25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಸಮಸ್ಯೆ

ಹೊಸ ವರ್ಷದ ನೆಪದಲ್ಲಿ ವಂಚನೆ ಸಾಧ್ಯತೆ ‘ಎಪಿಕೆ ಫೈಲ್’ ತೆರೆಯದಂತೆ ಸೂಚನೆ

ಹೊಸ ವರ್ಷದ ಸಂದರ್ಭವನ್ನು ಬಳಸಿಕೊಂಡು ಸೈಬ‌ರ್ ಕ್ರಿಮಿನಲ್‌ಗಳು ಸಾರ್ವಜನಿಕರ ಮೊಬೈಲ್‌ಗಳಿಗೆ ಹಾನಿಕಾರಕ ಲಿಂಕ್ ಮತ್ತು ಎಪಿಕೆ ಫೈಲ್‌ಗಳನ್ನು ಕಳುಹಿಸಿ ಸಾರ್ವಜನಿಕರ ಮೊಬೈಲ್‌ಗಳನ್ನು ಹ್ಯಾಕ್ ಮಾಡುವ ಸಾಧ್ಯತೆ ಇರುತ್ತದೆ. ನಂತರ ಹ್ಯಾಕ್ ಮಾಡಿದ ಮೊಬೈಲಿನಿಂದ ವಾಟ್ಸಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳ ಮೂಲಕ ಹಾನಿಕಾರಕ ಲಿಂಕ್ ಮತ್ತು ಎಪಿಕೆ ಫೈಲ್‌ಗಳನ್ನು ದೊಡ್ಡ ಮಟ್ಟದಲ್ಲಿ ಶೇ‌ರ್ ಮಾಡುವ ಸಾಧ್ಯತೆ ಇರುತ್ತದೆ. ಸಾರ್ವಜನಿಕರು ಈ ರೀತಿಯ ಹೊಸ ವರ್ಷದ ಶುಭಾಶಯ ಕೋರುವ ಯಾವುದೇ ಹಾನಿಕಾರಕ ಲಿಂಕ್‌ಗಳು ಮತ್ತು ಎಪಿಕೆ ಫೈಲ್‌ಗಳನ್ನು ವಾಟ್ಸಪ್ ಸೇರಿದಂತೆ ಯಾವುದೇ ಸಾಮಾಜಿಕ ಜಾಲತಾಣದಿಂದ ಸ್ವೀಕರಿಸಿಕೊಂಡರೆ ಅದನ್ನು ತಕ್ಷಣ ಡಿಲೀಟ್ ಮಾಡಬೇಕು. ಯಾವುದೇ ಕಾರಣಕ್ಕೂ ಹಾನಿಕರ ಲಿಂಕ್ ಮತ್ತು ಎಪಿಕೆ ಫೈಲ್‌ಗಳನ್ನು ಯಾರಿಗೂ ಶೇರ್ ಮಾಡಬಾರದು.

ಯಾವುದೇ ಸೈಬರ್ ಕ್ರೈಂ ಅಪರಾಧಕ್ಕೆ ಒಳಗಾದರೆ ಕೂಡಲೇ 1930ಕ್ಕೆ ಕರೆ ಮಾಡಿ ಅಥವಾ www.cybercrime.gov.in ವೆಬ್‌ಸೈಟ್‌ನಲ್ಲಿ ದೂರು ದಾಖಲಿಸುವಂತೆ ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಾಷ್ಟ್ರೀಯ ಯುವದಿನಾಚರಣೆ

Suddi Udaya

ಗುಂಡೂರಿ: ಗುಡ್ಡ ಜರಿದು ಮನೆ ಬದಿಯಲ್ಲಿ ಬಿದ್ದ ಮಣ್ಣಿನ ರಾಶಿಯ ತೆರವು ಕಾರ್ಯ

Suddi Udaya

ಬೆಳ್ತಂಗಡಿಗೆ ಲಗ್ಗೆ ಇಟ್ಟ ಅತ್ಯಾಧುನಿಕ ‘ಫೋರ್ಸ್ ಅರ್ಬಾನಿಯಾ’-ಐಷಾರಾಮಿ ಪ್ರಯಾಣದ ಹೊಸ ಪರ್ವ ಆರಂಭ

Suddi Udaya

ಕೊಕ್ಕಡ: ಮೈಪಾಲ ಸೇತುವೆ ಬಳಿ ನೀರಿನ ಟ್ರಾಕ್ಟರ್‌ ಪಲ್ಟಿಯಾಗಿ ಕಾರ್ಮಿಕ ಸಾವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದಿಂದ ಹೊಗೆ ಮನೆಗೆ ಬೆಂಕಿ‌ ಬಿದ್ದು ನಷ್ಟ ಅನುಭವಿಸಿದ ಕಿನ್ನಿ ಗೌಡರಿಗೆ ಪರಿಹಾರ ನಿಧಿ ಹಸ್ತಾಂತರ

Suddi Udaya

ಧರ್ಮಸ್ಥಳ: ದೊಂಡೋಲೆ ನಿವಾಸಿ ನಾಗೇಶ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!