಸಂದರ್ಭದಲ್ಲಿ ದೀಪ ಪ್ರಜ್ವಲನೆಯನ್ನು ಶಾಸಕ ಹರೀಶ್ ಪೂಂಜ , ಅಳದಂಗಡಿ ವೈದ್ಯರಾದ ಡಾ| ಎನ್. ಎಂ. ತುಳುಪುಳೆ, ಹಾಗೂ ಧರ್ಮಸ್ಥಳದ ಭುಜಬಲಿಯವರು ನೆರವೇರಿಸಿಕೊಟ್ಟರು.

ಅರ್ಚಕರಾದ ವೇ| ಮೂ| ದಿನೇಶ್ ಭಟ್ ಧಾರ್ಮಿಕ ವಿಧಿಗಳನ್ನು ನಡೆಸಿಕೊಟ್ಟರು. ಕು।ಸಿದ್ಧಿ ಚೇರ್ಕೂಡ್ಲು ಭಕ್ತಿ ಸ್ತುತಿಯನ್ನು ನಡೆಸಿಕೊಟ್ಟರು. ಹರೀಶ್ ಪೂಂಜ ಇಲ್ಲಿನ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆಯನ್ನು ಸೂಚಿಸಿ ಇಂತಹ ಕಾರ್ಯಗಳು ಎಲ್ಲಾ ಶ್ರದ್ಧಾಕೇಂದ್ರಗಳಿಗೂ ವಿಸ್ತರಿಸುವಂತಾಗಲಿ ಎಂದು ಹಾರೈಸಿದರು.

ದೇವಸ್ಥಾನ ಟ್ರಸ್ಟ್ ನ ಅಧ್ಯಕ್ಷ ದ ಹರೀಶ್ ಸಾಲ್ಯಾನ್ ಹಾಗೂ ಟ್ರಸ್ಟ್ ನ ಸದಸ್ಯರು ಹಾಗೂ ಭಗವದ್ಭಕ್ತರು ಭಾಗವಹಿಸಿದರು.
ಸಿಂಡಿಕೇಟ್ ಬ್ಯಾಂಕ್ ನ ನಿವೃತ್ತ ಹಿರಿಯ ಪ್ರಬಂಧಕರಾದ ಎಸ್ ಎನ್ ಭಟ್, ನಾವೂರಿನ ವೈದ್ಯರಾದ ಡಾ। ಪ್ರದೀಪ್ ಉಪಸ್ಥಿತರಿದ್ದರು.

ಪ್ರಧಾನ ಕಾರ್ಯದರ್ಶಿಗಳಾದ ಧರ್ಣಪ್ಪ ಮೂಲ್ಯ ಧನ್ಯವಾದವನ್ನಿತ್ತರು.

Related posts

ಉಜಿರೆ ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ಸಂಸ್ಕೃತೋತ್ಸವ

Suddi Udaya

ಎಸ್.ಡಿ.ಯಂ ಇಂಜಿನಿಯರಿಂಗ್ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಹಾಗೂ ಕಬಡ್ಡಿಯಲ್ಲಿ ಗಮನೀಯ ಸಾಧನೆಯನ್ನು ಮಾಡಿದ್ದ ಕು. ಚಿನ್ಮಯಿ ರವರ ಪ್ರಾಯೋಜಕತ್ವದಲ್ಲಿ ಕ್ರೀಡಾ ಕಿಟ್ ವಿತರಣೆ

Suddi Udaya

ಮದಡ್ಕ: ಶ್ರೀ ರಾಮನವಮಿ ಉತ್ಸವ ಭಜನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಿಶಿಲ: ಸರಕಾರಿ ಮೀಸಲು ಅರಣ್ಯದಿಂದ ಮರಕಳ್ಳತನ ಪ್ರಕರಣ : ಓರ್ವನ ಬಂಧನ

Suddi Udaya

ಸಾಹಿತ್ಯ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಬಿ.ಕಾಂ ವಿಭಾಗಕ್ಕೆ ಪ್ರಶಸ್ತಿ

Suddi Udaya

ಶರತ್ ಗೋರೆ ಅವರಿಗೆ ಗೌರವ ಡಾಕ್ಟರೇಟ್ ಪದವಿ

Suddi Udaya
error: Content is protected !!