July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಜ.6-10: ಎಸ್‌ಡಿಎಂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಹಳೆಗನ್ನಡ ಪಠ್ಯಗಳ ಓದು ಮತ್ತು ಅರ್ಥೈಸುವಿಕೆ ಕಾರ್ಯಾಗಾರ

ಬೆಳ್ತಂಗಡಿ: ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯದ ಉನ್ನತ ಶಿಕ್ಷಣ ಇಲಾಖೆಯಡಿ ಬರುವ ಮೈಸೂರಿನ ಭಾರತೀಯ ಭಾಷಾ ಸಂಸ್ಥಾನದ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರವು ಕಳೆದ ೧೫ ವರ್ಷಗಳಿಂದ ಶಾಸ್ತ್ರೀಯ ಕನ್ನಡದ ವಿವಿಧ ಆಯಾಮಗಳಾದ ಸಾಹಿತ್ಯ, ಭಾಷೆ, ಜಾನಪದ, ಪ್ರಾಚೀನ ಇತಿಹಾಸ ಮತ್ತು ಪುರಾತತ್ವ, ಹಸ್ತಪ್ರತಿ, ಗ್ರಂಥ ಸಂಪಾದನೆ ಇವೇ ಮೊದಲಾದ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಸಂಶೋಧನಾತ್ಮಕ ಅಧ್ಯಯನಗಳ ಮೂಲಕ ಕಾರ್ಯಪ್ರವೃತ್ತವಾಗಿದೆ.

ಈ ಚಟುವಟಿಕೆಗಳ ಭಾಗವಾಗಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಕನ್ನಡ ವಿಭಾಗದ ಸಹಯೋಗದೊಂದಿಗೆ ಜ.6ರಿಂದ 10ರವರೆಗೆ “ಹಳಗನ್ನಡ ಪಠ್ಯಗಳ ಓದು ಮತ್ತು ಅರ್ಥೈಸುವಿಕೆ” ಎಂಬ ವಿಷಯ ಕುರಿತ ಐದು ದಿನಗಳ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.

ತರಬೇತಿ ಕಾರ್ಯಕ್ರಮವು ಉಜಿರೆಯ ಶ್ರೀ ಧ.ಮಂ. ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ನಡೆಯಲಿದ್ದು, ಜ.೬ರಂದು ಬೆಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕರಾದ ಪ್ರೊ. ಬಸವರಾಜ ಕಲ್ಗುಡಿ ಅವರು ಕಾಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಈ ಕಾರ್ಯಗಾರದಲ್ಲಿ ನಾಡಿನ ಹೆಸರಾಂತ ವಿದ್ವಾಂಸರುಗಳಾದ ಪ್ರೊ. ಪಾದೆಕಲ್ಲು ವಿಷ್ಣು ಭಟ್ಟ, ಡಾ. ಪುಂಡಿಕಾಯ್ ಗಣಪಯ್ಯ ಭಟ್, ಪ್ರೊ. ಗುರುಪಾದ ಮರಿಗುದ್ದಿ, ಪ್ರೊ. ಶಿವಕುಮಾರಸ್ವಾಮಿ, ಪ್ರೊ. ಮಧೂರು ಮೋಹನ ಕಲ್ಲೂರಾಯ, ಡಾ. ತಿಮ್ಮಯ್ಯ, ಡಾ. ಯತೀಶ್ವರ ಸಿ. ಚ., ಡಾ. ದಿವಾಕರ ಕೆ., ಡಾ. ಮಾಲಿನಿ ಎನ್. ಅಭ್ಯಂಕರ್, ಡಾ. ಗವಿಸಿದ್ಧಯ್ಯ, ಉಜಿರೆ ಅಶೋಕ ಭಟ್, ಶ್ರೀಮತಿ ಮೇಧಾ ಕೆ. ಭಟ್, ಸುಪ್ರೀತ ಧರ್ಮಸ್ಥಳ, ಕುಮಾರಿ ಶ್ರೀವಿದ್ಯಾ ಐತಾಳ್ ಸಂಪನ್ಮೂಲ ವಿದ್ವಾಂಸರಾಗಿ ಭಾಗವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಎಂ. ಕುಮಾರ ಹೆಗ್ಡೆ ಮತ್ತು ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರ ಮೈಸೂರು ಇಲ್ಲಿನ ಯೋಜನಾ ನಿರ್ದೇಶಕ ಪ್ರೊ. ಎನ್. ಎಂ. ತಳವಾರ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಈ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಸಕ್ತಿಯಿರುವವರು ಕಾರ್ಯಕ್ರಮ ಸಂಯೋಜಕರಾದ ಡಾ. ಬೋಜಮ್ಮ ಕೆ.ಎನ್. (7204245666) ಹಾಗೂ ಡಾ ನಾಗಣ್ಣ ಡಿ.ಎ. (9980240210) ಇವರನ್ನು ಸಂಪರ್ಕಿಸಲು ತಿಳಿಸಲಾಗಿದೆ.

Related posts

ಮದ್ದಡ್ಕತಾಯಿ ರಕ್ತೇಶ್ವರಿ ದೈವ ಮತ್ತು ಪಿಲಿಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರ: ಊರ ಭಕ್ತಾದಿಗಳಿಂದ ಶ್ರಮದಾನ

Suddi Udaya

ಫೆ.15-22: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಪೂರ್ವಭಾವಿ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಭೇಟಿ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ವಾರ್ಷಿಕ ಮಹೋತ್ಸವ ಸಂಪನ್ನ

Suddi Udaya

ಪಡ್ಲಾಡಿ, ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ತೋಟತ್ತಾಡಿ: ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಚಿಬಿದ್ರೆ ಇದರ ವಾರ್ಷಿಕೋತ್ಸವದ ಅಂಗವಾಗಿ ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!