27 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಅಯ್ಯಪ್ಪ ಭಕ್ತರ ಮಹಾಸಂಗಮ ಸಮಾವೇಶದಲ್ಲಿ ಸಂಪತ್ ಬಿ. ಸುವರ್ಣ ರವರಿಂದ 7 ಹಕ್ಕೋತ್ತಾಯಗಳ ಮಂಡನೆ

ಅಯ್ಯಪ್ಪ ಭಕ್ತರ ಮಹಾಸಂಗಮ ಬೆಳ್ತಂಗಡಿ ತಾಲೂಕು ಸಮಾವೇಶದಲ್ಲಿ 7 ಹಕ್ಕೋತ್ತಾಯಗಳನ್ನು ಮಂಡಿಸಿ ಸರಕಾರಕ್ಕೆ ಸಲ್ಲಿಸಲಾಯಿತು.

ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಸಂಪತ್ ಬಿ. ಸುವರ್ಣ ಹಕ್ಕೋತ್ತಾಯ ಮಂಡಿಸಿದರು. 1. ಶಬರಿಮಲೆ ಯಾತ್ರೆಯ ಸಂದರ್ಭದಲ್ಲಿ ಹೆಚ್ಚುವರಿ ರೈಲಿನ ವ್ಯವಸ್ಥೆ ಮಾಡುವುದು ಮತ್ತು ಕೊಟ್ಟಾಯಂ ಮಾರ್ಗದಲ್ಲಿ ಸರಕಾರಿ ಬಸ್ಸಿನ ಹೆಚ್ಚುವರಿ ವ್ಯವಸ್ಥೆ ಮಾಡಬೇಕು. 2. ಕರ್ನಾಟಕದ ಬೇರೆ, ಬೇರೆ ಭಾಗಗಳಿಂದ ಪಾದಯಾತ್ರೆಯ ಮೂಲಕ ಬರುವ ಅಯ್ಯಪ್ಪ ವ್ರತಧಾರಿಗಳಿಗೆ ಆಹಾರ, ಕುಡಿಯುವ ನೀರು, ತಂಗುದಾಣ, ಆರೋಗ್ಯ ತಪಾಸಣೆ, ರಸ್ತೆ ದುರಸ್ತಿ, ಕನ್ನಡ ಮಾಹಿತಿ ಕೇಂದ್ರ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು. 3. ಸನ್ನಿಧಾನದಲ್ಲಿರುವ ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂನ ಕೇಂದ್ರದಲ್ಲಿ ಅನ್ನದಾನ ವ್ಯವಸ್ಥೆ ಪುನಃರಾಂಭಕ್ಕೆ ಅನುಮತಿ ನೀಡಬೇಕು. 4. ಕರ್ನಾಟಕದ ಲಕ್ಷಾಂತರ ಅಯ್ಯಪ್ಪ ಭಕ್ತರ ಸುಗಮ ಯಾತ್ರೆಗಾಗಿ ನಿಲುಕಲ್ಲಿನಲ್ಲಿ ಮಂಜೂರಾದ ಜಾಗದಲ್ಲಿ ಕರ್ನಾಟಕ ಭವನದ ಮೂಲಕ ವಸತಿಗೃಹ ನಿರ್ಮಾಣ ಮಾಡಬೇಕು.5. ಪ್ರತಿ ಊರಿನ ಅಯ್ಯಪ್ಪ ಶಿಬಿರಗಳಿಗೆ ಮತ್ತು ಅಯ್ಯಪ್ಪ ಮಂದಿರ ನಿರ್ಮಾಣಕ್ಕಾಗಿ ಸರಕಾರ ಕನಿಷ್ಠ ೨೦ ಸೆಂಟ್ಸ್ ಜಾಗವನ್ನು ಮಂಜೂರುಗೊಳಿಸಬೇಕು. 6. ಶಾಲಾ ಪಠ್ಯ ಪುಸ್ತಕಗಳಲ್ಲಿ ಶಬರಿಮಲೆ ಅಯ್ಯಪ್ಪ ಕ್ಷೇತ್ರದ ಬಗ್ಗೆ ಹಾಗೂ ಅಯ್ಯಪ್ಪ ವ್ರತಧಾರಿಗಳ ಆಚರಣೆ ಬಗ್ಗೆ ಸೇರ್ಪಡೆಗೊಳಿಸಬೇಕು. 7. ಶಬರಿಮಲೆಯಾತ್ರೆಯಲ್ಲಿ ಗುರುಗಳಾಗಿ ಸೇವೆ ಸಲ್ಲಿಸುತ್ತಿರುವವರಿಗೆ ಸರಕಾರ ಧಾರ್ಮಿಕ ದತ್ತಿ ಇಲಾಖೆ ಮೂಲಕ ಮಾಸಶನ ಮತ್ತು ಇನ್ನಿತರ ಸೌಲಭ್ಯಗಳನ್ನು ಒದಗಿಸಬೇಕು.

Related posts

ಮಚ್ಚಿನ ಪ್ರೌಢಶಾಲೆಗೆ ಕ್ರೀಡಾ ಸಾಮಾಗ್ರಿಗಳ ವಿತರಣೆ ಹಾಗೂ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗೆ ವಿವಿಧ ಕ್ರೀಡಾಕೂಟಗಳು

Suddi Udaya

ಅಪಘಾತದಲ್ಲಿ ನಿಧನರಾದ ನಾವೂರು ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿ ಶಾಝಿನ್ ರವರಿಗೆ ಶ್ರದ್ಧಾಂಜಲಿ

Suddi Udaya

ಉಜಿರೆ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ

Suddi Udaya

ಮಹಿಳೆಯ ಮೊಬೈಲನ್ನು ಕದ್ದು, ಫೋನ್ ಪೇ ಮೂಲಕ ಹಣ ವಂಚನೆ: ತನ್ನ ಸ್ನೇಹಿತರಿಗೆ ಹಣ ಕಳುಸಿದ್ದ ಆರೋಪಿ ವಿರುದ್ಧ ಕೇಸ್ ದಾಖಲು

Suddi Udaya

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನಲ್ಲಿ ಶಿಕ್ಷಕ ರಕ್ಷಕ ಸಂಘದ ಸಭೆ

Suddi Udaya

ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಸ್ತ್ರೀ ಶಕ್ತಿ ಸಂವರ್ಧನಾ ತರಬೇತಿ

Suddi Udaya
error: Content is protected !!