April 21, 2025
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆನಕ ರಜತ ಸಂಭ್ರಮ ಲಾಂಛನ ಅನಾವರಣ

ಉಜಿರೆ: ಆರೋಗ್ಯ ಕ್ಷೇತ್ರದಲ್ಲಿ ಅನವರತ ಸೇವೆಯನ್ನು ನೀಡುತ್ತಾ ಬೆಳೆದ ಬೆನಕ ಆಸ್ಪತ್ರೆ ಇನ್ನಷ್ಟು ಬೆಳೆದು ಜನಹಿತ ಕೆಲಸ ಮಾಡುವಂತಾಗಲಿ ಎಂದು ಸೀತಾರಾಮ ಭಟ್ ಶುಭಹಾರೈಸಿದರು.

ಸೀತಾರಾಮ ಭಟ್ ಅವರು ಉಜಿರೆ ಬೆನಕ ಆಸ್ಪತ್ರೆಯ ರಜತ ಸಂಭ್ರಮ ವರ್ಷದ ಲಾಂಛನವನ್ನು ಆಸ್ಪತ್ರೆಯ ಆವರಣದಲ್ಲಿ ಅನಾವರಣಗೊಳಿಸಿ ಮಾತನಾಡುತ್ತಿದ್ದರು.

ರಜತಸಂಭ್ರಮ ಲಾಂಛನವು ಬೆನಕ ಆಸ್ಪತ್ರೆಯ ನಿಷ್ಕಲ್ಮಶ, ಗುಣಮಟ್ಟದ ಹಾಗೂ ನಗುಮುಖದ ಸೇವೆಯ ಪ್ರತೀಕ. ಇನ್ನಷ್ಟು ಜನಹಿತ ಸಂತೃಪ್ತ ಸೇವೆಯನ್ನು ಸಮರ್ಪಣಾಭಾವದಿಂದ ಒದಗಿಸುವಲ್ಲಿ ಈ ಲಾಂಛನ ಪ್ರೇರಣೆಯಾಗಲಿ ಎಂದು ಹಾರೈಸಿದರು.

ಬೆನಕ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ| ಗೋಪಾಲಕೃಷ್ಣ ಪ್ರಾಸ್ತವಿಕವಾಗಿ ಮಾತನಾಡಿ ಇಪ್ಪತೈದು ವರ್ಷಗಳ ಹಿಂದೆ ಸಾಮಾನ್ಯ ಖಾಯಿಲೆಗಳಿಗೆ ಒಳರೋಗಿ ಚಿಕಿತ್ಸೆ ಪಡೆಯಲು ದೂರದ ಪಟ್ಟಣಕ್ಕೆ ಹೋಗಬೇಕಾದ ಅನಿವಾರ್ಯತೆ ಇತ್ತು. ಅಂದಿನ ಅಗತ್ಯವನ್ನು ಮನಗೊಂಡು ಆರಂಭವಾದ ಕೇವಲ ಹತ್ತು ಹಾಸಿಗೆಗಳ ಆಸ್ಪತ್ರೆ ಇಂದು ಸುಸಜ್ಜಿತ ನೂರು ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಾಗಿ ಬೆಳೆದು ನಿಂತಿದೆ. ಆಧುನಿಕ ಸೌಲಭ್ಯಗಳು, ಗುಣಮಟ್ಟದ ಸೇವೆ, ಸೇವಾ ಮನೋಭಾವದ ಸಿಬ್ಬಂಧಿ ಹಾಗೂ ನಮ್ಮ ಮೇಲೆ ಸಾರ್ವಜನಿಕರ ವಿಶ್ವಾದಿಂದಾಗಿ ನಮ್ಮ ಸಂಸ್ಥೆ ಬೆಳೆದು ನಿಂತಿದೆ. ನಾವು ನೀಡುವ ಸೇವೆ ನಮಗೆ ತೃಪ್ತಿ ತರುವುದರೊಂದಿಗೆ ನಮ್ಮಲ್ಲಿಗೆ ಬರುವ ರೋಗಿಗಳು ಗುಣಮುಖರಾಗಿ ಸಂತೃಪ್ತಿಯ ನಗುವಿನೊಂದಿಗೆ ತೆರಳಬೇಕೆಂಬುದೇ ನಮ್ಮ ಆಶಯ. ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದ ನಂತರ ಗುಣಮುಖರಾಗಿ ಸಂತಸದಿಂದ ಮರಳುವ ಜನತೆಯನ್ನು ಕಂಡಾಗ ವೈದ್ಯರ ಮನದಲ್ಲೊಂದು ಸಂತೃಪ್ತ ಭಾವ ಮೂಡುತ್ತದೆ. ಇಂಥ ಸಂತೃಪ್ತಿಯಲ್ಲೇ ಸಾರ್ಥಕತೆ ಕಾಣುವ ಪ್ರಯತ್ನ ನಮ್ಮದು. ಗುರುಹಿರಿಯರ ಆಶೀರ್ವಾದ, ಜನರ ಪ್ರೀತಿ, ನಮ್ಮ ಸಿಬ್ಬಂಧಿ ಹಾಗೂ ಕುಟುಂಬದ ಸದಸ್ಯರ ಸಹಕಾರದಿಂದಾಗಿ ನಮ್ಮ ಆಸ್ಪತ್ರೆಗೆ ಆಧುನಿಕ ಸ್ಪರ್ಷ ನೀಡಲು ಸಾಧ್ಯವಾಗಿದೆ ಎಂದು ತಿಳಿಸಿದರು.

ಆಸ್ಪತ್ರೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಎಸ್.ಜಿ ಭಟ್ ಸ್ವಾಗತಿಸಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ದೇವಸ್ಯ ವಂದಿಸಿದ ಕಾರ್ಯಕ್ರಮದಲ್ಲಿ ಡಾ| ಭಾರತಿ, ಡಾ| ಆದಿತ್ಯ ಡಾ| ಅಂಕಿತಾ ಹಾಗೂ ಆಸ್ಪತ್ರೆಯ ಸಿಬ್ಬಂದಿ ಭಾಗವಹಿಸಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕಂಪ್ಯೂಟರ್ ತರಬೇತಿ ಕಾರ್ಯಾಗಾರ

Suddi Udaya

ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದು ಹಿಂದಕ್ಕೆ ಕಳುಹಿಸಿದ ಪೊಲೀಸರು

Suddi Udaya

ನಾರಾವಿ: ಬಸದಿಯಲ್ಲಿ ಧಾಮ ಸಂಪ್ರೋಕ್ಷಣಾಪೂರ್ವಕ ಪ್ರತಿಷ್ಠಾ ಮಹೋತ್ಸವ

Suddi Udaya

ಹಿಂದೂಗಳ ತೆರಿಗೆ ಹಿಂದೂಗಳಿಗೆ ಸಲ್ಲಬೇಕು: ಶಾಸಕ ಹರೀಶ್ ಪೂಂಜ

Suddi Udaya

ಮೊಗ್ರು: ಅಲೆಕ್ಕಿ-ಮುಗೇರಡ್ಕ ಶ್ರೀ ರಾಮ ಶಿಶು ಮಂದಿರದ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ ಹಾಗೂ ತುಳಸಿ ಪೂಜೆ

Suddi Udaya

ಕರಾಟೆ ಪಟುಗಳ ಹಳದಿ ಬೆಲ್ಟ್ ಪರೀಕ್ಷೆ: ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿ.ಬಿ.ಎಸ್.ಇ ಶಾಲೆಯ 35 ವಿದ್ಯಾರ್ಥಿಗಳು ತೇರ್ಗಡೆ

Suddi Udaya
error: Content is protected !!