26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಜ.2: ಉಜಿರೆ ಪೆರ್ಲ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ವತಿಯಿಂದ ಶ್ರೀ ನಾಗದೇವರ ಶಿಲಾ ಪ್ರತಿಷ್ಠೆ ಮತ್ತು ಶ್ರೀ ಪಂಜುರ್ಲಿ ದೈವದ ಪ್ರತಿಷ್ಠಾ ಮಹೋತ್ಸವ ಶ್ರೀ ಲಕ್ಷ್ಮೀ ಜನಾರ್ದನ ಮತ್ತು ಶ್ರೀ ಉಮಾಮಹೇಶ್ವರ ದೇವರ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮ

ಉಜಿರೆ : ಉಜಿರೆ ಪೆರ್ಲ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ವತಿಯಿಂದ ಬ್ರಹ್ಮಶ್ರೀ ವೇ| ಮೂ| ನೀಲೇಶ್ವರ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರಾದ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾದ ಶರತ್‌ಕೃಷ್ಣ ಪಡುವೆಟ್ನಯರ ಗೌರವ ಉಪಸ್ಥಿತಿಯಲ್ಲಿ ಶ್ರೀ ಲಕ್ಷ್ಮೀಜನಾರ್ದನ ಹಾಗೂ ಶ್ರೀ ಉಮಾಮಹೇಶ್ವರ ಸಾನ್ನಿಧ್ಯದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ನಾಗದೇವರ ಶಿಲಾ ಪ್ರತಿಷ್ಠೆ ಮತ್ತು ಶ್ರೀ ಪಂಜುರ್ಲಿ ದೈವದ ಪ್ರತಿಷ್ಠಾ ಮಹೋತ್ಸವ ಶ್ರೀ ಲಕ್ಷ್ಮೀ ಜನಾರ್ದನ ಮತ್ತು ಶ್ರೀ ಉಮಾಮಹೇಶ್ವರ ದೇವರ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮವು ಜ.2 ರಂದು ನಡೆಯಲಿದೆ.

ಕಾರ್ಯಕ್ರಮಗಳು: ಜ.1 ರಂದು ಬೆಳಿಗ್ಗೆ ಪೂರ್ವಭಾವಿ ಹೋಮಗಳು ನೆರವೇರಲಿದೆ. ಜ.2ರಂದು ಗಣಪತಿ ಹೋಮದಿಂದ ಪ್ರಾರಂಭಿಸಿ ವಿವಿಧ ಹೋಮ-ಹವನ, ಶ್ರೀ ನಾಗ ದೇವರ ಬಿಂಬ ಪ್ರತಿಷ್ಠೆ, ಪಂಜುರ್ಲಿ ದೈವದ ಪದ್ಮಶಿಲಾ ಪ್ರತಿಷ್ಠಾಪನೆ, ಶ್ರೀ ಲಕ್ಷ್ಮೀ ಜನಾರ್ದನ ಮತ್ತು ಶ್ರೀ ಉಮಾಮಹೇಶ್ವರ ದೇವರ ಗರ್ಭಗುಡಿಯ ಶಿಲಾನ್ಯಾಸ ನಡೆಯಲಿದೆ. ಮಧ್ಯಾಹ್ನ ಅನ್ನ ಸಂತರ್ಪಣೆ ನಡೆಯಲಿದೆ.

ಭಕ್ತಾದಿಗಳಿಂದ ಹಸಿರುವಾಣಿ ಕಾಣಿಕೆ, ಹೂವು, ಹಣ್ಣು, ಕಾಯಿ, ಹಿಂಗಾರ, ನಾಗದೇವರ ಅಭಿಷೇಕಕ್ಕೆ ಹಾಲು, ಸೀಯಾಳ, ತುಪ್ಪ, ಜೇನುತುಪ್ಪ ಸ್ವೀಕರಿಸಲಾಗುವುದು. ವಿಶೇಷವಾಗಿ ಅನ್ನಸಂತರ್ಪಣೆಯ ಸೇವೆ ಮಾಡಲು ಇಚ್ಛಿಸುವವರಿಗೆ ಅವಕಾಶವಿದೆ.

Related posts

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವಾರ್ಷಿಕ ಸಭೆ

Suddi Udaya

ಬೆಳ್ತಂಗಡಿಯಲ್ಲಿ ಯಾಂತ್ರಿಕೃತ ಭತ್ತದ ನಾಟಿ ಪ್ರಾತ್ಯಕ್ಷಿಕೆ

Suddi Udaya

ಶಾಸಕರ ಸಲಹೆಗೆ ಆಡಳಿತಾತ್ಮಕ ಸ್ಪಂದನೆ : ಕಸ್ತೂರಿರಂಗನ್ ವರದಿ ಕರಡು ಕುರಿತು ವಿಶೇಷ ಗ್ರಾಮಸಭೆಯಲ್ಲಿ ಚರ್ಚೆ

Suddi Udaya

ವೇಣೂರು;ಪಡ್ಡoದಡ್ಕ ಮುನವಿರುಲ್ ಇಸ್ಲಾಂ ಮದರಸ ಪ್ರಾರಂಭೋತ್ಸವ

Suddi Udaya

ನಿಡ್ಲೆಯಲ್ಲಿ ವರ್ಧಮಾನ ಗ್ಯಾಂಡ್ ಇನ್ ವಸತಿ ಗೃಹ ಶುಭಾರಂಭ

Suddi Udaya

ಬಂಟರ ಯಾನೆನಾಡವರ ಸಂಘ ಬೆಳ್ತಂಗಡಿ ನೇತೃತ್ವದಲ್ಲಿ: ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ – ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ. ವಿಶ್ವ ಬಂಟರ ಮಾಹಿತಿ ಕೋಶ’ಕ್ಕಾಗಿ ಕುಟುಂಬದ ಸಮಗ್ರ ಮಾಹಿತಿ ಸಂಗ್ರಹ: ಅಜಿತ್ ಕುಮಾರ್ ರೈ ಮಾಲಾಡಿ

Suddi Udaya
error: Content is protected !!