25.5 C
ಪುತ್ತೂರು, ಬೆಳ್ತಂಗಡಿ
June 8, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಣಿಪಾಲ ಕೆಎಂಸಿಯಿಂದ ಬೆಂಗಳೂರಿನ ಜಯದೇವಆಸ್ಪತ್ರೆಗೆ ಮಗು ವೃಂದಳನ್ನು ತುರ್ತು ಚಿಕಿತ್ಸೆಗೆ ಕರೆದೊಯ್ದ ಈಶ್ವರ್ ಮಲ್ಪೆ ಆಂಬುಲೆನ್ಸ್- ಜಿರೋ ಟ್ರಾಫಿಕ್‌ಗೆ ಸಹಕರಿಸಿದ ಸಾರ್ವಜನಿಕರು, ವಾಹನ ಸವಾರರು ಹಾಗೂ ಪೊಲೀಸರು

ಬೆಳ್ತಂಗಡಿ: ಮಣಿಪಾಲ ಕೆಎಂಸಿ ಆಸ್ಪತ್ರೆಯಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ತುರ್ತು ಚಿಕಿತ್ಸೆಗಾಗಿ ಜಿರೋ ಟ್ರಾಫಿಕ್ ಮೂಲಕ ೬ ತಿಂಗಳ ಮಗು ವೃಂದಳನ್ನು ಕರೆದೊಯ್ಯಲಾಯಿತು. ಖ್ಯಾತ ಮುಳುಗು ತಜ್ಞ, ಸಾಮಾಜ ಸೇವಕ ಈಶ್ವರ್ ಮಲ್ಪೆ ಅವರ ಆಂಬುಲೆನ್ಸ್ ಮೂಲಕ ಮಗುವನ್ನು ಉಚಿತವಾಗಿ ಚಿಕಿತ್ಸೆಗೆ ಕರೆದೊಯ್ಯಲಾಯಿತು.

ಮಣಿಪಾಲದಿಂದ ಹಿರಿಯಡ್ಕ, ಕಾರ್ಕಳ, ಬಜಗೋಳಿ, ಗುರುವಾಯನಕೆರೆ,ಬೆಳ್ತಂಗಡಿ, ಉಜಿರೆ, ಚಾರ್ಮಾಡಿ,. ಮೂಡಿಗೆರೆ, ಬೆಲೂರು, ಹಾಸನ, ಚನ್ನರಾಯಪಟ್ಣ, ಬೆಳ್ಳೂರು ಕ್ರಾಸ್, ನೆಲಮಂಗಲ ಮೂಲಕ ಜಯದೇವ ಆಸ್ಪತ್ರೆಗೆ ಕರೆಯದೊಯ್ಯಲಾಗುತ್ತಿದೆ.

ಮಣಿಪಾಲದಿಂದ ಹೊರಟ ಅಂಬುಲೆನ್ಸ್‌ಗೆ ಬೆಂಗಳೂರು ಮುಟ್ಟುವವರೆಗೆ ಯಾವುದೆ ಟ್ರಾಫಿಕ್ ಸಮಸ್ಯೆ ಉಂಟಾಗದಂತೆ ಸಾರ್ವಜನಿಕರು, ವಾಹನ ಸಾವಾರರು ದಾರಿ ಮಾಡಿಕೊಟ್ಟರು, ಅಲ್ಲಲ್ಲಿ ಪೊಲೀಸರು ನಿಂತು ಜಿರೋ ಟ್ರಾಫಿಕ್‌ಗೆ ಸಹಕರಿಸಿದರು. ಅಂಬ್ಯುಲೆನ್ಸ್ ಬೆಳ್ತಂಗಡಿ ತಾಲೂಕಿನ ನಾರಾವಿ, ಕುತ್ಲೂರು, ಅಳದಂಗಡಿ, ಗುರುವಾಯನಕೆರೆ, ಬೆಳ್ತಂಗಡಿ, ಉಜಿರೆ,

ಸೋಮಂತಡ್ಕ, ಮುಂಡಾಜೆ, ಕಕ್ಕಿಂಜೆ, ಚಾರ್ಮಾಡಿ ಮೂಲಕ ಮೂಡಿಗೆರೆಗೆ ತಲುಪುವರೆಗೆ ವಾಹನ ಸವರಾರು, ಸಾರ್ವಜನಿಕರು, ಪೊಲೀಸರು ಪೂರ್ಣ ಸಹಕಾರ ನೀಡಿದರು. ಮಣಿಪಾಲದಿಂದ ಬೆಂಗಳೂರಿಗೆ ಮಗುವಿನ ಚಿಕಿತ್ಸೆಗೆ ಕರೆದೊಯ್ಯುವ ಬಗ್ಗೆ ನಿನ್ನೆಯಿಂದಲೇ ವಾಟ್ಸಫ್‌ನಲ್ಲಿ ಮಾಹಿತಿ ಹಾಕಿ ಸಾರ್ವಜನಿಕರ ಹಾಗೂ ವಾಹನ ಚಾಲಕರ ಸಹಕಾರವನ್ನು ಕೋರಲಾಗಿತ್ತು.

Related posts

ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಿ ವೈ ವಿಜಯೇಂದ್ರರವರಿಗೆ ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

Suddi Udaya

ತಾಲೂಕಿನ ವಿವಿಧ ರಸ್ತೆ ಅಭಿವೃದ್ಧಿಗೆ ರೂ.2.00 ಕೋಟಿ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಪ್ರಯುಕ್ತ “ ಸ್ವಚ್ಛ ಭಾರತ ದಿನ ” ವಿಶೇಷ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪಿ.ಯು ಕಾಲೇಜಿಗೆ ಶೇ.93 ಫಲಿತಾಂಶ

Suddi Udaya

ಶ್ರೀ ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಉಜಿರೆಯಲ್ಲಿ ಭವ್ಯ ಸ್ವಾಗತ: ಶ್ರೀಗಳಿಂದ ಜನಾರ್ದನ ದೇವರ ದರ್ಶನ,ಸ್ವಾಮೀಜಿಯವರಿಗೆ ಪೌರ ಸನ್ಮಾನ: ಕೇರಳ ಶೈಲಿಯ ಚಂಡೆ ವಾದನ, ವಯೊಲಿನ್, 22 ತಂಡಗಳಿಂದ ಭಜನೆ, ಸ್ಯಾಕ್ಸೋಫೋನ್ ವಾದನದೊಂದಿಗೆ ಮೆರವಣಿಗೆ

Suddi Udaya

ಶಿಬಾಜೆ: ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡುಪ್ರಾಣಿಗಳ ಬೇಟೆಗೆ ಯತ್ನ, ಅರಣ್ಯ ಇಲಾಖೆ ಅಧಿಕಾರಿಗಳಿಂದ ಮೂವರು ಆರೋಪಿಗಳ ಬಂಧನ

Suddi Udaya
error: Content is protected !!