May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಬೆಳ್ತಂಗಡಿ: ಇಲ್ಲಿಯ ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ, ತಾಲೂಕು ಕಾನೂನು ಸೇವಾ ಸಮಿತಿಯ ಸಹಯೋಗದೊಂದಿಗೆ “ಕಾನೂನು ಅರಿವು ಕಾರ್ಯಕ್ರಮ”ವು ಡಿ.28 ರಂದು ನಡೆಯಿತು.

ವಿದ್ಯಾರ್ಥಿಗಳಿಗೆ ಕಾನೂನು ಹಕ್ಕುಗಳು ಮತ್ತು ಜವಾಬ್ದಾರಿಗಳ ಬಗ್ಗೆ ತಿಳುವಳಿಕೆಯನ್ನು, ವಿವಿಧ ಕಾನೂನು ಸಮಸ್ಯೆಗಳು ಮತ್ತು ನಿಬಂಧನೆಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಗೌರವಾನ್ವಿತ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಬೆಳ್ತಂಗಡಿ ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷ ಮನು ಬಿ.ಕೆ ಕಾರ್ಯಕ್ರಮ ಉದ್ಘಾಟಿಸಿ, ಮಾದಕ ದ್ರವ್ಯಗಳ ಕುರಿತು ಉಪನ್ಯಾಸ ನೀಡಿ, ಮಾದಕ ವ್ಯಸನದಿಂದಾಗುವ ಅನಾಹುತಗಳ ಕುರಿತು ಜಾಗೃತಿ ಮೂಡಿಸಿದರು.

ಗೌರವಾನ್ವಿತ ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ಸಂದೇಶ್ ಕೆ., ಡಿಜಿಟಲ್ ಸಾಧನಗಳನ್ನು ಬಳಸಿ ನಡೆಸಲಾಗುವ ಸೈಬರ್ ಕ್ರೈಂ ಅಪರಾಧ ಚಟುವಟಿಕೆಗಳ ಬಗ್ಗೆ ಮಾತನಾಡಿದರು. ಬೆಳ್ತಂಗಡಿ ವಕೀಲರ ಸಂಘದ ಕಾರ್ಯದರ್ಶಿ ನವೀನ್ ಬಿ.ಕೆ, ವಿದ್ಯಾರ್ಥಿಗಳಿಗೆ ಕಾನೂನುಬಾಹಿರ ಚಟುವಟಿಕೆಗಳ ಬಗ್ಗೆ ಶಿಕ್ಷಣ ನೀಡಿದರು. ಹಿರಿಯ ವಕೀಲರಾದ ಸುಬ್ರಹ್ಮಣ್ಯ ಕುಮಾರ್ ಅಗರ್ತರವರು ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಮತ್ತು ಎನ್‌ಡಿಪಿಎಸ್ ಕಾಯ್ದೆಯ ಕುರಿತು ಭಾಷಣ ಮಾಡಿದರು. ಗ್ರಾಹಕರ ಹಕ್ಕುಗಳ ಮಹತ್ವವನ್ನು ಮತ್ತು ಗ್ರಾಹಕರ ಜವಾಬ್ದಾರಿಗಳನ್ನು ಅರಿತುಕೊಳ್ಳಲು ಪ್ರೋತ್ಸಾಹಿಸಿದರು. ಅವರ ಭಾಷಣವು ಗ್ರಾಹಕರ ಹಿತಾಸಕ್ತಿಗಳನ್ನು ಕಾಪಾಡಲು ಮತ್ತು ಅನ್ಯಾಯದ ವ್ಯಾಪಾರ ಅಭ್ಯಾಸಗಳು, ವಂಚನೆ ಮತ್ತು ಮಾರುಕಟ್ಟೆಯಲ್ಲಿ ಶೋಷಣೆಯಂತಹ ಸಮಸ್ಯೆಗಳನ್ನು ಪರಿಹರಿಸಲು ಜ್ಞಾಪನೆಯಾಗಿ ಕಾರ್ಯನಿರ್ವಹಿಸಿತು.

