May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಬೆಳ್ತಂಗಡಿ: ಇಲ್ಲಿಯ ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ, ತಾಲೂಕು ಕಾನೂನು ಸೇವಾ ಸಮಿತಿಯ ಸಹಯೋಗದೊಂದಿಗೆ “ಕಾನೂನು ಅರಿವು ಕಾರ್ಯಕ್ರಮ”ವು ಡಿ.28 ರಂದು ನಡೆಯಿತು.

ವಿದ್ಯಾರ್ಥಿಗಳಿಗೆ ಕಾನೂನು ಹಕ್ಕುಗಳು ಮತ್ತು ಜವಾಬ್ದಾರಿಗಳ ಬಗ್ಗೆ ತಿಳುವಳಿಕೆಯನ್ನು, ವಿವಿಧ ಕಾನೂನು ಸಮಸ್ಯೆಗಳು ಮತ್ತು ನಿಬಂಧನೆಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಗೌರವಾನ್ವಿತ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಬೆಳ್ತಂಗಡಿ ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷ ಮನು ಬಿ.ಕೆ ಕಾರ್ಯಕ್ರಮ ಉದ್ಘಾಟಿಸಿ, ಮಾದಕ ದ್ರವ್ಯಗಳ ಕುರಿತು ಉಪನ್ಯಾಸ ನೀಡಿ, ಮಾದಕ ವ್ಯಸನದಿಂದಾಗುವ ಅನಾಹುತಗಳ ಕುರಿತು ಜಾಗೃತಿ ಮೂಡಿಸಿದರು.

ಗೌರವಾನ್ವಿತ ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ಸಂದೇಶ್ ಕೆ., ಡಿಜಿಟಲ್ ಸಾಧನಗಳನ್ನು ಬಳಸಿ ನಡೆಸಲಾಗುವ ಸೈಬರ್ ಕ್ರೈಂ ಅಪರಾಧ ಚಟುವಟಿಕೆಗಳ ಬಗ್ಗೆ ಮಾತನಾಡಿದರು. ಬೆಳ್ತಂಗಡಿ ವಕೀಲರ ಸಂಘದ ಕಾರ್ಯದರ್ಶಿ ನವೀನ್ ಬಿ.ಕೆ, ವಿದ್ಯಾರ್ಥಿಗಳಿಗೆ ಕಾನೂನುಬಾಹಿರ ಚಟುವಟಿಕೆಗಳ ಬಗ್ಗೆ ಶಿಕ್ಷಣ ನೀಡಿದರು. ಹಿರಿಯ ವಕೀಲರಾದ ಸುಬ್ರಹ್ಮಣ್ಯ ಕುಮಾರ್ ಅಗರ್ತರವರು ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಮತ್ತು ಎನ್‌ಡಿಪಿಎಸ್ ಕಾಯ್ದೆಯ ಕುರಿತು ಭಾಷಣ ಮಾಡಿದರು. ಗ್ರಾಹಕರ ಹಕ್ಕುಗಳ ಮಹತ್ವವನ್ನು ಮತ್ತು ಗ್ರಾಹಕರ ಜವಾಬ್ದಾರಿಗಳನ್ನು ಅರಿತುಕೊಳ್ಳಲು ಪ್ರೋತ್ಸಾಹಿಸಿದರು. ಅವರ ಭಾಷಣವು ಗ್ರಾಹಕರ ಹಿತಾಸಕ್ತಿಗಳನ್ನು ಕಾಪಾಡಲು ಮತ್ತು ಅನ್ಯಾಯದ ವ್ಯಾಪಾರ ಅಭ್ಯಾಸಗಳು, ವಂಚನೆ ಮತ್ತು ಮಾರುಕಟ್ಟೆಯಲ್ಲಿ ಶೋಷಣೆಯಂತಹ ಸಮಸ್ಯೆಗಳನ್ನು ಪರಿಹರಿಸಲು ಜ್ಞಾಪನೆಯಾಗಿ ಕಾರ್ಯನಿರ್ವಹಿಸಿತು.

