23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಉಜಿರೆ ಲಕ್ಷ್ಮೀ ಜನಾರ್ದನ ಹಾಗೂ ಶ್ರೀ ಉಮಾಮಹೇಶ್ವರ ಸಾನಿಧ್ಯದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ನಾಗದೇವರ ಶಿಲಾ ಪ್ರತಿಷ್ಠೆ ಹಾಗೂ ಶ್ರೀ ಪಂಜುರ್ಲಿ ದೈವದ ಪ್ರತಿಷ್ಠಾ ಮಹೋತ್ಸವ ಮತ್ತು ಶ್ರೀ ಲಕ್ಷ್ಮೀ ಜನಾರ್ದನ ಹಾಗೂ ಶ್ರೀ ಉಮಾಮಹೇಶ್ವರ ದೇವರ ಗರ್ಭಗುಡಿಯ ಶಿಲಾನ್ಯಾಸ

ಉಜಿರೆ: ಉಜಿರೆ ಪೆರ್ಲ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ವತಿಯಿಂದ ಬ್ರಹ್ಮಶ್ರೀ ವೇ| ಮೂ| ನೀಲೇಶ್ವರ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಶರತ್‌ಕೃಷ್ಣ ಪಡ್ವೆಟ್ನಾಯರ ಉಪಸ್ಥಿತಿಯಲ್ಲಿ ಶ್ರೀ ಲಕ್ಷ್ಮೀಜನಾರ್ದನ ಹಾಗೂ ಶ್ರೀ ಉಮಾಮಹೇಶ್ವರ ಸಾನಿಧ್ಯದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ನಾಗದೇವರ ಶಿಲಾ ಪ್ರತಿಷ್ಠೆ ಮತ್ತು ಶ್ರೀ ಪಂಜುರ್ಲಿ ದೈವದ ಪ್ರತಿಷ್ಠಾ ಮಹೋತ್ಸವ ಶ್ರೀ ಲಕ್ಷ್ಮೀ ಜನಾರ್ದನ ಮತ್ತು ಶ್ರೀ ಉಮಾಮಹೇಶ್ವರ ದೇವರ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮವು ಜ.2ರಂದು ನಡೆಯಿತು.

ಬೆಳಗ್ಗೆ ಗಣಪತಿ ಹೋಮದಿಂದ ಪ್ರಾರಂಭಿಸಿ ವಿವಿಧ ಹೋಮ-ಹವನ, ಶ್ರೀ ನಾಗ ದೇವರ ಬಿಂಬ ಪ್ರತಿಷ್ಠೆ, ಪಂಜುರ್ಲಿ ದೈವದ ಪದ್ಮಶಿಲಾ ಪ್ರತಿಷ್ಠಾಪನೆ, ಶ್ರೀ ಲಕ್ಷ್ಮೀ ಜನಾರ್ದನ ಮತ್ತು ಶ್ರೀ ಉಮಾಮಹೇಶ್ವರ ದೇವರ ಗರ್ಭಗುಡಿಯ ಶಿಲಾನ್ಯಾಸ ನಡೆಯಿತು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಪ್ರತಾಪ್‌ಸಿಂಹ ನಾಯಕ್, ಶ್ರೀಲಕ್ಷ್ಮೀ ಜನಾರ್ದನ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರವಿಕುಮಾರ್ ಬರಮೇಲು, ಉಜಿರೆ ಗ್ರಾ.ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್, ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಊರಿನ ಭಕ್ತರು ಉಪಸ್ಥಿತರಿದ್ದರು.

Related posts

ಭೀಕರ ಮಳೆಗೆ ನಾವೂರು ಪೂವಪ್ಪ ಗೌಡ ರವರ ಮನೆಯ ಹಿಂಭಾಗ ಗುಡ್ಡ ಕುಸಿತ: ಅಪಾರ ಹಾನಿ

Suddi Udaya

ಓಡಿಲ್ನಾಳ ಸ.ಉ.ಪ್ರಾ. ಶಾಲಾ ವಿದ್ಯಾರ್ಥಿ ಮಂತ್ರಿಮಂಡಲ ರಚನೆ

Suddi Udaya

ಪಟ್ರಮೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಕಣಿಯೂರು ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆ ಸಮಿತಿ ಘಟಕದಿಂದ ಬಂದಾರು ಸ.ಹಿ.ಪ್ರಾ. ಶಾಲೆಯಲ್ಲಿ ಶ್ರಮದಾನ

Suddi Udaya

ಬೆಳಾಲು: ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ: ಚುನಾವಣೆ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಬಿಗಿ : 24 ಗಂಟೆಯೂ ಸಂಚರಿಸುವ ವಾಹನಗಳ ಪರಿಶೀಲನೆ

Suddi Udaya
error: Content is protected !!