28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಜ.2: ಉಜಿರೆ ಪೆರ್ಲ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ವತಿಯಿಂದ ಶ್ರೀ ನಾಗದೇವರ ಶಿಲಾ ಪ್ರತಿಷ್ಠೆ ಮತ್ತು ಶ್ರೀ ಪಂಜುರ್ಲಿ ದೈವದ ಪ್ರತಿಷ್ಠಾ ಮಹೋತ್ಸವ ಶ್ರೀ ಲಕ್ಷ್ಮೀ ಜನಾರ್ದನ ಮತ್ತು ಶ್ರೀ ಉಮಾಮಹೇಶ್ವರ ದೇವರ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮ

ಉಜಿರೆ : ಉಜಿರೆ ಪೆರ್ಲ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ವತಿಯಿಂದ ಬ್ರಹ್ಮಶ್ರೀ ವೇ| ಮೂ| ನೀಲೇಶ್ವರ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರಾದ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾದ ಶರತ್‌ಕೃಷ್ಣ ಪಡುವೆಟ್ನಯರ ಗೌರವ ಉಪಸ್ಥಿತಿಯಲ್ಲಿ ಶ್ರೀ ಲಕ್ಷ್ಮೀಜನಾರ್ದನ ಹಾಗೂ ಶ್ರೀ ಉಮಾಮಹೇಶ್ವರ ಸಾನ್ನಿಧ್ಯದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ನಾಗದೇವರ ಶಿಲಾ ಪ್ರತಿಷ್ಠೆ ಮತ್ತು ಶ್ರೀ ಪಂಜುರ್ಲಿ ದೈವದ ಪ್ರತಿಷ್ಠಾ ಮಹೋತ್ಸವ ಶ್ರೀ ಲಕ್ಷ್ಮೀ ಜನಾರ್ದನ ಮತ್ತು ಶ್ರೀ ಉಮಾಮಹೇಶ್ವರ ದೇವರ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮವು ಜ.2 ರಂದು ನಡೆಯಲಿದೆ.

ಕಾರ್ಯಕ್ರಮಗಳು: ಜ.1 ರಂದು ಬೆಳಿಗ್ಗೆ ಪೂರ್ವಭಾವಿ ಹೋಮಗಳು ನೆರವೇರಲಿದೆ. ಜ.2ರಂದು ಗಣಪತಿ ಹೋಮದಿಂದ ಪ್ರಾರಂಭಿಸಿ ವಿವಿಧ ಹೋಮ-ಹವನ, ಶ್ರೀ ನಾಗ ದೇವರ ಬಿಂಬ ಪ್ರತಿಷ್ಠೆ, ಪಂಜುರ್ಲಿ ದೈವದ ಪದ್ಮಶಿಲಾ ಪ್ರತಿಷ್ಠಾಪನೆ, ಶ್ರೀ ಲಕ್ಷ್ಮೀ ಜನಾರ್ದನ ಮತ್ತು ಶ್ರೀ ಉಮಾಮಹೇಶ್ವರ ದೇವರ ಗರ್ಭಗುಡಿಯ ಶಿಲಾನ್ಯಾಸ ನಡೆಯಲಿದೆ. ಮಧ್ಯಾಹ್ನ ಅನ್ನ ಸಂತರ್ಪಣೆ ನಡೆಯಲಿದೆ.

ಭಕ್ತಾದಿಗಳಿಂದ ಹಸಿರುವಾಣಿ ಕಾಣಿಕೆ, ಹೂವು, ಹಣ್ಣು, ಕಾಯಿ, ಹಿಂಗಾರ, ನಾಗದೇವರ ಅಭಿಷೇಕಕ್ಕೆ ಹಾಲು, ಸೀಯಾಳ, ತುಪ್ಪ, ಜೇನುತುಪ್ಪ ಸ್ವೀಕರಿಸಲಾಗುವುದು. ವಿಶೇಷವಾಗಿ ಅನ್ನಸಂತರ್ಪಣೆಯ ಸೇವೆ ಮಾಡಲು ಇಚ್ಛಿಸುವವರಿಗೆ ಅವಕಾಶವಿದೆ.

Related posts

ಕಲ್ಮಂಜ ಬೆರ್ಕೆಯಲ್ಲಿ ಕೃಷಿ ತೋಟಕ್ಕೆ ಆನೆ ದಾಳಿ: ಅಪಾರ ಪ್ರಮಾಣ ಕೃಷಿ ನಾಶ

Suddi Udaya

ಬೆಳ್ತಂಗಡಿ: ವಂಚನೆ ಪ್ರಕರಣದಲ್ಲಿ 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya

ಅಳದಂಗಡಿ ಸರ್ಕಾರಿ ಪ. ಪೂ. ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಕಂಪ್ಯೂಟರ್ ಸೈನ್ಸ್ ಗೆ ಅನುಮತಿ

Suddi Udaya

ಉಪ್ಪಿನಂಗಡಿಯಲ್ಲಿರುವ ಬಟ್ಟೆ ಮಳಿಗೆಗೆ ಬೆಂಕಿ

Suddi Udaya

ಎಸ್ ಡಿ ಎಮ್ ಕಾಲೇಜಿನಲ್ಲಿ ವಾಣಿಜ್ಯ “ವ್ಯವಹಾರ “ಹಬ್ಬ

Suddi Udaya

ಸುಲ್ಕೇರಿ ಶ್ರೀ ರಾಮ ಶಾಲೆಗೆ ಶೇ. 100 ಫಲಿತಾಂಶ: ವಿದ್ಯಾರ್ಥಿ ತ್ರಿಷಾ ರಾಜ್ಯಕ್ಕೆ 10 ನೇ ರ್‍ಯಾಂಕ್

Suddi Udaya
error: Content is protected !!