ಪ್ರಸನ್ನ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಡಾ. ಅಕ್ಷತಾರವರು ಮಾತನಾಡಿ, ಎಚ್‌ಐವಿ/ಏಡ್ಸ್ ಸಾಂಕ್ರಾಮಿಕ ರೋಗದ ಬಗ್ಗೆ ಜಾಗೃತಿ ಮೂಡಿಸಲು ಉಪನ್ಯಾಸ ನೀಡಿದರು. ಸಭೆಯಲ್ಲಿ ಬೆಳ್ತಂಗಡಿಯ ವಕೀಲರಾದ ಚಿದಾನಂದ ಪಿ. ಉಪಸ್ಥಿತರಿದ್ದರು.

ಪ್ರಸನ್ನ ಫಾರ್ಮಸಿ ಕಾಲೇಜಿನ ಪ್ರಾಚಾರ್ಯರಾದ ಡಾ. ಎಂ. ಮಲ್ಲಿಕಾರ್ಜುನ ಗೌಡ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಕಾನೂನು ಅರಿವು ಹಾಗೂ ಕರ್ತವ್ಯಗಳು ತಿಳಿದುಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ. ನಾವು ಬಹಳಷ್ಟು ಕಾನೂನುಗಳನ್ನು ತಿಳಿಯದೆ ಇದ್ದರೂ ತೊಂದರೆ ಇಲ್ಲ ಆದರೆ ನಮ್ಮ ನಿತ್ಯ ಜೀವನ ಸುಖ ಸಂತೋಷದಿಂದ ಜೀವಿಸಲು ಸಂಬಂಧಪಟ್ಟ ಕಾನೂನುಗಳ ಮತ್ತು ಹಕ್ಕುಗಳು ಅರಿತುಕೊಳ್ಳುವುದು ತುಂಬಾ ಅಗತ್ಯವು ಎಂದು ನುಡಿದರು.

ಸಹಾಯಕ ಪ್ರಾಧ್ಯಾಪಕಿ ಪ್ರತೀಕ್ಷಾ ಸಭೆಯನ್ನು ಸ್ವಾಗತಿಸಿ, ಸಿಂಧೂರ ಪಲ್ಲವಿ ವಂದಿಸಿದರು. ಕಾರ್ಯಕ್ರಮವನ್ನು ಶ್ರೀಮತಿ ವಿದ್ಯಾಶ್ರೀ ನಿರೂಪಿಸಿದರು.

Related posts

ಎ 28-ಮೇ 1:ಮರೋಡಿ ಪೊಸರಡ್ಕ ಕ್ಷೇತ್ರದಲ್ಲಿ ಬ್ರಹ್ಮಕುಂಭಾಭಿಷೇಕ ಸಂಭ್ರಮ

Suddi Udaya

ಬೆಳ್ತಂಗಡಿ: ಬಸ್ಸಿನಲ್ಲಿ ಮಹಿಳೆಯರ ಬಗ್ಗೆ ಅಶ್ಲೀಲ ಪದ ಬಳಕೆ:ಮೂವರ ಮೇಲೆ ಅಪರಿಚಿತರಿಂದ ಹಲ್ಲೆ; ಪ್ರಕರಣ ದಾಖಲು

Suddi Udaya

ಮುಂಡಾಜೆ ಸೀಟು-ಅಂಬಡ್ತ್ಯಾರು ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದು ಚಾಲಕ ಮೃತ್ಯು

Suddi Udaya

ಭಾರತೀಯ ಜೂನಿಯರ್ ರೆಡ್ ಕ್ರಾಸ್ ರಾಜ್ಯ ಸಂಸ್ಥೆಯಿಂದ ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಪ್ರಶಸ್ತಿ

Suddi Udaya

ಎಕ್ಸಲೆ೦ಟ್ ಮೂಡುಬಿದಿರೆ: ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪ೦ದ್ಯಾಟ ಉದ್ಘಾಟನೆ

Suddi Udaya

ಸಜ್ಜನಿಕ ನಡೆ, ಸಂಘರ್ಷದ ಹೋರಾಟ, ಸೌಜನ್ಯಯುತ ರಾಯಭಾರಿತ್ವ ಹೊಂದಿದ ಅಪರೂಪದ ರಾಜಕಾರಣಿ ವಸಂತ ಬಂಗೇರ – ಶಾಸಕ ಹರೀಶ್ ಪೂಂಜ

Suddi Udaya
error: Content is protected !!