July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಬಂದಾರು ಗ್ರಾಮದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ: ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆ

ಬಂದಾರು: ಬಂದಾರು ಗ್ರಾಮದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಜ.೭ರಿಂದ ೧೨ ರವರೆಗೆ ನಡೆಯುವ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆಯು ಜ.2ರಂದು ನಡೆಯಿತು.

ಪ್ರಗತಿಪರ ಕೃಷಿಕರಾದ ಧರ್ಣಪ್ಪ ಗೌಡ ಅಂಡಿಲ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.

ಸೀತಾರಾಮ ಶೆಟ್ಟಿ ಕೆಂಬರ್ಜೆ ಮಾರ್ಗದರ್ಶನ ನೀಡಿದರು. ಉದ್ಯಮಿ ರೈತಬಂಧು ಆಹಾರೋಧ್ಯಮ ಮಾಲಕರಾದ ಶಿವಶಂಕರ ನಾಯಕ್, ಬ್ರಹ್ಮಕಲಶೋತ್ಸವ ಪ್ರಧಾನ ಸಂಚಾಲಕ ಬಾಲಕೃಷ್ಣ ಪೂಜಾರಿ ಬಜಗುತ್ತು, ಅಧ್ಯಕ್ಷ ಮಹಾಬಲ ಗೌಡ ಸಲಹೆ ಸೂಚನೆ ಮಾಹಿತಿ ಅವಲೋಕನ ಮಾಡಿದರು.

ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಪರಪ್ಪಾದೆ, ಕೋಶಾಧಿಕಾರಿ ಕೇಶವ ಕೊಂಗುಜೆ, ಆಡಳಿತ ಮಂಡಳಿ ಅಧ್ಯಕ್ಷರಾದ ರಮೇಶ್ ಗೌಡ, ಅರ್ಚಕರಾದ ಅನಂತರಾಮ ಶಬರಾಯ, ಅನುವಂಶೀಯ ಆಡಳಿಯ ಮೊಕ್ತೇಸರ ಕುಕ್ಕಪ್ಪ ಗೌಡ ಉಪಸ್ಥಿತರಿದ್ದರು.

ಜೀರ್ಣೋದ್ದಾರ ಸಮಿತಿ ಮಾಜಿ ಅಧ್ಯಕ್ಷ ಆದಪ್ಪ ಗೌಡ, ಆಡಳಿತ ಮಂಡಳಿ ಕಾರ್ಯದರ್ಶಿ ಉಮೇಶ್ ಗೌಡ, ಮಹಿಳಾ ಸಮಿತಿಯ ಜ್ಯೋತಿ ಕುರುಡಂಗೆ ಸಮಯೋಚಿತವಾಗಿ ಅನಿಸಿಕೆ ವ್ಯಕ್ತಪಡಿಸಿದರು.

ಆಡಳಿತ ಮಂಡಳಿಯ, ಬ್ರಹ್ಮಕಲಶೋತ್ಸವ ಸಮಿತಿಯ, ಎಲ್ಲಾ ಉಪಸಮಿತಿಯ ಸಂಚಾಲಕರು, ಸಹಸಂಚಾಲಕರು, ಸರ್ವ ಸದಸ್ಯರು, ಉಪಸ್ಥಿತರಿದ್ದರು. ಬ್ರಹ್ಮಕಲಶೋತ್ಸವ ಜೊತೆ ಕಾರ್ಯದರ್ಶಿ ಸತೀಶ್ ಬಾಲಂಪಾಡಿ ಕಾರ್ಯಕ್ರಮ ನಿರ್ವಹಿಸಿದರು.

Related posts

ಉಜಿರೆ ಶ್ರೀ ಧ.ಮಂ. ಪದವಿ ಕಾಲೇಜಿನ ಎಂಟರ್ಪ್ರಿನಾರ್ಶಿಪ್ ಡೆವಲಪ್ಮೆಂಟ್ ಸೆಲ್ಲ್ ವಿಭಾಗದ ವತಿಯಿಂದ ಪ್ರೋಡಕ್ಟ್ ಲಾಂಚ್

Suddi Udaya

ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷರಾಗಿ ಶುಭಕರ್ ಪೂಜಾರಿ, ಕಾರ್ಯದರ್ಶಿಯಾಗಿ ರಕ್ಷಿತ್ ಬಂಗೇರ

Suddi Udaya

ನೆರಿಯ: ಕಡವೆ ಬೇಟೆ, ಬಂದೂಕು ಸಹಿತ ಆರೋಪಿ ವಶಕ್ಕೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ರಂಜಿತ್ ಹೆಚ್.ಡಿ ಬಳಂಜ ವಲಯ ಉಪಾಧ್ಯಕ್ಷರಾಗಿ ಆಯ್ಕೆ

Suddi Udaya

ಭಾರತೀಯ ಜನತಾ ಪಾರ್ಟಿ ಉಜಿರೆ ಮಹಾಶಕ್ತಿ ಕೇಂದ್ರ ದ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಪೊಲೀಯೋ ಲಸಿಕಾ ಅಭಿಯಾನಕ್ಕೆ ಶಾಸಕ ಹರೀಶ್ ಪೂಂಜ ಚಾಲನೆ

Suddi Udaya
error: Content is protected !!