May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಅಯ್ಯಪ್ಪ ಭಕ್ತರ ಮಹಾಸಂಗಮ ಸಮಾವೇಶದಲ್ಲಿ ಸಂಪತ್ ಬಿ. ಸುವರ್ಣ ರವರಿಂದ 7 ಹಕ್ಕೋತ್ತಾಯಗಳ ಮಂಡನೆ

ಅಯ್ಯಪ್ಪ ಭಕ್ತರ ಮಹಾಸಂಗಮ ಬೆಳ್ತಂಗಡಿ ತಾಲೂಕು ಸಮಾವೇಶದಲ್ಲಿ 7 ಹಕ್ಕೋತ್ತಾಯಗಳನ್ನು ಮಂಡಿಸಿ ಸರಕಾರಕ್ಕೆ ಸಲ್ಲಿಸಲಾಯಿತು.

ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಸಂಪತ್ ಬಿ. ಸುವರ್ಣ ಹಕ್ಕೋತ್ತಾಯ ಮಂಡಿಸಿದರು. 1. ಶಬರಿಮಲೆ ಯಾತ್ರೆಯ ಸಂದರ್ಭದಲ್ಲಿ ಹೆಚ್ಚುವರಿ ರೈಲಿನ ವ್ಯವಸ್ಥೆ ಮಾಡುವುದು ಮತ್ತು ಕೊಟ್ಟಾಯಂ ಮಾರ್ಗದಲ್ಲಿ ಸರಕಾರಿ ಬಸ್ಸಿನ ಹೆಚ್ಚುವರಿ ವ್ಯವಸ್ಥೆ ಮಾಡಬೇಕು. 2. ಕರ್ನಾಟಕದ ಬೇರೆ, ಬೇರೆ ಭಾಗಗಳಿಂದ ಪಾದಯಾತ್ರೆಯ ಮೂಲಕ ಬರುವ ಅಯ್ಯಪ್ಪ ವ್ರತಧಾರಿಗಳಿಗೆ ಆಹಾರ, ಕುಡಿಯುವ ನೀರು, ತಂಗುದಾಣ, ಆರೋಗ್ಯ ತಪಾಸಣೆ, ರಸ್ತೆ ದುರಸ್ತಿ, ಕನ್ನಡ ಮಾಹಿತಿ ಕೇಂದ್ರ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು. 3. ಸನ್ನಿಧಾನದಲ್ಲಿರುವ ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂನ ಕೇಂದ್ರದಲ್ಲಿ ಅನ್ನದಾನ ವ್ಯವಸ್ಥೆ ಪುನಃರಾಂಭಕ್ಕೆ ಅನುಮತಿ ನೀಡಬೇಕು. 4. ಕರ್ನಾಟಕದ ಲಕ್ಷಾಂತರ ಅಯ್ಯಪ್ಪ ಭಕ್ತರ ಸುಗಮ ಯಾತ್ರೆಗಾಗಿ ನಿಲುಕಲ್ಲಿನಲ್ಲಿ ಮಂಜೂರಾದ ಜಾಗದಲ್ಲಿ ಕರ್ನಾಟಕ ಭವನದ ಮೂಲಕ ವಸತಿಗೃಹ ನಿರ್ಮಾಣ ಮಾಡಬೇಕು.5. ಪ್ರತಿ ಊರಿನ ಅಯ್ಯಪ್ಪ ಶಿಬಿರಗಳಿಗೆ ಮತ್ತು ಅಯ್ಯಪ್ಪ ಮಂದಿರ ನಿರ್ಮಾಣಕ್ಕಾಗಿ ಸರಕಾರ ಕನಿಷ್ಠ ೨೦ ಸೆಂಟ್ಸ್ ಜಾಗವನ್ನು ಮಂಜೂರುಗೊಳಿಸಬೇಕು. 6. ಶಾಲಾ ಪಠ್ಯ ಪುಸ್ತಕಗಳಲ್ಲಿ ಶಬರಿಮಲೆ ಅಯ್ಯಪ್ಪ ಕ್ಷೇತ್ರದ ಬಗ್ಗೆ ಹಾಗೂ ಅಯ್ಯಪ್ಪ ವ್ರತಧಾರಿಗಳ ಆಚರಣೆ ಬಗ್ಗೆ ಸೇರ್ಪಡೆಗೊಳಿಸಬೇಕು. 7. ಶಬರಿಮಲೆಯಾತ್ರೆಯಲ್ಲಿ ಗುರುಗಳಾಗಿ ಸೇವೆ ಸಲ್ಲಿಸುತ್ತಿರುವವರಿಗೆ ಸರಕಾರ ಧಾರ್ಮಿಕ ದತ್ತಿ ಇಲಾಖೆ ಮೂಲಕ ಮಾಸಶನ ಮತ್ತು ಇನ್ನಿತರ ಸೌಲಭ್ಯಗಳನ್ನು ಒದಗಿಸಬೇಕು.

Related posts

ಬೆಳ್ತಂಗಡಿ ಮೀಡಿಯಾ ಕ್ಲಬ್ ನ ವಾರ್ಷಿಕ ಮಹಾಸಭೆ: ಅಧ್ಯಕ್ಷರಾಗಿ ಬಾಲಕೃಷ್ಣ ಶೆಟ್ಟಿ

Suddi Udaya

ಕಾರಿಂಜ ಶ್ರೀ ವನಶಾಸ್ತರ, ಶ್ರೀ ವೀರಭದ್ರಸ್ವಾಮಿ ದೇವಸ್ಥಾನ ಜೀರ್ಣೋದ್ಧಾರ ಸಮಿತಿಯಿಂದ ಡಾ.ಡಿ ಹೆಗ್ಗಡೆಯವರ ಭೇಟಿ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ 2 ದಿನದ ತರಬೇತಿ ಕಾರ್ಯಾಗಾರ

Suddi Udaya

ಮೃತದೇಹ ಹೂತು ಹಾಕಿದ ಪ್ರಕರಣ ಮೊದಲು ಗುರುತಿಸಿದ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿದರು ಇನ್ನೂ ಪತ್ತೆಯಾಗದ ಕಳೇಬರ ಕಾರ್ಯಾಚರಣೆಗೆ ಶ್ವಾನ ದಳ ಎಂಟ್ರಿ

Suddi Udaya

ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ರಿಂದ ಮತ ಚಲಾವಣೆ

Suddi Udaya

ಸಾಮಾಜಿಕ & ಶೈಕ್ಷಣಿಕ ಸಮೀಕ್ಷೆ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸುವಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ತಾ.ಪಂ. ಕಾರ್ಯನಿರ್ವಹಣಾಧಿಕಾರಿಗೆ ಮನವಿ

Suddi Udaya
error: Content is protected !!