28 C
ಪುತ್ತೂರು, ಬೆಳ್ತಂಗಡಿ
August 5, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಎಸ್ ಡಿ ಎಮ್ ಸಂಸ್ಥೆಗಳ ಅಂತರ್ ಪ್ರೌಢಶಾಲಾ ಬಾಲಕ -ಬಾಲಕಿಯರ ಕ್ರೀಡಾಕೂಟ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕ್ರೀಡಾ ವಿಭಾಗ ಆಯೋಜಿಸಿದ ಎಸ್ ಡಿ ಎಂ ಸಂಸ್ಥೆಗಳ ಅಂತರ್ ಪ್ರೌಢಶಾಲಾ ಬಾಲಕ – ಬಾಲಕಿಯರ ಕ್ರೀಡಾಕೂಟವು ಡಿ.31ರಂದು ಇಂದ್ರಪ್ರಸ್ಥ ಕ್ರೀಡಾಂಗಣದಲ್ಲಿ ನಡೆಯಿತು.


ಕಾರ್ಯಕ್ರಮದ ಉದ್ಘಾಟನೆಯನ್ನು ಎಸ್ ಡಿ ಎಂ ಶಿಕ್ಷಣ ಸಂಸ್ಥೆ ಉಜಿರೆಯ ಕಾರ್ಯದರ್ಶಿಯಾದ ಡಾ. ಸತೀಶ್ ಚಂದ್ರ ಎಸ್ ಹಾಗೂ ಮುಖ್ಯ ಅತಿಥಿಯಾಗಿ ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ. ಎ ಕುಮಾರ್ ಹೆಗ್ಡೆ ಇವರು ದೀಪ ಪ್ರಜ್ವಲಿಸಿ, ಕ್ರೀಡಾ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿತ ಮಾತುಗಳನ್ನು ಆಡಿದರು. ಎಸ್ ಡಿ. ಎಮ್ ಸಂಸ್ಥೆಯ ಕ್ಷೇಮಪಾಲನ ಅಧಿಕಾರಿಯಾದ ಧನ್ಯ ಕುಮಾರ್, ಕ್ರೀಡಾ ವಿಭಾಗದ ಕಾರ್ಯದರ್ಶಿಯಾದ ರಮೇಶ್ ಹೆಚ್ ಉಪಸ್ಥಿತರಿದ್ದರು.

ಪಂದ್ಯಾಟದ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಎಸ್ ಡಿ ಎಂ ಶಿಕ್ಷಣ ಸಂಸ್ಥೆ ಉಜಿರೆಯ ಕಾರ್ಯದರ್ಶಿಯಾದ ಸತೀಶ್ಚಂದ್ರ ಎಸ್, ಹಾಗೂ ಎಸ್ ಡಿ ಎಮ್ ಮಲ್ಟಿ- ಸ್ಪೆಷಾಲಿಟಿ ಹಾಸ್ಪಿಟಲ್ ಉಜಿರೆ ಇದರ ಚೀಫ್ ಮೆಡಿಕಲ್ ಆಫೀಸರ್ ಆದ ಡಾ. ಸಾತ್ವಿಕ್ ಜೈನ್ ಇವರು ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಪ್ರಶಂಸೆ ಪಟ್ಟರು.


ಈ ಸಂದರ್ಭದಲ್ಲಿ ಎಸ್ ಡಿ ಎಮ್ ಕ್ರೀಡಾ ವಿಭಾಗದ ಕಾರ್ಯದರ್ಶಿ ಹಾಗೂ ಎಸ್ ಡಿ ಎಂ ಕಾಲೇಜಿನ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರು ಉಪಸ್ಥಿತರಿದ್ದರು.
ಕಾರ್ಯಕ್ರಮದ ನಿರೂಪಣೆಯನ್ನು ಎಸ್ ಡಿ ಎಂ ಜನಾರ್ಧನ ಪ್ರೌಢಶಾಲಾ ದೈಹಿಕ ಶಿಕ್ಷಕ ಗಿರೀಶ್ ನೆರವೇರಿಸಿದರು.
ಕ್ರೀಡಾ ಕಾರ್ಯದರ್ಶಿ ರಮೇಶ್ ಹೆಚ್ ಸ್ವಾಗತಿಸಿ , ಎಸ್ ಡಿ ಎಂ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ಸಂದೇಶ ಪೂಂಜ ಧನ್ಯವಾದವಿತ್ತರು.

Related posts

ಬಡಗಕಾರಂದೂರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

Suddi Udaya

ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗು ತೋಟದ ಕೆರೆಗೆ ಬಿದ್ದು ಮೃತ್ಯು

Suddi Udaya

ಕೊಕ್ರಾಡಿ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಶೇ.96 ಫಲಿತಾಂಶ

Suddi Udaya

ಶಿಬಾಜೆ: ನಾಪತ್ತೆಯಾಗಿದ್ದ ಐಂಗುಡ ನಿವಾಸಿ ವಾಸು ರಾಣ್ಯ ಪತ್ತೆ

Suddi Udaya

ಬೆಳ್ತಂಗಡಿ ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ ನಲ್ಲಿ ಜೆಡಿಎಸ್ ಚುನಾವಣಾ ಕಚೇರಿ ಪ್ರಾರಂಭ

Suddi Udaya

ಜೂ. 24: ಕೊಕ್ಕಡ ಮತ್ತು ಪಟ್ರಮೆಯಲ್ಲಿ ಜನರ ಬಳಿಗೆ -ತಾಲೂಕು ಆಡಳಿತ ಪಂಚಾಯತ್ ಮಟ್ಟದ ಜನಸ್ಪಂದನ ಕಾರ್ಯಕ್ರಮ

Suddi Udaya
error: Content is protected !!