25.3 C
ಪುತ್ತೂರು, ಬೆಳ್ತಂಗಡಿ
June 21, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಎಸ್ ಡಿ ಎಮ್ ಸಂಸ್ಥೆಗಳ ಅಂತರ್ ಪ್ರೌಢಶಾಲಾ ಬಾಲಕ -ಬಾಲಕಿಯರ ಕ್ರೀಡಾಕೂಟ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕ್ರೀಡಾ ವಿಭಾಗ ಆಯೋಜಿಸಿದ ಎಸ್ ಡಿ ಎಂ ಸಂಸ್ಥೆಗಳ ಅಂತರ್ ಪ್ರೌಢಶಾಲಾ ಬಾಲಕ – ಬಾಲಕಿಯರ ಕ್ರೀಡಾಕೂಟವು ಡಿ.31ರಂದು ಇಂದ್ರಪ್ರಸ್ಥ ಕ್ರೀಡಾಂಗಣದಲ್ಲಿ ನಡೆಯಿತು.


ಕಾರ್ಯಕ್ರಮದ ಉದ್ಘಾಟನೆಯನ್ನು ಎಸ್ ಡಿ ಎಂ ಶಿಕ್ಷಣ ಸಂಸ್ಥೆ ಉಜಿರೆಯ ಕಾರ್ಯದರ್ಶಿಯಾದ ಡಾ. ಸತೀಶ್ ಚಂದ್ರ ಎಸ್ ಹಾಗೂ ಮುಖ್ಯ ಅತಿಥಿಯಾಗಿ ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ. ಎ ಕುಮಾರ್ ಹೆಗ್ಡೆ ಇವರು ದೀಪ ಪ್ರಜ್ವಲಿಸಿ, ಕ್ರೀಡಾ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿತ ಮಾತುಗಳನ್ನು ಆಡಿದರು. ಎಸ್ ಡಿ. ಎಮ್ ಸಂಸ್ಥೆಯ ಕ್ಷೇಮಪಾಲನ ಅಧಿಕಾರಿಯಾದ ಧನ್ಯ ಕುಮಾರ್, ಕ್ರೀಡಾ ವಿಭಾಗದ ಕಾರ್ಯದರ್ಶಿಯಾದ ರಮೇಶ್ ಹೆಚ್ ಉಪಸ್ಥಿತರಿದ್ದರು.

ಪಂದ್ಯಾಟದ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಎಸ್ ಡಿ ಎಂ ಶಿಕ್ಷಣ ಸಂಸ್ಥೆ ಉಜಿರೆಯ ಕಾರ್ಯದರ್ಶಿಯಾದ ಸತೀಶ್ಚಂದ್ರ ಎಸ್, ಹಾಗೂ ಎಸ್ ಡಿ ಎಮ್ ಮಲ್ಟಿ- ಸ್ಪೆಷಾಲಿಟಿ ಹಾಸ್ಪಿಟಲ್ ಉಜಿರೆ ಇದರ ಚೀಫ್ ಮೆಡಿಕಲ್ ಆಫೀಸರ್ ಆದ ಡಾ. ಸಾತ್ವಿಕ್ ಜೈನ್ ಇವರು ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಪ್ರಶಂಸೆ ಪಟ್ಟರು.


ಈ ಸಂದರ್ಭದಲ್ಲಿ ಎಸ್ ಡಿ ಎಮ್ ಕ್ರೀಡಾ ವಿಭಾಗದ ಕಾರ್ಯದರ್ಶಿ ಹಾಗೂ ಎಸ್ ಡಿ ಎಂ ಕಾಲೇಜಿನ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರು ಉಪಸ್ಥಿತರಿದ್ದರು.
ಕಾರ್ಯಕ್ರಮದ ನಿರೂಪಣೆಯನ್ನು ಎಸ್ ಡಿ ಎಂ ಜನಾರ್ಧನ ಪ್ರೌಢಶಾಲಾ ದೈಹಿಕ ಶಿಕ್ಷಕ ಗಿರೀಶ್ ನೆರವೇರಿಸಿದರು.
ಕ್ರೀಡಾ ಕಾರ್ಯದರ್ಶಿ ರಮೇಶ್ ಹೆಚ್ ಸ್ವಾಗತಿಸಿ , ಎಸ್ ಡಿ ಎಂ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ಸಂದೇಶ ಪೂಂಜ ಧನ್ಯವಾದವಿತ್ತರು.

Related posts

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಹೊಕ್ಕಾಡಿಗೋಳಿ: ಮಹಿಷಮರ್ಧಿನಿ ಕಂಬಳ ಸಮಿತಿ ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ ಪೂರ್ವಾಭಾವಿ ಸಭೆ

Suddi Udaya

ಎಂಜಿನಿಯರಿಂಗ್ ನಲ್ಲಿ ಅಳದಂಗಡಿಯ ಶ್ರೀಪ್ರಿಯಾಗೆ 7ನೇ ರ‌್ಯಾಂಕ್

Suddi Udaya

ಪಟ್ರಮೆ ಗ್ರಾ.ಪಂ. ಅಧ್ಯಕ್ಷರಾಗಿ ಮನೋಜ್, ಉಪಾಧ್ಯಕ್ಷರಾಗಿ ಮೋಹಿನಿ ಆಯ್ಕೆ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ‘ಸಿರಿಧಾನ್ಯದಿಂದ ಆರೋಗ್ಯ ಸಿರಿ ‘ ಸಿರಿಧಾನ್ಯ ಜಾಗೃತಿ

Suddi Udaya

ಸುಲ್ಕೇರಿಮೋಗ್ರು: ಕುಸಿದ ತಡೆಗೋಡೆ ತೆರವುಗೊಳಿಸಿದ ಅಳದಂಗಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಸ್ವಯಂಸೇವಕರು

Suddi Udaya
error: Content is protected !!