23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು: ಆದಿಪೂಜಿತ ಸಿದ್ದಿವಿನಾಯಕ ಕನ್ನಡ ಭಕ್ತಿಗೀತೆ ಆಡಿಯೋ ಬಿಡುಗಡೆ

ಬಂದಾರು: ಬಂದಾರು ಗ್ರಾಮದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಆದಿಪೂಜಿತ ಸಿದ್ದಿವಿನಾಯಕ ಕನ್ನಡ ಭಕ್ತಿಗೀತೆ ಆಡಿಯೋ ಬಿಡುಗಡೆ ಜ.2ರಂದು ನಡೆಯಿತು.

ಈ ಸಂದರ್ಭದಲ್ಲಿ ಪ್ರಗತಿಪರ ಕೃಷಿಕರಾದ ಧರ್ಣಪ್ಪ ಗೌಡ ಅಂಡಿಲ, ಸೀತಾರಾಮ ಶೆಟ್ಟಿ ಕೆಂಬರ್ಜೆ, ಉದ್ಯಮಿ ರೈತಬಂಧು ಆಹಾರೋಧ್ಯಮ ಮಾಲಕರಾದ ಶಿವಶಂಕರ ನಾಯಕ್, ಬ್ರಹ್ಮಕಲಶೋತ್ಸವ ಪ್ರಧಾನ ಸಂಚಾಲಕ ಬಾಲಕೃಷ್ಣ ಪೂಜಾರಿ ಬಜಗುತ್ತು, ಅಧ್ಯಕ್ಷ ಮಹಾಬಲ ಗೌಡ, ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಪರಪ್ಪಾದೆ, ಕೋಶಾಧಿಕಾರಿ ಕೇಶವ ಕೊಂಗುಜೆ, ಆಡಳಿತ ಮಂಡಳಿ ಅಧ್ಯಕ್ಷ ರಮೇಶ್ ಗೌಡ, ಅರ್ಚಕ ಅನಂತರಾಮ ಶಬರಾಯ, ಅನುವಂಶೀಯ ಆಡಳಿಯ ಮೊಕ್ತೇಸರ ಕುಕ್ಕಪ್ಪ ಗೌಡ, ಜೀರ್ಣೋದ್ದಾರ ಸಮಿತಿ ಮಾಜಿ ಅಧ್ಯಕ್ಷ ಆದಪ್ಪ ಗೌಡ, ಆಡಳಿತ ಮಂಡಳಿ ಕಾರ್ಯದರ್ಶಿ ಉಮೇಶ್ ಗೌಡ ಉಪಸ್ಥಿತರಿದ್ದರು.

ಗಿರೀಶ್ ಗೌಡ ನಡ ಸಾಹಿತ್ಯ, ಸ್ವಾತಿ ಗೌಡ ನಡ ಗಾಯನ, ನಿತಿನ್ ಕೋಟ್ಯಾನ್ ಉಜಿರೆ ಪ್ರಚಾರ ಕಲೆ ಮತ್ತು ಸಂಕಲನ, ದಿನೇಶ್ ಗೌಡ ಅಡ್ಡಾರು ಸಹಕಾರದಲ್ಲಿ ಆಡಿಯೋ ಮೂಡಿಬಂದಿರುತ್ತದೆ.

ಆಡಳಿತ ಮಂಡಳಿಯ, ಬ್ರಹ್ಮಕಲಶೋತ್ಸವ ಸಮಿತಿಯ, ಎಲ್ಲಾ ಉಪಸಮಿತಿಯ ಸಂಚಾಲಕರು, ಸಹಸಂಚಾಲಕರು, ಸರ್ವ ಸದಸ್ಯರು, ಉಪಸ್ಥಿತರಿದ್ದರು. ಬ್ರಹ್ಮಕಲಶೋತ್ಸವ ಜೊತೆ ಕಾರ್ಯದರ್ಶಿ ಸತೀಶ್ ಬಾಲಂಪಾಡಿ ಕಾರ್ಯಕ್ರಮ ನಿರ್ವಹಿಸಿದರು.

Related posts

ಪಾರ್ಶ್ವ ವಾಯು ಸಮಸ್ಯೆಯಿಂದ ಬಳಲುತ್ತಿರುವ ಮಡಂತ್ಯಾರಿನ ಉಮೇಶ್ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಶಿಕ್ಷಣ ಕ್ಷೇತ್ರದ ಅಪೂರ್ವ ಸಾಧಕ: ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಅತ್ಯುತ್ತಮ ಯುವ ಸಾಧಕ ಪ್ರಶಸ್ತಿ ಪ್ರದಾನ

Suddi Udaya

ಬೆಳಾಲು ಪೆರಿಯಡ್ಕ ಶಾಲಾ ಮುಖ್ಯೋಪಾಧ್ಯಾಯಿನಿ ವಿಜಯ ಅವರಿಗೆ ಬೀಳ್ಕೊಡುಗೆ ಸಮಾರಂಭ: ಶಾಲೆಯ ಪ್ರಗತಿಗೆ ಶಿಕ್ಷಕಿ ವಿಜಯರವರ ಕೊಡುಗೆ ಅಪಾರ: ಮೋಹನ್ ಕುಮಾರ್

Suddi Udaya

ಕುಕ್ಕಾವು ಕೊಪ್ಪಂದಗುಂಡಿಯಲ್ಲಿ ರಸ್ತೆಗೆ ಬಿದ್ದ ಮರ: ದ್ವಿಚಕ್ರ ಸವಾರರಿಗೆ ಗಾಯ

Suddi Udaya

ಪೆರಿಂಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಶಶಿಪ್ರಭಾ ಬಿ ಅವರಿಗೆ ನಿವೃತ್ತಿ

Suddi Udaya

ಜೆ.ಇ.ಇ.(ಬಿ.ಆರ್ಕ್) ಫಲಿತಾಂಶ ಪ್ರಕಟ: ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya
error: Content is protected !!