July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಸೇತುವೆ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ರೂ.14.25 ಕೋಟಿ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ವಿವಿಧ ಕಡೆ ಮಳೆಯಿಂದ ಹಾನಿಗೀಡಾದ ಪ್ರದೇಶದಲ್ಲಿ ಗ್ರಾಮೀಣ ಜನತೆಯ ಸಂಚಾರಕ್ಕೆ ಅನುಕೂಲವಾಗುವ ದೃಷ್ಟಿಯಿಂದ ಶಾಸಕ ಹರೀಶ್ ಪೂಂಜರು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಪ್ರಕಾರ ಕರ್ನಾಟಕ ಸರಕಾರವು ಲೋಕೋಪಯೋಗಿ ಇಲಾಖೆಯ ಮೂಲಕ ಈ ಕೆಳಗಿನ ಕಾಮಗಾರಿಗಳಿಗೆ ರೂ.14.25 ಕೋಟಿ ಅನುದಾನ ಬಿಡುಗಡೆ ಮಾಡಿದೆಯೆಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಮರಕಡದಿಂದ ಪುದುವೆಟ್ಟು ಗ್ರಾಮದ ಮಿಯ್ಯಾರು ಸಂಪರ್ಕ ರಸ್ತೆ ಅಭಿವೃದ್ಧಿ-ರೂ.4 ಕೋಟಿ, ಧರ್ಮಸ್ಥಳ-ತೋಟತ್ತಾಡಿ-ಚಿಬಿದ್ರೆ ಜಿಲ್ಲಾ ಮುಖ್ಯ ರಸ್ತೆ ಅಭಿವೃದ್ಧಿ-ರೂ.2 ಕೋಟಿ, ಪುಯ್ಯ-ಉಳಿಯ-ಕಂಚಿನಡ್ಕ-ಮುರ ಜಿಲ್ಲಾ ಮುಖ್ಯ ರಸ್ತೆ ಅಭಿವೃದ್ಧಿ-ರೂ.1 ಕೋಟಿ, ನಾರಾವಿ-ಪಾಣಾಲು-ಮಾವಿನಕಟ್ಟೆ ಜಿಲ್ಲಾ ಮುಖ್ಯ ರಸ್ತೆ ಅಭಿವೃದ್ಧಿ-ರೂ.1ಕೋಟಿ, ಧರ್ಮಸ್ಥಳ ಮುಂಡಾಜೆ ರಸ್ತೆಯಲ್ಲಿ ಆಯ್ದ ಭಾಗಗಳಲ್ಲಿ ಸೇತುವೆ ನಿರ್ಮಾಣ- ರೂ.3.75 ಕೋಟಿ, ಉಜಿರೆ-ಇಂದಬೆಟ್ಟು ರಸ್ತೆಯ ಅಂಬಡಬೆಟ್ಟು ಎಂಬಲ್ಲಿ ಸೇತುವೆ ನಿರ್ಮಾಣ-ರೂ.2.50 ಕೋಟಿ ಬಿಡುಗಡೆಗೊಂಡಿದ್ದು ಶೀಘ್ರವೇ ಕಾಮಗಾರಿ ಚಾಲನೆಯಾಗಲಿದೆಯೆಂದು ಶಾಸಕರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

Related posts

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನ ಆಡಳಿತಕ್ಕೆ ವೇಣೂರಿನ ವಿದ್ಯೋದಯ ವಿದ್ಯಾ ಸಂಸ್ಥೆಗಳು

Suddi Udaya

ಅರಸಿನಮಕ್ಕಿ: ಎರಡನೇ ಬಾರಿಗೆ ಚುನಾಯಿತರಾಗಿರುವ ಶಾಸಕ ಹರೀಶ್ ಪೂಂಜರವರಿಗೆ ಕಾರ್ಯಕರ್ತರಿಂದ ಅಭಿನಂದನೆ ಮತ್ತು ಚುನಾವಣಾ ಅವಲೋಕನ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಚುಟುಕು ಸಾಹಿತ್ಯ ಪರಿಷತ್ ಉದ್ಘಾಟನೆ

Suddi Udaya

ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಾಬ್ಧಿ ಸಾಂಸ್ಕೃತಿಕ ಹಬ್ಬ

Suddi Udaya

ಬೆಳ್ತಂಗಡಿಯಲ್ಲಿ ಬಸ್ ದರ ಹೆಚ್ಚಳ ಖಂಡಿಸಿ ಎಸ್‌ಡಿಪಿಐ ಪ್ರತಿಭಟನೆ

Suddi Udaya

ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya
error: Content is protected !!