25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಪಿಎಂ ಶ್ರೀ ಮಾದರಿ ಶಾಲಾ ವಾರ್ಷಿಕೋತ್ಸವ

ಬೆಳ್ತಂಗಡಿ: ಬೆಳ್ತಂಗಡಿ ಪಿಎಂ ಶ್ರೀ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅದ್ದೂರಿಯಾಗಿ ಶಾಲಾ ವಾರ್ಷಿಕೋತ್ಸವವು ಇತ್ತೀಚೆಗೆ ನಡೆಯಿತು.

ರುಡ್ ಸೆಟ್ ನಿರ್ದೇಶಕ ಹಳೆ ವಿದ್ಯಾರ್ಥಿ ಅಜಯ್ ಧ್ವಜರೋಹಣ ಮೂಲಕ ಕಾರ್ಯಕ್ರಮವನ್ನು ಆರಂಭಿಸಿ ಮಕ್ಕಳಿಗೆ ತಾನು ಕಲಿತಾ ದಿನದ ಬಗ್ಗೆ ನೆನಪಿಸಿದರು. ಎಸ್ ಡಿ ಎಮ್ ಸಿ ಅಧ್ಯಕ್ಷ ಚರಣ್ ಕುಮಾರ್ ಸ್ವಾಗತಿಸಿದರು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಗರ ಪಾಲಿಕೆ ಸದಸ್ಯ ಶರತ್ ಕುಮಾರ್ ನೆರವೇರಿಸಿ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ದೀಪ ಬೆಳಗಿಸಿ, ಮಕ್ಕಳಿಗೆ ಹಿತನುಡಿದರು.

ಸಭೆಯಲ್ಲಿ ಹಿರಿಯ ವಕೀಲರು, ಹಳೆ ವಿದ್ಯಾರ್ಥಿ ಧನಂಜಯ್ ರಾವ್, ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್. ಬದುಕು ಕಟ್ಟೋಣ ಬನ್ನಿ ತಂ‍ಡದ ಸಂಚಾಲಕ ಮೋಹನ್ ಕುಮಾರ್ , ಬೆಳ್ತಂಗಡಿ ಎಸ್ ಕೆ ಡಿ ಆರ್ ಡಿ ಪಿ ಯೋಜನಾಧಿಕಾರಿ ಸುರೇಂದ್ರ, ಹಿರಿಯ ವಿದ್ಯಾರ್ಥಿ ಸಂಪತ್ ಕುಮಾರ್, ಹಳೆ ವಿದ್ಯಾರ್ಥಿ ಅಕೀಮ್ , ಬೆಳ್ತಂಗಡಿ ಶಿಕ್ಷಣಾಧಿಕಾರಿ ತಾರಕೇಸರಿ ಮತ್ತು ಪ್ರಭಾಕರ್ ಭಟ್ ಇದ್ಯಾ, ವಾರ್ಷಿಕೋತ್ಸವ ಸಮಿತಿಯ ಅಧ್ಯಕ್ಷ ಚರಣ್ ಕುಮಾರ್, ಎಸ್ ಡಿ ಎಮ್ ಸಿ ಅಧ್ಯಕ್ಷ ಸೂರ್ಯನಾರಾಯಣ, ಮುಖ್ಯೋಪಾಧ್ಯಾಯರು, ಮಕ್ಕಳು ಪೋಷಕರು, ಹಳೆ ವಿದ್ಯಾರ್ಥಿಗಳು ಪಾಲ್ಗೊಂಡರು.

ಮಧ್ಯಾಹ್ನದ ನಂತರ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿಸಿತು.

Related posts

ವಲಯ ಮಟ್ಟದ ಖೋ ಖೋ ಪಂದ್ಯಾಟ: ಶಿರ್ಲಾಲು ಸ.ಉ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಪುದುವೆಟ್ಟು: ಶ್ರೀಮತಿ ಯಶೋದಾ ನಿಧನ

Suddi Udaya

ಶ್ರೀ ಶಿಶಿಲೇಶ್ವರ ದೇವಸ್ಥಾನದ ರಥಬೀದಿಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಕುವೆಟ್ಟು ಸ. ಉ. ಪ್ರಾ. ಶಾಲೆಯ ಅಡುಗೆ ಕೋಣೆಯ ವಿಸ್ತೃತ ಕೊಠಡಿ ಉದ್ಘಾಟನೆ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಪದಗ್ರಹಣ ಸಮಾರಂಭ

Suddi Udaya
error: Content is protected !!