April 21, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಪೆರಾಡಿ ಸಿಎ ಬ್ಯಾಂಕಿನ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಹೇಮಾ ಅಧಿಕಾರ ಸ್ವೀಕಾರ

ಪೆರಾಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಪೆರಾಡಿ ಇದರ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಶ್ರೀಮತಿ ಹೇಮಾರವರು ಜ‌.1ರಂದು ಅಧಿಕಾರ ಸ್ವೀಕರಿಸಿದರು.

ಕಳೆದ 39 ವರ್ಷಗಳಿಂದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಸೇವೆಯಿಂದ ನಿವೃತರಾದ ಯು.ಶೇಖ್ ಲತೀಪ್ ಅವರು ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೇಮಾರವರಿಗೆ ಅಧಿಕಾರ ಹಸ್ತಾಂತರಿಸಿದರು.

ಶ್ರೀಮತಿ ಹೇಮರವರು ಕಳೆದ 22 ವರ್ಷಗಳಿಂದ ಗುಮಾಸ್ತೆಯಾಗಿ,ಲೆಕ್ಕಿಗರಾಗಿ,ಬ್ರಾಂಚ್ ಮ್ಯಾನೇಜರ್ ಆಗಿ ಸೇವೆ ಸಲ್ಲಿಸಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹುದ್ದೆ ಅಲಂಕರಿಸಿದ್ದಾರೆ.

ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಸದಸ್ಯ ಸತೀಶ್ ಕಾಶಿಪಟ್ಣ,ಆಂತರೀಕ ಲೆಕ್ಕ ಪರಿಶೋಧಕ ಮಹೇಂದ್ರ ವರ್ಮ,ಲೆಕ್ಕಿಗ ರೋಹಿಣಿ,ಶಾಖ ವ್ಯವಸ್ಥಾಪಕ ವೀರೇಂದ್ರ ಕುಮಾರ್,ಸಿಬ್ಬಂದಿಗಳಾದ ಕವಿತಾ, ಪ್ರಜ್ಞಾ,ಅಕ್ಷತಾ,ನಳಿನಿ,ಸುಜಿತ್,ಮನೋಜ್ ಉಪಸ್ಥಿತರಿದ್ದರು.

Related posts

ಜೇನು ಕುಟುಂಬಕ್ಕಾಗಿ ಕಾಡಿಗೆ ತೆರಳಿದ್ದ ಅಣ್ಣ ಸಂತೋಷ್‌ಗೆ ಕಚ್ಚಿದ ಹಾವು: ಬಾಯಿಯಿಂದ ವಿಷ ಹೀರಿ ಅಣ್ಣನ ಜೀವ ಉಳಿಸಿದ ತಮ್ಮ ಗಣೇಶ್

Suddi Udaya

ಕುತ್ಲೂರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಸಂತೋಷ್ ಪೂಜಾರಿರವರ ನೂತನ ಗೃಹಪ್ರವೇಶಕ್ಕೆ ಮಾಜಿ ಸಚಿವ ರಮಾನಾಥ್ ರೈ ಭೇಟಿ

Suddi Udaya

ಮೊಗ್ರು ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಸಭೆ; ನೂತನ ಸಮಿತಿ ರಚನೆ

Suddi Udaya

ಗಾಳಿ ಮಳೆಗೆ ಕುಸಿದು ಬಿದ್ದ ಮನೆ : ಉಜಿರೆ ಗ್ರಾ.ಪಂ. ನಿಂದ ರೂ.10 ಸಾವಿರ ಪರಿಹಾರ ಮಂಜೂರು

Suddi Udaya

ಬಂದಾರಿನಲ್ಲಿ ಮತ್ತೆ ತೋಟಕ್ಕೆ ನುಗ್ಗಿದ್ದ ಕಾಡಾನೆ: ಕೃಷಿ ಹಾನಿ

Suddi Udaya

ಬೆಳ್ತಂಗಡಿ ತಾಲೂಕು 2ನೇ ಗಮಕ ಸಮ್ಮೇಳನ ಅಧ್ಯಕ್ಷರಾಗಿ ಜಯರಾಮ ಕುದ್ರೆತ್ತಾಯ ಧರ್ಮಸ್ಥಳ ಆಯ್ಕೆ

Suddi Udaya
error: Content is protected !!