July 23, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಣಿಪಾಲ ಕೆಎಂಸಿಯಿಂದ ಬೆಂಗಳೂರಿನ ಜಯದೇವಆಸ್ಪತ್ರೆಗೆ ಮಗು ವೃಂದಳನ್ನು ತುರ್ತು ಚಿಕಿತ್ಸೆಗೆ ಕರೆದೊಯ್ದ ಈಶ್ವರ್ ಮಲ್ಪೆ ಆಂಬುಲೆನ್ಸ್- ಜಿರೋ ಟ್ರಾಫಿಕ್‌ಗೆ ಸಹಕರಿಸಿದ ಸಾರ್ವಜನಿಕರು, ವಾಹನ ಸವಾರರು ಹಾಗೂ ಪೊಲೀಸರು

ಬೆಳ್ತಂಗಡಿ: ಮಣಿಪಾಲ ಕೆಎಂಸಿ ಆಸ್ಪತ್ರೆಯಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ತುರ್ತು ಚಿಕಿತ್ಸೆಗಾಗಿ ಜಿರೋ ಟ್ರಾಫಿಕ್ ಮೂಲಕ ೬ ತಿಂಗಳ ಮಗು ವೃಂದಳನ್ನು ಕರೆದೊಯ್ಯಲಾಯಿತು. ಖ್ಯಾತ ಮುಳುಗು ತಜ್ಞ, ಸಾಮಾಜ ಸೇವಕ ಈಶ್ವರ್ ಮಲ್ಪೆ ಅವರ ಆಂಬುಲೆನ್ಸ್ ಮೂಲಕ ಮಗುವನ್ನು ಉಚಿತವಾಗಿ ಚಿಕಿತ್ಸೆಗೆ ಕರೆದೊಯ್ಯಲಾಯಿತು.

ಮಣಿಪಾಲದಿಂದ ಹಿರಿಯಡ್ಕ, ಕಾರ್ಕಳ, ಬಜಗೋಳಿ, ಗುರುವಾಯನಕೆರೆ,ಬೆಳ್ತಂಗಡಿ, ಉಜಿರೆ, ಚಾರ್ಮಾಡಿ,. ಮೂಡಿಗೆರೆ, ಬೆಲೂರು, ಹಾಸನ, ಚನ್ನರಾಯಪಟ್ಣ, ಬೆಳ್ಳೂರು ಕ್ರಾಸ್, ನೆಲಮಂಗಲ ಮೂಲಕ ಜಯದೇವ ಆಸ್ಪತ್ರೆಗೆ ಕರೆಯದೊಯ್ಯಲಾಗುತ್ತಿದೆ.

ಮಣಿಪಾಲದಿಂದ ಹೊರಟ ಅಂಬುಲೆನ್ಸ್‌ಗೆ ಬೆಂಗಳೂರು ಮುಟ್ಟುವವರೆಗೆ ಯಾವುದೆ ಟ್ರಾಫಿಕ್ ಸಮಸ್ಯೆ ಉಂಟಾಗದಂತೆ ಸಾರ್ವಜನಿಕರು, ವಾಹನ ಸಾವಾರರು ದಾರಿ ಮಾಡಿಕೊಟ್ಟರು, ಅಲ್ಲಲ್ಲಿ ಪೊಲೀಸರು ನಿಂತು ಜಿರೋ ಟ್ರಾಫಿಕ್‌ಗೆ ಸಹಕರಿಸಿದರು. ಅಂಬ್ಯುಲೆನ್ಸ್ ಬೆಳ್ತಂಗಡಿ ತಾಲೂಕಿನ ನಾರಾವಿ, ಕುತ್ಲೂರು, ಅಳದಂಗಡಿ, ಗುರುವಾಯನಕೆರೆ, ಬೆಳ್ತಂಗಡಿ, ಉಜಿರೆ,

ಸೋಮಂತಡ್ಕ, ಮುಂಡಾಜೆ, ಕಕ್ಕಿಂಜೆ, ಚಾರ್ಮಾಡಿ ಮೂಲಕ ಮೂಡಿಗೆರೆಗೆ ತಲುಪುವರೆಗೆ ವಾಹನ ಸವರಾರು, ಸಾರ್ವಜನಿಕರು, ಪೊಲೀಸರು ಪೂರ್ಣ ಸಹಕಾರ ನೀಡಿದರು. ಮಣಿಪಾಲದಿಂದ ಬೆಂಗಳೂರಿಗೆ ಮಗುವಿನ ಚಿಕಿತ್ಸೆಗೆ ಕರೆದೊಯ್ಯುವ ಬಗ್ಗೆ ನಿನ್ನೆಯಿಂದಲೇ ವಾಟ್ಸಫ್‌ನಲ್ಲಿ ಮಾಹಿತಿ ಹಾಕಿ ಸಾರ್ವಜನಿಕರ ಹಾಗೂ ವಾಹನ ಚಾಲಕರ ಸಹಕಾರವನ್ನು ಕೋರಲಾಗಿತ್ತು.

Related posts

ಉಜಿರೆ: ತಾಲೂಕು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಾಮೂಹಿಕ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ

Suddi Udaya

ಉಜಿರೆ : ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಡಿಜಿಟಲ್ ಗ್ರಂಥಾಲಯಕ್ಕೆ ಚಾಲನೆ

Suddi Udaya

ಗೇರುಕಟ್ಟೆ ಬಾಲಕನ ಅಸಹಜ ಸಾವು: ವಿ.ಹಿಂ.ಪ ದಿಂದ ನಾಳ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

Suddi Udaya

ಟೆಲಿಗ್ರಾಮ್‌ ಆಪ್‌ ಮೂಲಕ ಹಣ ವರ್ಗಾಹಿಸಿ ಮೋಸ: ಕುವೆಟ್ಟು ನಿವಾಸಿ ನುಪೈಲಾ ರಿಗೆ ರೂ. 6.95 ಲಕ್ಷ ವಂಚನೆ

Suddi Udaya

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿ ವತಿಯಿಂದ ಆರೋಗ್ಯ ನಿಧಿ ವಿತರಣೆ

Suddi Udaya
error: Content is protected !!