26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಅಯ್ಯಪ್ಪ ಭಕ್ತರ ಮಹಾಸಂಗಮ ಸಮಾವೇಶದಲ್ಲಿ ಸಂಪತ್ ಬಿ. ಸುವರ್ಣ ರವರಿಂದ 7 ಹಕ್ಕೋತ್ತಾಯಗಳ ಮಂಡನೆ

ಅಯ್ಯಪ್ಪ ಭಕ್ತರ ಮಹಾಸಂಗಮ ಬೆಳ್ತಂಗಡಿ ತಾಲೂಕು ಸಮಾವೇಶದಲ್ಲಿ 7 ಹಕ್ಕೋತ್ತಾಯಗಳನ್ನು ಮಂಡಿಸಿ ಸರಕಾರಕ್ಕೆ ಸಲ್ಲಿಸಲಾಯಿತು.

ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಸಂಪತ್ ಬಿ. ಸುವರ್ಣ ಹಕ್ಕೋತ್ತಾಯ ಮಂಡಿಸಿದರು. 1. ಶಬರಿಮಲೆ ಯಾತ್ರೆಯ ಸಂದರ್ಭದಲ್ಲಿ ಹೆಚ್ಚುವರಿ ರೈಲಿನ ವ್ಯವಸ್ಥೆ ಮಾಡುವುದು ಮತ್ತು ಕೊಟ್ಟಾಯಂ ಮಾರ್ಗದಲ್ಲಿ ಸರಕಾರಿ ಬಸ್ಸಿನ ಹೆಚ್ಚುವರಿ ವ್ಯವಸ್ಥೆ ಮಾಡಬೇಕು. 2. ಕರ್ನಾಟಕದ ಬೇರೆ, ಬೇರೆ ಭಾಗಗಳಿಂದ ಪಾದಯಾತ್ರೆಯ ಮೂಲಕ ಬರುವ ಅಯ್ಯಪ್ಪ ವ್ರತಧಾರಿಗಳಿಗೆ ಆಹಾರ, ಕುಡಿಯುವ ನೀರು, ತಂಗುದಾಣ, ಆರೋಗ್ಯ ತಪಾಸಣೆ, ರಸ್ತೆ ದುರಸ್ತಿ, ಕನ್ನಡ ಮಾಹಿತಿ ಕೇಂದ್ರ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು. 3. ಸನ್ನಿಧಾನದಲ್ಲಿರುವ ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂನ ಕೇಂದ್ರದಲ್ಲಿ ಅನ್ನದಾನ ವ್ಯವಸ್ಥೆ ಪುನಃರಾಂಭಕ್ಕೆ ಅನುಮತಿ ನೀಡಬೇಕು. 4. ಕರ್ನಾಟಕದ ಲಕ್ಷಾಂತರ ಅಯ್ಯಪ್ಪ ಭಕ್ತರ ಸುಗಮ ಯಾತ್ರೆಗಾಗಿ ನಿಲುಕಲ್ಲಿನಲ್ಲಿ ಮಂಜೂರಾದ ಜಾಗದಲ್ಲಿ ಕರ್ನಾಟಕ ಭವನದ ಮೂಲಕ ವಸತಿಗೃಹ ನಿರ್ಮಾಣ ಮಾಡಬೇಕು.5. ಪ್ರತಿ ಊರಿನ ಅಯ್ಯಪ್ಪ ಶಿಬಿರಗಳಿಗೆ ಮತ್ತು ಅಯ್ಯಪ್ಪ ಮಂದಿರ ನಿರ್ಮಾಣಕ್ಕಾಗಿ ಸರಕಾರ ಕನಿಷ್ಠ ೨೦ ಸೆಂಟ್ಸ್ ಜಾಗವನ್ನು ಮಂಜೂರುಗೊಳಿಸಬೇಕು. 6. ಶಾಲಾ ಪಠ್ಯ ಪುಸ್ತಕಗಳಲ್ಲಿ ಶಬರಿಮಲೆ ಅಯ್ಯಪ್ಪ ಕ್ಷೇತ್ರದ ಬಗ್ಗೆ ಹಾಗೂ ಅಯ್ಯಪ್ಪ ವ್ರತಧಾರಿಗಳ ಆಚರಣೆ ಬಗ್ಗೆ ಸೇರ್ಪಡೆಗೊಳಿಸಬೇಕು. 7. ಶಬರಿಮಲೆಯಾತ್ರೆಯಲ್ಲಿ ಗುರುಗಳಾಗಿ ಸೇವೆ ಸಲ್ಲಿಸುತ್ತಿರುವವರಿಗೆ ಸರಕಾರ ಧಾರ್ಮಿಕ ದತ್ತಿ ಇಲಾಖೆ ಮೂಲಕ ಮಾಸಶನ ಮತ್ತು ಇನ್ನಿತರ ಸೌಲಭ್ಯಗಳನ್ನು ಒದಗಿಸಬೇಕು.

Related posts

ಶ್ರೀ ಗು.ನಾ.ಸ್ವಾ. ಸೇವಾ ಸಂಘ, ಮಹಿಳಾ ಬಿಲ್ಲವ ವೇದಿಕೆ, ಯುವ ಬಿಲ್ಲವ ವೇದಿಕೆ ಕುವೆಟ್ಟು- ಓಡಿಲ್ನಾಳ ಗ್ರಾಮ ಸಮಿತಿ ವತಿಯಿಂದ ಆಟಿಡೊಂಜಿ ಕೂಟ

Suddi Udaya

ಪಿಲಿಚಾಮುಂಡಿಕಲ್ಲು ದೊಂಪದಬಲಿ ಉತ್ಸವ ಸಮಿತಿಯ ನಿಕಟಪೂರ್ವ ಉಪಾಧ್ಯಕ್ಷ ವಿಶ್ವನಾಥ ಕೋಟ್ಯಾನ್ ನಿಧನ

Suddi Udaya

ಬೆಳ್ತಂಗಡಿ ಔಷಧಿ ವ್ಯಾಪಾರಸ್ಥರ ಸಂಘದ ಜಂಟಿ ಸಭೆ

Suddi Udaya

ಪುಂಜಾಲಕಟ್ಟೆ : ತೀರ ಹದಗೆಟ್ಟ ರಸ್ತೆ: ಜೂ. 23 ರಂದು ಸ್ಪಂದನ ರಿಕ್ಷಾ ಚಾಲಕ ಮಾಲಕರ ಸಂಘದಿಂದ ಅನಿರ್ದಿಷ್ಟವಾಗಿ ಆಟೋ ರಿಕ್ಷಾ ಸ್ಥಗಿತ

Suddi Udaya

ದೈವ ಕ್ಷೇತ್ರ ಬಡೆಕ್ಕಾವು ಗುತ್ತುವಿನಲ್ಲಿ ಅಪ್ಪೆ ಕಲ್ಲುರ್ಟಿ ದೈವದ ದೊಂದಿ ಕೋಲ: ಜೋಡು ಜೀಟಿಗೆ ನಾಟಕ ಪ್ರದರ್ಶನ

Suddi Udaya

ಸುಳ್ಯ ಶಾಸಕಿಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ : ಬೆಳ್ತಂಗಡಿ ಠಾಣೆಯಲ್ಲಿ ಬಿಜೆಪಿ ಎಸ್ಸಿ ಮೋರ್ಚಾದಿಂದ ದೂರು ದಾಖಲು

Suddi Udaya
error: Content is protected !!