24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಅಯ್ಯಪ್ಪ ಭಕ್ತರ ಮಹಾಸಂಗಮ ಸಮಾವೇಶದಲ್ಲಿ ಸಂಪತ್ ಬಿ. ಸುವರ್ಣ ರವರಿಂದ 7 ಹಕ್ಕೋತ್ತಾಯಗಳ ಮಂಡನೆ

ಅಯ್ಯಪ್ಪ ಭಕ್ತರ ಮಹಾಸಂಗಮ ಬೆಳ್ತಂಗಡಿ ತಾಲೂಕು ಸಮಾವೇಶದಲ್ಲಿ 7 ಹಕ್ಕೋತ್ತಾಯಗಳನ್ನು ಮಂಡಿಸಿ ಸರಕಾರಕ್ಕೆ ಸಲ್ಲಿಸಲಾಯಿತು.

ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಸಂಪತ್ ಬಿ. ಸುವರ್ಣ ಹಕ್ಕೋತ್ತಾಯ ಮಂಡಿಸಿದರು. 1. ಶಬರಿಮಲೆ ಯಾತ್ರೆಯ ಸಂದರ್ಭದಲ್ಲಿ ಹೆಚ್ಚುವರಿ ರೈಲಿನ ವ್ಯವಸ್ಥೆ ಮಾಡುವುದು ಮತ್ತು ಕೊಟ್ಟಾಯಂ ಮಾರ್ಗದಲ್ಲಿ ಸರಕಾರಿ ಬಸ್ಸಿನ ಹೆಚ್ಚುವರಿ ವ್ಯವಸ್ಥೆ ಮಾಡಬೇಕು. 2. ಕರ್ನಾಟಕದ ಬೇರೆ, ಬೇರೆ ಭಾಗಗಳಿಂದ ಪಾದಯಾತ್ರೆಯ ಮೂಲಕ ಬರುವ ಅಯ್ಯಪ್ಪ ವ್ರತಧಾರಿಗಳಿಗೆ ಆಹಾರ, ಕುಡಿಯುವ ನೀರು, ತಂಗುದಾಣ, ಆರೋಗ್ಯ ತಪಾಸಣೆ, ರಸ್ತೆ ದುರಸ್ತಿ, ಕನ್ನಡ ಮಾಹಿತಿ ಕೇಂದ್ರ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು. 3. ಸನ್ನಿಧಾನದಲ್ಲಿರುವ ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂನ ಕೇಂದ್ರದಲ್ಲಿ ಅನ್ನದಾನ ವ್ಯವಸ್ಥೆ ಪುನಃರಾಂಭಕ್ಕೆ ಅನುಮತಿ ನೀಡಬೇಕು. 4. ಕರ್ನಾಟಕದ ಲಕ್ಷಾಂತರ ಅಯ್ಯಪ್ಪ ಭಕ್ತರ ಸುಗಮ ಯಾತ್ರೆಗಾಗಿ ನಿಲುಕಲ್ಲಿನಲ್ಲಿ ಮಂಜೂರಾದ ಜಾಗದಲ್ಲಿ ಕರ್ನಾಟಕ ಭವನದ ಮೂಲಕ ವಸತಿಗೃಹ ನಿರ್ಮಾಣ ಮಾಡಬೇಕು.5. ಪ್ರತಿ ಊರಿನ ಅಯ್ಯಪ್ಪ ಶಿಬಿರಗಳಿಗೆ ಮತ್ತು ಅಯ್ಯಪ್ಪ ಮಂದಿರ ನಿರ್ಮಾಣಕ್ಕಾಗಿ ಸರಕಾರ ಕನಿಷ್ಠ ೨೦ ಸೆಂಟ್ಸ್ ಜಾಗವನ್ನು ಮಂಜೂರುಗೊಳಿಸಬೇಕು. 6. ಶಾಲಾ ಪಠ್ಯ ಪುಸ್ತಕಗಳಲ್ಲಿ ಶಬರಿಮಲೆ ಅಯ್ಯಪ್ಪ ಕ್ಷೇತ್ರದ ಬಗ್ಗೆ ಹಾಗೂ ಅಯ್ಯಪ್ಪ ವ್ರತಧಾರಿಗಳ ಆಚರಣೆ ಬಗ್ಗೆ ಸೇರ್ಪಡೆಗೊಳಿಸಬೇಕು. 7. ಶಬರಿಮಲೆಯಾತ್ರೆಯಲ್ಲಿ ಗುರುಗಳಾಗಿ ಸೇವೆ ಸಲ್ಲಿಸುತ್ತಿರುವವರಿಗೆ ಸರಕಾರ ಧಾರ್ಮಿಕ ದತ್ತಿ ಇಲಾಖೆ ಮೂಲಕ ಮಾಸಶನ ಮತ್ತು ಇನ್ನಿತರ ಸೌಲಭ್ಯಗಳನ್ನು ಒದಗಿಸಬೇಕು.

Related posts

ಗೇರುಕಟ್ಟೆ:52 ವರ್ಷದ ಗಣೇಶೋತ್ಸವ ನೂತನ ಸಮಿತಿ ರಚನೆ: ಅಧ್ಯಕ್ಷರಾಗಿ ವೈ. ಸದಾನಂದ ಶೆಟ್ಟಿ, ಕಾರ್ಯದರ್ಶಿಯಾಗಿ ರಂಜನ್ ಹೆಚ್. ಆಯ್ಕೆ

Suddi Udaya

ನಾಲ್ಕೂರು: ಸಮಾಜ ಸೇವಕ ಹೆಚ್. ಧರ್ಣಪ್ಪ ಪೂಜಾರಿಯವರಿಗೆ ಯುವಶಕ್ತಿ ಫ್ರೆಂಡ್ಸ್ ನಿಂದ ಸನ್ಮಾನ

Suddi Udaya

ಮೂಡುಕೋಡಿಯಲ್ಲಿ ನಿಧಾನಗತಿಯಲ್ಲಿ ಸಾಗುತ್ತಿರುವ ಮತದಾನ : ಬೆಳಿಗ್ಗೆಯಿಂದ ಸರತಿ ಸಾಲಿನಲ್ಲಿ ಜನವೋ ಜನ

Suddi Udaya

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ, ನ್ಯಾಯಕ್ಕಾಗಿ ಎಸ್ಸೆಸ್ಸೆಫ್ ವತಿಯಿಂದ ವಿದ್ಯಾರ್ಥಿ ರ‍್ಯಾಲಿ ಹಾಗೂ ಪ್ರತಿಭಟನೆ

Suddi Udaya

ಬೆಳ್ತಂಗಡಿ: 51 ನಾಯಿ ಮರಿಗಳು, 32 ಬೆಕ್ಕು ಮರಿಗಳ ದತ್ತು ಸ್ವೀಕಾರ

Suddi Udaya

ಧರ್ಮಸ್ಥಳ ಜೋಡುಸ್ಥಾನ ಶ್ರೀ ನಿತ್ಯ ನೂತನ ಭಜನಾ ಮಂಡಳಿಯ ಸಾಮೂಹಿಕ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!