23.5 C
ಪುತ್ತೂರು, ಬೆಳ್ತಂಗಡಿ
March 7, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಣಿಪಾಲ ಕೆಎಂಸಿಯಿಂದ ಬೆಂಗಳೂರಿನ ಜಯದೇವಆಸ್ಪತ್ರೆಗೆ ಮಗು ವೃಂದಳನ್ನು ತುರ್ತು ಚಿಕಿತ್ಸೆಗೆ ಕರೆದೊಯ್ದ ಈಶ್ವರ್ ಮಲ್ಪೆ ಆಂಬುಲೆನ್ಸ್- ಜಿರೋ ಟ್ರಾಫಿಕ್‌ಗೆ ಸಹಕರಿಸಿದ ಸಾರ್ವಜನಿಕರು, ವಾಹನ ಸವಾರರು ಹಾಗೂ ಪೊಲೀಸರು

ಬೆಳ್ತಂಗಡಿ: ಮಣಿಪಾಲ ಕೆಎಂಸಿ ಆಸ್ಪತ್ರೆಯಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ತುರ್ತು ಚಿಕಿತ್ಸೆಗಾಗಿ ಜಿರೋ ಟ್ರಾಫಿಕ್ ಮೂಲಕ ೬ ತಿಂಗಳ ಮಗು ವೃಂದಳನ್ನು ಕರೆದೊಯ್ಯಲಾಯಿತು. ಖ್ಯಾತ ಮುಳುಗು ತಜ್ಞ, ಸಾಮಾಜ ಸೇವಕ ಈಶ್ವರ್ ಮಲ್ಪೆ ಅವರ ಆಂಬುಲೆನ್ಸ್ ಮೂಲಕ ಮಗುವನ್ನು ಉಚಿತವಾಗಿ ಚಿಕಿತ್ಸೆಗೆ ಕರೆದೊಯ್ಯಲಾಯಿತು.

ಮಣಿಪಾಲದಿಂದ ಹಿರಿಯಡ್ಕ, ಕಾರ್ಕಳ, ಬಜಗೋಳಿ, ಗುರುವಾಯನಕೆರೆ,ಬೆಳ್ತಂಗಡಿ, ಉಜಿರೆ, ಚಾರ್ಮಾಡಿ,. ಮೂಡಿಗೆರೆ, ಬೆಲೂರು, ಹಾಸನ, ಚನ್ನರಾಯಪಟ್ಣ, ಬೆಳ್ಳೂರು ಕ್ರಾಸ್, ನೆಲಮಂಗಲ ಮೂಲಕ ಜಯದೇವ ಆಸ್ಪತ್ರೆಗೆ ಕರೆಯದೊಯ್ಯಲಾಗುತ್ತಿದೆ.

ಮಣಿಪಾಲದಿಂದ ಹೊರಟ ಅಂಬುಲೆನ್ಸ್‌ಗೆ ಬೆಂಗಳೂರು ಮುಟ್ಟುವವರೆಗೆ ಯಾವುದೆ ಟ್ರಾಫಿಕ್ ಸಮಸ್ಯೆ ಉಂಟಾಗದಂತೆ ಸಾರ್ವಜನಿಕರು, ವಾಹನ ಸಾವಾರರು ದಾರಿ ಮಾಡಿಕೊಟ್ಟರು, ಅಲ್ಲಲ್ಲಿ ಪೊಲೀಸರು ನಿಂತು ಜಿರೋ ಟ್ರಾಫಿಕ್‌ಗೆ ಸಹಕರಿಸಿದರು. ಅಂಬ್ಯುಲೆನ್ಸ್ ಬೆಳ್ತಂಗಡಿ ತಾಲೂಕಿನ ನಾರಾವಿ, ಕುತ್ಲೂರು, ಅಳದಂಗಡಿ, ಗುರುವಾಯನಕೆರೆ, ಬೆಳ್ತಂಗಡಿ, ಉಜಿರೆ,

ಸೋಮಂತಡ್ಕ, ಮುಂಡಾಜೆ, ಕಕ್ಕಿಂಜೆ, ಚಾರ್ಮಾಡಿ ಮೂಲಕ ಮೂಡಿಗೆರೆಗೆ ತಲುಪುವರೆಗೆ ವಾಹನ ಸವರಾರು, ಸಾರ್ವಜನಿಕರು, ಪೊಲೀಸರು ಪೂರ್ಣ ಸಹಕಾರ ನೀಡಿದರು. ಮಣಿಪಾಲದಿಂದ ಬೆಂಗಳೂರಿಗೆ ಮಗುವಿನ ಚಿಕಿತ್ಸೆಗೆ ಕರೆದೊಯ್ಯುವ ಬಗ್ಗೆ ನಿನ್ನೆಯಿಂದಲೇ ವಾಟ್ಸಫ್‌ನಲ್ಲಿ ಮಾಹಿತಿ ಹಾಕಿ ಸಾರ್ವಜನಿಕರ ಹಾಗೂ ವಾಹನ ಚಾಲಕರ ಸಹಕಾರವನ್ನು ಕೋರಲಾಗಿತ್ತು.

Related posts

ಬೆಳ್ತಂಗಡಿ: ಖಾಸಗಿ ಕಾಲೇಜಿನ ಪ್ರಥಮ ಪದವಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ನಾಲ್ಕೂರು: ಸಿದ್ದಪ್ಪ ಪೂಜಾರಿ ನಿಧನ

Suddi Udaya

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾಷಣ ಸ್ಪರ್ಧೆ

Suddi Udaya

ನಾಳ: ಶಿವ ದುರ್ಗಾ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ಶುಭಾರಂಭ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ನಲ್ಲಿ ಧರ್ಮಾಧ್ಯಕ್ಷರ ರಜತ ಸಂಭ್ರಮದ ಭವ್ಯಾಚರಣೆ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಕ್ರಿಸ್ಮಸ್ ಸಂಭ್ರಮಾಚರಣೆ

Suddi Udaya
error: Content is protected !!