ಪ್ರಸನ್ನ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಡಾ. ಅಕ್ಷತಾರವರು ಮಾತನಾಡಿ, ಎಚ್‌ಐವಿ/ಏಡ್ಸ್ ಸಾಂಕ್ರಾಮಿಕ ರೋಗದ ಬಗ್ಗೆ ಜಾಗೃತಿ ಮೂಡಿಸಲು ಉಪನ್ಯಾಸ ನೀಡಿದರು. ಸಭೆಯಲ್ಲಿ ಬೆಳ್ತಂಗಡಿಯ ವಕೀಲರಾದ ಚಿದಾನಂದ ಪಿ. ಉಪಸ್ಥಿತರಿದ್ದರು.

ಪ್ರಸನ್ನ ಫಾರ್ಮಸಿ ಕಾಲೇಜಿನ ಪ್ರಾಚಾರ್ಯರಾದ ಡಾ. ಎಂ. ಮಲ್ಲಿಕಾರ್ಜುನ ಗೌಡ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಕಾನೂನು ಅರಿವು ಹಾಗೂ ಕರ್ತವ್ಯಗಳು ತಿಳಿದುಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ. ನಾವು ಬಹಳಷ್ಟು ಕಾನೂನುಗಳನ್ನು ತಿಳಿಯದೆ ಇದ್ದರೂ ತೊಂದರೆ ಇಲ್ಲ ಆದರೆ ನಮ್ಮ ನಿತ್ಯ ಜೀವನ ಸುಖ ಸಂತೋಷದಿಂದ ಜೀವಿಸಲು ಸಂಬಂಧಪಟ್ಟ ಕಾನೂನುಗಳ ಮತ್ತು ಹಕ್ಕುಗಳು ಅರಿತುಕೊಳ್ಳುವುದು ತುಂಬಾ ಅಗತ್ಯವು ಎಂದು ನುಡಿದರು.

ಸಹಾಯಕ ಪ್ರಾಧ್ಯಾಪಕಿ ಪ್ರತೀಕ್ಷಾ ಸಭೆಯನ್ನು ಸ್ವಾಗತಿಸಿ, ಸಿಂಧೂರ ಪಲ್ಲವಿ ವಂದಿಸಿದರು. ಕಾರ್ಯಕ್ರಮವನ್ನು ಶ್ರೀಮತಿ ವಿದ್ಯಾಶ್ರೀ ನಿರೂಪಿಸಿದರು.

Related posts

ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಹಲವು ಪ್ರಶಸ್ತಿಗಳು

Suddi Udaya

ಉಜಿರೆ ಎಸ್‌.ಡಿ.ಎಂ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ “ಪೌಷ್ಠಿಕ ಆಹಾರ ಮತ್ತು ಮಾನಸಿಕ ಆರೋಗ್ಯ” ಕಾರ್ಯಕ್ರಮ

Suddi Udaya

ಜಿಲ್ಲಾ ಮಟ್ಟದ ಸೀನಿಯರ್ ವಿಭಾಗದ ರಸಪ್ರಶ್ನೆ ಸ್ಪರ್ಧೆ: ಮೈರೋಳ್ತಡ್ಕ ಶಾಲೆಯ ವಿದ್ಯಾರ್ಥಿ ಧೃತಿ ಎನ್.ಡಿ ಪ್ರಥಮ ಸ್ಥಾನ

Suddi Udaya

ಗುರುವಾಯನಕೆರೆ ಗೆಳೆಯರ ಬಳಗ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ, ಯುವ ಬಂಟರ ಹಾಗೂ ಮಹಿಳಾ ವಿಭಾಗದ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ ಅಲ್ಪಸಂಖ್ಯಾತ ಕಾಲೋನಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವ ಬಗ್ಗೆ ಸಚಿವ ಬಿ ಜೆಡ್ ಜಮೀರ್ ಅಹಮ್ಮದ್ ಖಾನ್ ರವರಿಗೆ ರಕ್ಷಿತ್ ಶಿವಾರಾಂ ರಿಂದ ಮನವಿ

Suddi Udaya
error: Content is protected !!