28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಅಯ್ಯಪ್ಪ ಭಕ್ತರ ಮಹಾಸಂಗಮ ಸಮಾವೇಶದಲ್ಲಿ ಸಂಪತ್ ಬಿ. ಸುವರ್ಣ ರವರಿಂದ 7 ಹಕ್ಕೋತ್ತಾಯಗಳ ಮಂಡನೆ

ಅಯ್ಯಪ್ಪ ಭಕ್ತರ ಮಹಾಸಂಗಮ ಬೆಳ್ತಂಗಡಿ ತಾಲೂಕು ಸಮಾವೇಶದಲ್ಲಿ 7 ಹಕ್ಕೋತ್ತಾಯಗಳನ್ನು ಮಂಡಿಸಿ ಸರಕಾರಕ್ಕೆ ಸಲ್ಲಿಸಲಾಯಿತು.

ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಸಂಪತ್ ಬಿ. ಸುವರ್ಣ ಹಕ್ಕೋತ್ತಾಯ ಮಂಡಿಸಿದರು. 1. ಶಬರಿಮಲೆ ಯಾತ್ರೆಯ ಸಂದರ್ಭದಲ್ಲಿ ಹೆಚ್ಚುವರಿ ರೈಲಿನ ವ್ಯವಸ್ಥೆ ಮಾಡುವುದು ಮತ್ತು ಕೊಟ್ಟಾಯಂ ಮಾರ್ಗದಲ್ಲಿ ಸರಕಾರಿ ಬಸ್ಸಿನ ಹೆಚ್ಚುವರಿ ವ್ಯವಸ್ಥೆ ಮಾಡಬೇಕು. 2. ಕರ್ನಾಟಕದ ಬೇರೆ, ಬೇರೆ ಭಾಗಗಳಿಂದ ಪಾದಯಾತ್ರೆಯ ಮೂಲಕ ಬರುವ ಅಯ್ಯಪ್ಪ ವ್ರತಧಾರಿಗಳಿಗೆ ಆಹಾರ, ಕುಡಿಯುವ ನೀರು, ತಂಗುದಾಣ, ಆರೋಗ್ಯ ತಪಾಸಣೆ, ರಸ್ತೆ ದುರಸ್ತಿ, ಕನ್ನಡ ಮಾಹಿತಿ ಕೇಂದ್ರ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು. 3. ಸನ್ನಿಧಾನದಲ್ಲಿರುವ ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂನ ಕೇಂದ್ರದಲ್ಲಿ ಅನ್ನದಾನ ವ್ಯವಸ್ಥೆ ಪುನಃರಾಂಭಕ್ಕೆ ಅನುಮತಿ ನೀಡಬೇಕು. 4. ಕರ್ನಾಟಕದ ಲಕ್ಷಾಂತರ ಅಯ್ಯಪ್ಪ ಭಕ್ತರ ಸುಗಮ ಯಾತ್ರೆಗಾಗಿ ನಿಲುಕಲ್ಲಿನಲ್ಲಿ ಮಂಜೂರಾದ ಜಾಗದಲ್ಲಿ ಕರ್ನಾಟಕ ಭವನದ ಮೂಲಕ ವಸತಿಗೃಹ ನಿರ್ಮಾಣ ಮಾಡಬೇಕು.5. ಪ್ರತಿ ಊರಿನ ಅಯ್ಯಪ್ಪ ಶಿಬಿರಗಳಿಗೆ ಮತ್ತು ಅಯ್ಯಪ್ಪ ಮಂದಿರ ನಿರ್ಮಾಣಕ್ಕಾಗಿ ಸರಕಾರ ಕನಿಷ್ಠ ೨೦ ಸೆಂಟ್ಸ್ ಜಾಗವನ್ನು ಮಂಜೂರುಗೊಳಿಸಬೇಕು. 6. ಶಾಲಾ ಪಠ್ಯ ಪುಸ್ತಕಗಳಲ್ಲಿ ಶಬರಿಮಲೆ ಅಯ್ಯಪ್ಪ ಕ್ಷೇತ್ರದ ಬಗ್ಗೆ ಹಾಗೂ ಅಯ್ಯಪ್ಪ ವ್ರತಧಾರಿಗಳ ಆಚರಣೆ ಬಗ್ಗೆ ಸೇರ್ಪಡೆಗೊಳಿಸಬೇಕು. 7. ಶಬರಿಮಲೆಯಾತ್ರೆಯಲ್ಲಿ ಗುರುಗಳಾಗಿ ಸೇವೆ ಸಲ್ಲಿಸುತ್ತಿರುವವರಿಗೆ ಸರಕಾರ ಧಾರ್ಮಿಕ ದತ್ತಿ ಇಲಾಖೆ ಮೂಲಕ ಮಾಸಶನ ಮತ್ತು ಇನ್ನಿತರ ಸೌಲಭ್ಯಗಳನ್ನು ಒದಗಿಸಬೇಕು.

Related posts

ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಯಲ್ಲಿ ಗಮಕ ವಾಚನ ಕಾರ್ಯಕ್ರಮ

Suddi Udaya

ಕರ್ನಾಟಕ ದಲಿತ ಚಳುವಳಿ ಸಂಭ್ರಮಾಚರಣಾ ಸಮಿತಿ ಬೆಳ್ತಂಗಡಿ; ಡಿ. 16 : ಬೆಳ್ತಂಗಡಿಯಲ್ಲಿ ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮಾಚರಣೆ: ವಿಚಾರ ಸಂಕಿರಣ, ಬೃಹತ್ ಮೆರವಣಿಗೆ, ಸಮಾವೇಶ, ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಕೋಟಕ್ ಲೈಫ್ 3 ನೇ ವರ್ಷದ ಪಾದರ್ಪಣೆಯ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ ಲೋಕಾಯುಕ್ತ ಎಸ್ಪಿಯವರಿಂದ ಸಾರ್ವಜನಿಕ ಕುಂದು ಕೊರತೆ ಸಭೆ ಹಾಗೂ ಸಾರ್ವಜನಿಕ ಅಹವಾಲು ಸ್ವೀಕಾರ

Suddi Udaya

ಧರ್ಮಸ್ಥಳ ಗ್ರಾ.ಪಂ. ನಿಂದ ಅನಧಿಕೃತ ಬ್ಯಾನರ್, ಬಂಟಿಂಗ್ಸ್, ಜಾಹೀರಾತು ಫಲಕ ತೆರವು

Suddi Udaya

ಉಜಿರೆ ಶ್ರೀ ಜನಾರ್ಧನ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಭೇಟಿ

Suddi Udaya
error: Content is protected !!