24.9 C
ಪುತ್ತೂರು, ಬೆಳ್ತಂಗಡಿ
April 18, 2025
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಣಿಪಾಲ ಕೆಎಂಸಿಯಿಂದ ಬೆಂಗಳೂರಿನ ಜಯದೇವಆಸ್ಪತ್ರೆಗೆ ಮಗು ವೃಂದಳನ್ನು ತುರ್ತು ಚಿಕಿತ್ಸೆಗೆ ಕರೆದೊಯ್ದ ಈಶ್ವರ್ ಮಲ್ಪೆ ಆಂಬುಲೆನ್ಸ್- ಜಿರೋ ಟ್ರಾಫಿಕ್‌ಗೆ ಸಹಕರಿಸಿದ ಸಾರ್ವಜನಿಕರು, ವಾಹನ ಸವಾರರು ಹಾಗೂ ಪೊಲೀಸರು

ಬೆಳ್ತಂಗಡಿ: ಮಣಿಪಾಲ ಕೆಎಂಸಿ ಆಸ್ಪತ್ರೆಯಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ತುರ್ತು ಚಿಕಿತ್ಸೆಗಾಗಿ ಜಿರೋ ಟ್ರಾಫಿಕ್ ಮೂಲಕ ೬ ತಿಂಗಳ ಮಗು ವೃಂದಳನ್ನು ಕರೆದೊಯ್ಯಲಾಯಿತು. ಖ್ಯಾತ ಮುಳುಗು ತಜ್ಞ, ಸಾಮಾಜ ಸೇವಕ ಈಶ್ವರ್ ಮಲ್ಪೆ ಅವರ ಆಂಬುಲೆನ್ಸ್ ಮೂಲಕ ಮಗುವನ್ನು ಉಚಿತವಾಗಿ ಚಿಕಿತ್ಸೆಗೆ ಕರೆದೊಯ್ಯಲಾಯಿತು.

ಮಣಿಪಾಲದಿಂದ ಹಿರಿಯಡ್ಕ, ಕಾರ್ಕಳ, ಬಜಗೋಳಿ, ಗುರುವಾಯನಕೆರೆ,ಬೆಳ್ತಂಗಡಿ, ಉಜಿರೆ, ಚಾರ್ಮಾಡಿ,. ಮೂಡಿಗೆರೆ, ಬೆಲೂರು, ಹಾಸನ, ಚನ್ನರಾಯಪಟ್ಣ, ಬೆಳ್ಳೂರು ಕ್ರಾಸ್, ನೆಲಮಂಗಲ ಮೂಲಕ ಜಯದೇವ ಆಸ್ಪತ್ರೆಗೆ ಕರೆಯದೊಯ್ಯಲಾಗುತ್ತಿದೆ.

ಮಣಿಪಾಲದಿಂದ ಹೊರಟ ಅಂಬುಲೆನ್ಸ್‌ಗೆ ಬೆಂಗಳೂರು ಮುಟ್ಟುವವರೆಗೆ ಯಾವುದೆ ಟ್ರಾಫಿಕ್ ಸಮಸ್ಯೆ ಉಂಟಾಗದಂತೆ ಸಾರ್ವಜನಿಕರು, ವಾಹನ ಸಾವಾರರು ದಾರಿ ಮಾಡಿಕೊಟ್ಟರು, ಅಲ್ಲಲ್ಲಿ ಪೊಲೀಸರು ನಿಂತು ಜಿರೋ ಟ್ರಾಫಿಕ್‌ಗೆ ಸಹಕರಿಸಿದರು. ಅಂಬ್ಯುಲೆನ್ಸ್ ಬೆಳ್ತಂಗಡಿ ತಾಲೂಕಿನ ನಾರಾವಿ, ಕುತ್ಲೂರು, ಅಳದಂಗಡಿ, ಗುರುವಾಯನಕೆರೆ, ಬೆಳ್ತಂಗಡಿ, ಉಜಿರೆ,

ಸೋಮಂತಡ್ಕ, ಮುಂಡಾಜೆ, ಕಕ್ಕಿಂಜೆ, ಚಾರ್ಮಾಡಿ ಮೂಲಕ ಮೂಡಿಗೆರೆಗೆ ತಲುಪುವರೆಗೆ ವಾಹನ ಸವರಾರು, ಸಾರ್ವಜನಿಕರು, ಪೊಲೀಸರು ಪೂರ್ಣ ಸಹಕಾರ ನೀಡಿದರು. ಮಣಿಪಾಲದಿಂದ ಬೆಂಗಳೂರಿಗೆ ಮಗುವಿನ ಚಿಕಿತ್ಸೆಗೆ ಕರೆದೊಯ್ಯುವ ಬಗ್ಗೆ ನಿನ್ನೆಯಿಂದಲೇ ವಾಟ್ಸಫ್‌ನಲ್ಲಿ ಮಾಹಿತಿ ಹಾಕಿ ಸಾರ್ವಜನಿಕರ ಹಾಗೂ ವಾಹನ ಚಾಲಕರ ಸಹಕಾರವನ್ನು ಕೋರಲಾಗಿತ್ತು.

Related posts

ಬೆಳ್ತಂಗಡಿ ತಾಲೂಕು 18ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಂಪನ್ನ: ವಿವಿಧ ಕ್ಷೇತ್ರಗಳ ಐದು ಮಂದಿ ಸಾಧಕರಿಗೆ ಗೌರವಾರ್ಪಣೆ

Suddi Udaya

ಉಜಿರೆಯ ಪದ್ಮಶ್ರೀ ಎಂಟರ್ ಪ್ರೈಸಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ “ಪದ್ಮಶ್ರೀ ಬೆಳಕಿನ ಶಾಪಿಂಗ್ ಉತ್ಸವ”

Suddi Udaya

ಅಪಘಾತದಲ್ಲಿ ಗಂಭೀರ ಗಾಯಗೊಂಡ ಉಜಿರೆಯ ಸುರೇಂದ್ರ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಮುಗೇರಡ್ಕ: ಸ್ಪಂದನ ಚಾರಿಟೇಬಲ್ ಟ್ರಸ್ಟ್ , ಬೆಂಗಳೂರು ಮತ್ತು ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ಇದರ ಆಶ್ರಯದಲ್ಲಿ ಮನೆ ಹಸ್ತಾಂತರ ಕಾರ್ಯಕ್ರಮ

Suddi Udaya

ಗುರುವಾಯನಕೆರೆಯಲ್ಲಿ “ಕಿಂಗ್‌ಡಂ ಗೋಲ್ಡ್ & ಡೈಮಂಡ್ ಜ್ಯುವೆಲ್ಸ್” ಉದ್ಘಾಟನೆ

Suddi Udaya

ಧರ್ಮಸ್ಥಳ: ನದಿಯ ತೀರದಲ್ಲಿ ಅಪರಿಚಿತ ಶವ ಪತ್ತೆ

Suddi Udaya
error: Content is protected !!