24.6 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಟಿ.ಬಿ ಕ್ರಾಸ್ – ಕುತ್ರೊಟ್ಟು ಸಂಪರ್ಕ ರಸ್ತೆ ದುರಸ್ಥಿ ಆಗ್ರಹಿಸಿ ಪಂಚಾಯತ್ ಗೆ ಎಸ್‌ಡಿಪಿಐ ಮನವಿ

ಬೆಳ್ತಂಗಡಿ : ಉಜಿರೆ ಗ್ರಾಮ ವ್ಯಾಪ್ತಿಯ ಟಿ.ಬಿ ಕ್ರಾಸ್ ನಿಂದ ಕುತ್ರೊಟ್ಟು ವರೆಗೆ ಸಂಪರ್ಕಿಸುವ ರಸ್ತೆಯ ಚರಂಡಿ ವ್ಯವಸ್ಥೆ, ಕಾಂಕ್ರೀಟ್ ರಸ್ತೆ ಮಾಡಿಕೊಡುವಂತೆ ಆಗ್ರಹಿಸಿ ಎಸ್‌ಡಿಪಿಐ ಕುಂಟಿನಿ ಬ್ರಾಂಚ್ ಸಮಿತಿ ವತಿಯಿಂದ ಬೆಳ್ತಂಗಡಿ ಲೋಕೋಪಯೋಗಿ ಇಲಾಖೆ ಅಧಿಕಾರಿ ಬಕ್ಕಪ್ಪ ಎಚ್ (ಬಿ. ಇ) ಅವರಿಗೆ ಜ.1 ರಂದು ಮನವಿ ನೀಡಲಾಯಿತು.


ಈ ಸಂದರ್ಭದಲ್ಲಿ ಎಸ್‌ಡಿಪಿಐ ಕುಂಟಿನಿ ಬ್ರಾಂಚ್ ಅಧ್ಯಕ್ಷ ಆಸೀರ್ ಕುಂಟಿನಿ, ಉಜಿರೆ ಬ್ಲಾಕ್ ಅಧ್ಯಕ್ಷ ಮೊಹಮ್ಮದ್ ಅಲಿ, ಗ್ರಾಮ ಪಂಚಾಯತ್ ಸದಸ್ಯರಾದ ಸಲೀಂ ಕುಂಟಿನಿ, ಎಸ್.ಡಿ.ಟಿ.ಯು ಆಟೋ ಯೂನಿಯನ್ ಹಳೆಪೇಟೆ ಅಧ್ಯಕ್ಷ ಶರೀಫ್ ಎಸ್.ಎಂ, ಸಾಲಿ ಅತ್ತಾಜೆ, ಅಝೀಝ್ ಕುಂಟಿನಿ, ಇಕ್ಬಾಲ್ ಕುಂಟಿನಿ, ಮೊಹಮ್ಮದ್ ಮುಗುಳಿ, ಖಾದರ್ ನಾಡ್ಜೆ, ಸಾದಿಕ್ ಅತ್ತಾಜೆ , ಅಫ್ರಾನ್ ಕುಂಟಿನಿ, ಫಾಝಿಲ್ ಕುಂಟಿನಿ ಉಪಸ್ಥಿತರಿದ್ದರು.

ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಬಕ್ಕಪ್ಪ ಎಚ್ ಅವರು ಆದಷ್ಟು ಬೇಗ ಸಮಸ್ಯೆಯನ್ನು ಬಗೆಹರಿಸುವುದಾಗಿ ಭರವಸೆಯನ್ನು ಈ ಸಂದರ್ಭದಲ್ಲಿ ನೀಡಿದರು.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಬಂದಾರು: ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ, ಉಜಿರೆ ಸಾನಿದ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಚಿದಾನಂದ ಇಡ್ಯ, ಕಾರ್ಯದರ್ಶಿಯಾಗಿ ಸಂತೋಷ್ ಶೆಟ್ಟಿ ಆಯ್ಕೆ

Suddi Udaya

ಬಳಂಜ: ಬೊಳ್ಳಾಜೆ- ಡೆಂಜೋಲಿ ರಸ್ತೆ ಮದ್ಯೆ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ಕೊಯ್ಯೂರಿನಲ್ಲಿ ಸಿಡಿಲು ಬಡಿದು ದನ ಸಾವು

Suddi Udaya
error: Content is protected !!