25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಉಜಿರೆ ಲಕ್ಷ್ಮೀ ಜನಾರ್ದನ ಹಾಗೂ ಶ್ರೀ ಉಮಾಮಹೇಶ್ವರ ಸಾನಿಧ್ಯದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ನಾಗದೇವರ ಶಿಲಾ ಪ್ರತಿಷ್ಠೆ ಹಾಗೂ ಶ್ರೀ ಪಂಜುರ್ಲಿ ದೈವದ ಪ್ರತಿಷ್ಠಾ ಮಹೋತ್ಸವ ಮತ್ತು ಶ್ರೀ ಲಕ್ಷ್ಮೀ ಜನಾರ್ದನ ಹಾಗೂ ಶ್ರೀ ಉಮಾಮಹೇಶ್ವರ ದೇವರ ಗರ್ಭಗುಡಿಯ ಶಿಲಾನ್ಯಾಸ

ಉಜಿರೆ: ಉಜಿರೆ ಪೆರ್ಲ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ವತಿಯಿಂದ ಬ್ರಹ್ಮಶ್ರೀ ವೇ| ಮೂ| ನೀಲೇಶ್ವರ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಶರತ್‌ಕೃಷ್ಣ ಪಡ್ವೆಟ್ನಾಯರ ಉಪಸ್ಥಿತಿಯಲ್ಲಿ ಶ್ರೀ ಲಕ್ಷ್ಮೀಜನಾರ್ದನ ಹಾಗೂ ಶ್ರೀ ಉಮಾಮಹೇಶ್ವರ ಸಾನಿಧ್ಯದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ನಾಗದೇವರ ಶಿಲಾ ಪ್ರತಿಷ್ಠೆ ಮತ್ತು ಶ್ರೀ ಪಂಜುರ್ಲಿ ದೈವದ ಪ್ರತಿಷ್ಠಾ ಮಹೋತ್ಸವ ಶ್ರೀ ಲಕ್ಷ್ಮೀ ಜನಾರ್ದನ ಮತ್ತು ಶ್ರೀ ಉಮಾಮಹೇಶ್ವರ ದೇವರ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮವು ಜ.2ರಂದು ನಡೆಯಿತು.

ಬೆಳಗ್ಗೆ ಗಣಪತಿ ಹೋಮದಿಂದ ಪ್ರಾರಂಭಿಸಿ ವಿವಿಧ ಹೋಮ-ಹವನ, ಶ್ರೀ ನಾಗ ದೇವರ ಬಿಂಬ ಪ್ರತಿಷ್ಠೆ, ಪಂಜುರ್ಲಿ ದೈವದ ಪದ್ಮಶಿಲಾ ಪ್ರತಿಷ್ಠಾಪನೆ, ಶ್ರೀ ಲಕ್ಷ್ಮೀ ಜನಾರ್ದನ ಮತ್ತು ಶ್ರೀ ಉಮಾಮಹೇಶ್ವರ ದೇವರ ಗರ್ಭಗುಡಿಯ ಶಿಲಾನ್ಯಾಸ ನಡೆಯಿತು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಪ್ರತಾಪ್‌ಸಿಂಹ ನಾಯಕ್, ಶ್ರೀಲಕ್ಷ್ಮೀ ಜನಾರ್ದನ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರವಿಕುಮಾರ್ ಬರಮೇಲು, ಉಜಿರೆ ಗ್ರಾ.ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್, ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಊರಿನ ಭಕ್ತರು ಉಪಸ್ಥಿತರಿದ್ದರು.

Related posts

ಲಯನ್ ಹೆರಾಲ್ಡ್ ತಾವ್ರೋ ರವರ ಪ್ರಾಂತ್ಯ ಸಮ್ಮೇಳನಕ್ಕೆ : ಚಲನಚಿತ್ರ ನಟ ಮುಖ್ಯಮಂತ್ರಿ ಚಂದ್ರು ಹಾಗೂ ತುಳುನಾಡ ಮಾಣಿಕ್ಯ ನಟ ಅರವಿಂದ ಬೋಳಾರ್

Suddi Udaya

ರಾಜ್ಯಮಟ್ಟದ ಹ್ಯಾಕಥಾನ್ ಸ್ಪರ್ಧೆ: ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya

ಗುರಿಪಳ್ಳ ಜಯನಗರದಲ್ಲಿ ಬ್ರಹ್ಮಶ್ರೀ ಬಿಲ್ಲವ ಮಹಿಳಾ ಸ್ವ ಸಹಾಯ ಸಂಘ ಉದ್ಘಾಟನೆ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್‌ನಿಂದ 542ನೇ ಸೇವಾ ಯೋಜನೆ: ಅ.1: 11 ಆಶ್ರಮಗಳಿಗೆ ಅಕ್ಕಿ, 11 ಬಡರೋಗಿಗಳಿಗೆ ವಸ್ತ್ರ, 11 ವಿವಿಧ ಬಗೆಯ ಹಣ್ಣುಹಂಪಲು ವಿತರಣೆ: ಡಿ.28: ಮಂಗಳೂರಿನಲ್ಲಿ 12 ಜೋಡಿಗಳ ಉಚಿತ ಸಾಮೂಹಿಕ ವಿವಾಹ

Suddi Udaya

ದೇವಾಲಯಗಳಲ್ಲಿ ಸೂಕ್ತ ಭದ್ರತೆ ಹಾಗೂ ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ: ವಿಧಾನ ಪರಿಷತ್‍ನಲ್ಲಿ ಪ್ರತಾಪಸಿಂಹ ನಾಯಕ್ ಒತ್ತಾಯ

Suddi Udaya

ವಾರದ ಸಂತೆ ಮಾರುಕಟ್ಟೆಗೆ ಮೀಸಲಿರಿಸಿದ ಜಮೀನನ್ನು ಸ್ವಾಧೀನಪಡಿಸಿಕೊಂಡ ತಣ್ಣೀರುಪಂತ ಗ್ರಾ.ಪಂ.

Suddi Udaya
error: Content is protected !!